ನಾನು ಸಣ್ಣವಳಾಗಿದ್ದಾಗಿಂದಾನೂ, ನನಗೆ ನೆನಪಿರೋವಾಗ್ಲಿಂದಾನೂ, ಕರೆಂಟು ಹೋದಾಗ ಪುಸ್ತಕಗಳನ್ನು ಮಡಚಿಟ್ಟು ಅಪ್ಪ ಅಮ್ಮನ ಜೊತೆಗೆ ಬಂದು ಕೂರ್ತಿದ್ವಿ(ನಾನು,ನನ್ನ ತಂಗಿ). ಆಗ ಅಪ್ಪ ತಮ್ಮ ನೆನಪಿನ ಬುಟ್ಟಿಯಿಂದ ಊರಿನ ಜನರ ಜೀವನದ ಘಟನೆಗಳನ್ನ, ಕತೆಗಳನ್ನ, ಒಂದೊಂದಾಗಿ ಹೆಕ್ಕಿ ಹೇಳೋರು. ಅಥವಾ ಈಸೋಪನಾ ನೀತಿ ಕತೆಗಳೋ, ಪಂಚತಂತ್ರದ ಕತೆಗಳೋ ನೀತಿಚಿಂತಾಮಣಿಯ ಕತೆಗಳನ್ನೋ ಹೇಳೋರು....ಇಲ್ಲವೇ ಭಗವದ್ ಗೀತೆ, ಶ್ಲೋಕಗಳು, ಮುಕುಂದ ಮಾಲೆ ಬಾಯಿಪಾಠ ಮಾಡಿಸೋರು...ನನ್ನ facinate ಮಾಡ್ತಿದಿದ್ದು ನಮ್ಮೂರಿನ ಜನರ ಕತೆಗಳು, ಅವರನ್ನ, ಅವರ ಸ್ವಭಾವಗಳನ್ನ ಅಪ್ಪ analise ಮಾಡ್ತಿದ್ದ ರೀತಿ. ರಥೋತ್ಸವಕ್ಕೋ, ದೀಪಾವಳಿಗೋ, ಗೋಕುಲಷ್ಟಮಿಗೋ, ಇಲ್ಲವೇ ನವರಾತ್ರಿಯ ಪಾರಾಯಣದ ಸಮಯದಲ್ಲೋ... ಊರಿಗೆ ಹೋದಾಗ ಆ ಜನರನ್ನೆಲ್ಲಾ ನೋಡಿ ಅವರಿಗೆ ಸಂಬಂಧಿಸಿದ ಕತೆಗಳನ್ನ ಜ್ನಾಪಿಸಿಕೊಂಡು ಖುಶಿ ಪಡ್ತಿನಿ...
ಈಗೊಂದು ಹೊಸ ಪ್ರಯೊಗ, ನಮ್ಮೂರಿನ ಜನರನ್ನ ಒಬ್ಬೂಬ್ಬರನ್ನೂ ನಾನು ನೋಡಿದ ಹಾಗೆ ನಿಮ್ಮ ಮುಂದೆ ಇಡ್ತೀನಿ. ಅವರಿಗೆ ರಿಲೆಟ್ ಆಗಿರೊ ಪಾಸ್ಟ್ ಸ್ಟೋರೀಸ್ ಇದ್ರೆ ಹೇಳ್ತಿನಿ. ಈ ಕತೆಗಳಲ್ಲಿ ಭೋದನೆ ಇಲ್ಲ, ಏನೋ ಸಂದೆಶ ಇರ್ಲೇಬೇಕು ಅಂತ ಹುಡುಕಬೇಡಿ. ಏನಾದ್ರು ಕಂಡ್ರೆ ಸಂತೋಷ. continous ಆಗಿ ಬರೀತಿನಿ ಅಂತ ಅಲ್ಲ, ಮದ್ಯೆ ಮದ್ಯೆ ಯಾವಾಗ್ಲಾದ್ರು ಬರಿತಿನಿ 'ಅಪ್ಪ ಕಾಣಿಸಿದ ಕತೆಗಳು' ಅಂತ ಕರ್ಯೋಕ್ಕೆ ಖುಶಿ ನಂಗೆ. ನಮ್ಮೂರಿನ ಜನರ ಕತೆ ಇಷ್ಟ ಆಗಬಹುದು ನಿಮಗೆ...
ವೈದೇಚಿತ್ತಿ
1
"ಈ ವೈದೇಹಿಗೆ ಇಷ್ಟು ವಯಸ್ಸಾದರೂ ಇಂಥ ಬುದ್ದಿ ಯಾಕೆ ಅಂತ? ಅವಳಿಗೇನು ಒಡವೆಯಾ? ಸೀರೆಯಾ? ಗೋಪಾಲ ಬಂದು ಪಾಪ ಗೊಳೋ ಅಂತ ಅತ್ತುಕಂಡ. ತಿಂಗಳಿಗೆ ಐನೂರು ರುಪಾಯಿ ಕೊಡ್ತಾಳಂತೆ ಕಣೋ ನಾವು ಕೆಲ್ಸದವರಿಗೂ ಅಷ್ಟು ಕಡಿಮೆ ಕೊಡೋಲ್ಲ. ಅದೇನು ಜಿಗ್ಗತನವೋ... ಮಗಂಗೆ ಕೊಟ್ರೆ ಏನಾದ್ರು ಕಳ್ಕತಾಳ? ಅಂಥದ್ರಲ್ಲಿ ಫೋನ್ ಬಿಲ್ಲೂ ನೀನೇ ಕಟ್ಟು ಅಂತಾಳಂತೆ. ಇನ್ನೇನ್ ಉಳಿಯುತ್ತೆ ಇವ್ನ ಕೈಯಲ್ಲಿ ಪಾಪ? ಆಕಡೀಗೆ ತೋಟ ತೋಟ ಅಂತ ಹಿಂದಿನಿಂದ್ಲೂ ಅಲ್ಕಂಡು ಪೌರೋಹಿತ್ಯಾನೂ ಕಲೀಲಿಲ್ಲ, ಓದ್ಲೂ ಇಲ್ಲ, ಈಕಡೀಗೆ ತೋಟದಲ್ಲಿ ಎಷ್ಟು ಗೈದ್ರೂ ಉಪ್ಯೋಗ್ವಿಲ್ಲ... ಸಾಲದ್ದಕ್ಕೆ ಮೂರುಮೂರು ಮಕ್ಕಳು ಬೇರೆ... ಊಟಕ್ ಕಷ್ಟವಿಲ್ಲ ಅನ್ನೋದ್ ಬಿಟ್ರೆ ಕೈಯಲ್ಲಿ ನಾಲ್ಕು ಕಾಸೂ ಆಡಂಗಿಲ್ಲ..... ನಿ ಏನೇ ಹೇಳು ಶ್ರೀನಿವಾಸ ಅವ್ಳಿಗೆ ತಲೆ ಕೆಟ್ಟಿರೋದಂತೂ ಸತ್ಯವೇಯ.” ಅಂತ ಅಜ್ಜಿ ಬಿಸಿ ಬಿಸಿ ಕಾವಲಿ ಮೇಲೆ ದೊಸೆ ಹಾಕ್ತಾ ಹೇಳ್ತಿದ್ರೆ, ಪುಟ್ಟಿ "ಅದೇ ಆ ಮುಂಬಾವಿ ಮನೆ ವೈದೇಚಿತ್ತಿನ?" ಅಂದ್ಲು ದೋಸೆ ನುಂಗುತ್ತಾ "ಹೂಂ...." ಅಂದ ಅಪ್ಪ "ಇನ್ನೂ ತುಂಬ ಚಿಕ್ಕವರು ನೀವು ದೊಡ್ಡವರ ವಿಷಯಾನೆಲ್ಲಾ ಮಾತಾಡ್ ಬಾರ್ದು" ಅಂದ್ರು.
2
ವೈದೇಚಿತ್ತಿ ಪೂರ್ತಿ ಹೆಸರು ವೈದೇಹಿ ಅಂತ ಅವರು ಈಗ ಇರೊದನ್ನ ನೋಡಿದ್ರೆ ಒಂದು ಕಾಲಕ್ಕೆ ನೋಡೋಕ್ಕೆ ಅಷ್ಟು ಲಕ್ಷಣ ಇಲ್ಲ್ದಿದ್ರೂ ತೆಳ್ಳಗೆ ಗೋಧಿಬಣ್ಣಕ್ಕೆ ಇದ್ದಿರಬಹುದು. ಈಗ ಮುಖದಲ್ಲಿ ಎಂಥದ್ರದ್ದೋ ಕಲೆಗಳು ಇವೆ. ಇನ್ನೂ ಸ್ವಲ್ಪ ದಪ್ಪ ಇದ್ದಿದ್ದ್ರೆ ಅವರ ವಯಸ್ಸಿಗೆ ಒಪ್ಪುತ್ತಿತ್ತು. ಬೋಳಿಸಿದ ತಲೇನ ಕೆಂಪು ಸೀರೆಯಲ್ಲಿ ಮುಚ್ಚಿಕೊಂಡಿರ್ತಾರೆ. ವೈದೇಚಿತ್ತಿ ಈಗ ಇರೋ ಮನೆ ಮುಂದೆ ಭಾವಿ ಇರೋದ್ರಿಂದ, ಅವರ ಮನೇನ ಮುಂಭಾವಿ ಮನೆ ಅಂತ ಕರೀತಾರೆ. ಆದ್ರೆ ಹಿಂದೆ ಅವ್ರು ನಮ್ಮ ತೊಟ್ಟಿ ಮನೇಲೇ ಇದ್ರಂತೆ. ಈ ವೈದೇಚಿತ್ತಿನ ನಾವೆಲ್ಲಾ ವೈದೇಚಿತ್ತಿ ಅಂತ ಯಾಕೆ ಕರೀತಿವಿ ಅಂತ ಇತಿಹಾಸ ಕೆದಕಿದಾಗ ತಿಳಿಯೋದು ಇಷ್ಟು...... ಹಿಂದೆ ಅಂದ್ರೆ ಈಗಿಂದ ಒಂದು ನಲವತ್ತು ಐವತ್ತು ವರ್ಷದ ಹಿಂದೆ ಈಗಿನ ನಮ್ಮ ಚತ್ರದಂತಹಾ ದೊಡ್ಡ ಮನೇಲಿ ಈಗಿನ ತರ ಬರೀ ಎರಡೇ ಸಂಸಾರಗಳಿರಲಿಲ್ಲವಂತೆ ಇನ್ನೂ ಎರೆಡು ಸಂಸಾರ ಇತ್ತಂತೆ. ವೈದೇಚಿತ್ತಿಯವರದೂ ಅದರಲ್ಲಿ ಒಂದು. ಈ ತೊಟ್ಟಿ ಮನೆಗೆ ವೈದೇಚಿತ್ತಿ ಮದುವೆ ಆಗಿ ಬಂದಾಗ ಆ ಮನೆಯ ಸೊಸೆಯಂದಿರಲ್ಲಿ ಅವರೇ ಚಿಕ್ಕವರಾದ್ದರಿಂದ ಹಾಗೂ ಆ ತೊಟ್ಟಿಯವರೆಲ್ಲಾ ಒಂದೇ ಗೋತ್ರದವರಾದ್ದರಿಂದ ವೈದೇಹಿ ಮನೆಯ ಮಕ್ಕಳಿಗೆ ವೈದೇಹಿಚಿತ್ತಿಯಾಗಿ ಕೊನೆಗೆ ವೈದೇಚಿತ್ತಿ ಆದ್ಲು.
ವೈದೇಚಿತ್ತಿಗೆ ಗಂಡ ಅನ್ನೋರು ಇದ್ದಿರಬಹುದು ಅಂತ ನನಗನ್ನಿಸಿದ್ದೇ ತೀರ ಇತ್ತೀಚೆಗೆ. ಅವರು ಆ ಕೆಂಪು ಮಡಿ ಬಟ್ಟೆಯಲ್ಲಿ ಹುಟ್ಟುಬಟ್ಟೆನೋ ಅನ್ನೋಷ್ಟು ಸಹಜವಾಗಿ ಕಾಣ್ತಿದ್ರು. ಆದ್ರೆ ಅವರಿಗೆ ಈಗ ಮಕ್ಕಳಿವೆ ಹಾಗೂ ಈಗ ಅವರು ವಿಧವೆ ಅನ್ನೋ ಎರೆಡು ಅಂಶಗಳಿಂದ (ಈ ಎರೆಡನೇ ಅಂಶದಿಂದ ಅವ್ರಿಗೇನು ಬೇಜಾರಾದಂಗೆ ಕಾಣ್ಸಲ್ಲ) ಅವರಿಗೆ ಗಂಡ ಇದ್ದಿದ್ದಂತೂ ನಿಶ್ಚಯ. ವೈದೇಚಿತ್ತಿ ಗಂಡನಿಗೆ ಆ ಊರಿನ ಎಲ್ಲರಂತೆ ಅಡಿಕೆ ತೋಟ ಇತ್ತು. ಸ್ವಲ್ಪ ಕಮ್ಮೀನೇ ಇತ್ತು ಅರ್ಧ ಎಕರೆ. ಜೊತೆಗೆ ಪೌರೋಹಿತ್ಯಾನೂ ಮಾಡ್ತಿದ್ರು. ಮೂರು ಜನ ಮಕ್ಕಳು ಎರೆಡು ಹೆಣ್ಣು ಒಂದು ಗಂಡು. ದೊಡ್ಡ ಹುಡುಗಿ ಶ್ಯಾಮಲಾನ ಆ ಕಾಲಕ್ಕೇ ಡೆಲ್ಲಿಲಿದ್ದ ಹುಡುಗನಿಗೆ ಕೊಟ್ಟು ಮದುವೆ ಮಾಡಿದ್ರು. "ಅವ್ನಿಗೆ ನಮ್ಮ ಕಮಲನ್ನ ಕೊಡಣ ಅಂತಿದ್ವಿ ಕಣೇ ನಿಮ್ಮ ತಾತ ಡೆಲ್ಲಿ ತುಂಬ ದೂರ ಕಷ್ಟ ಸುಖ ಅಂದ್ರೆ ನೋಡೋಕ್ಕಾಗಲ್ಲ ಬೇಡ ಅಂದ್ರು. ಅವ್ಳು ಹತ್ರದಲ್ಲೇ ಇದ್ದು ಸುಖ ಸುರ್ಕೊಂಡಿದ್ದು ಗೊತ್ತಿದ್ಯಲ್ಲ." ಅಂತ ಒಂದು ಸತಿ ನಿಟ್ಟುಸಿರಿಟ್ಟಿದ್ದರು ಅಜ್ಜಿ. ಎರಡನೇ ಮಗಳು ವಿಮಲನ್ನ ಹತ್ತಿರದ ಊರಿಗೇ ಕೊಟ್ಟಿದ್ದರು. ಆ ಆಂಟಿ ಎಷ್ಟು ಬಿಗಿಯಾದ ಬ್ಲೌಸ್ ಹಾಕ್ತಾರೆ ಅಂದ್ರೆ ಇನ್ನೇನು ಹರಿದೇ ಹೋಗುತ್ತೇನೋ ಅನ್ಸುತ್ತೆ... ಅವರನ್ನ ನೋಡಿದಾಗಲೆಲ್ಲಾ ನನಗೇ ಉಸಿರುಕಟ್ಟಿದಂಗೆ ತೋಳುಬಿಗಿದಹಾಗಾಗುತ್ತೆ. ಇನ್ನು ಉಳಿದವರು ಗೋಪಾಲ ಅವರಿಗೆ ಪಕ್ಕದ ಹಳ್ಳಿಯಿಂದ ಹೆಣ್ಣು ತಂದಿದಾರೆ ಆ ಆಂಟಿ ಮನೆ ಹೊರಗೆ ಕಾಲೇ ಹಾಕೋಲ್ಲ.
3
ವೈದೆಚಿತ್ತಿಗೆ ನಾನ್ಯಾರು ನನ್ನ ತಂಗಿ ಯಾರು ಅಂತ ಯಾವಾಗಲು ಗೊಂದಲವೇ ಅದೇನು ನಿಜವಾಗಲೂ ಗೊತ್ತಗಲ್ವೋ ಅಥ್ವಾ ಬೇಕ್ಬೇಕು ಅಂತ ಹಾಗೆ ಮಾಡ್ತಾರೋ ಗೊತ್ತಿಲ್ಲ. ನಾವು ನಾನು ನನ್ನ ತಂಗಿ ಪ್ರತಿ ಸಲ ಊರಿಗೆ ಹೋದಾಗಲೂ ನಮ್ಮಿಬ್ಬರಲ್ಲಿ ಅವರಿಗೆ ಯಾರು ಮೊದಲು ಸಿಕ್ಕಿದರೂ ಅವರು ಕೇಳೋದು ಒಂದೆ ರೀತಿಯ ಪ್ರಶ್ನೆಗಳು. ಉದಾಹರಣೆಗೆ ನಾನು ಸಿಕ್ಕಿದೆ ಅನ್ನಿ....
ವೈದೇಚಿತ್ತಿ: ನೀನು ಶ್ರೀನಿವಾಸನ ಮಗಳಲ್ಲವೇನೆ, ಯಾವಾಗ ಬಂದ್ರೆ? ನೀನು ಅಕ್ಕಾನೋ? ತಂಗಿಯೋ?
ನಾನು : ನಾನು ಅಕ್ಕ ತಂಗಿ ಒಳಗಡೆ ಇದಾಳೆ ನೀವು ಹೇಗಿದಿರ ವೈದೇಚಿತ್ತಿ?
ವೈದೇಚಿತ್ತಿ: ನಾನು ಚೆನ್ನಾಗಿದಿನಮ್ಮ..... ನಿನ್ನ ಅಮ್ಮ ಬ೦ದಿದಾಳೋ ? ಎಷ್ಟು ದಿನ ಇರ್ತಿರ?
ನಾನು : ಹೊ೦.... ಅಮ್ಮಾನು ಬ೦ದಿದಳೆ ರಥೋತ್ಸವ ಮುಗಿಸಿಕೊಂಡು ಹೊರ್ಡದು ಅಂತ.....
ವೈದೇಚಿತ್ತಿ: ಹಂಗಾದ್ರೆ ಇನ್ನು ನಾಲ್ಕೈದು ದಿನ ಇರ್ತಿರ ಅನ್ನಿ. (ದ್ರುಷ್ಟಿ ತೆಗೆಯುತ್ತಾ...) ಎಷ್ಟು ಚೆನ್ನಾಗಿದಿಯೇ ನನ್ನ ಕಂದ ಬೆಳ್ಳಿಗುಂಡು ಬೆಳ್ಳಿ ಗುಂಡು
ಈ ಬೆಳ್ಳಿ ಗುಂಡು ಅನ್ನೋದು ಒಂದು ಎಡವಟ್ಟು ಪದ. ನನ್ನ ಹಾಗೆ ಯಾರಾದರೂ ಕರೆದ್ರೆ ತುಂಬ ಗೊಂದಲ ಆಗುತ್ತೆ...ಯಾಕ್ ಗೊತ್ತ? ಅದರಲ್ಲಿ ಬೆಳ್ಳಿನೂ ಇದೆ ಗುಂಡೂ ಇದೆ, ಬೆಳ್ಳಗಿದಿಯಾ ಅಂತ ಹೊಗಳ್ತಾ ಇದಾರೋ ಅಥವಾ ಗುಂಡಗಿದಿಯಾ ಅಂತ ಆಡ್ಸ್ಕತಾ ಇದಾರೋ ಅಂತ ಗೊತ್ತಾಗದೇ ಸುಮ್ಮನೆ ಮಿಕ ಮಿಕ ಅಂತ ಹಾಗೆ ಕರೆದೋರನ್ನ ನೋಡ್ಕೊತಾ ನಿಂತ್ಕೊಬಿಡ್ತೀನಿ. ಇಂಥ ಎಡವಟ್ಟು ಪದಗಳಿಗೆ ಪ್ರತಿಕ್ರಯಿಸೋದಾದರೂ ಹೇಗೆ........
4
"ಗೋಪಾಲ ನೀನು ಶ್ಯಾಮಲನ ಕೈಲಿ ಹೇಳಿಸಿ ನೋಡು ವೈದೇಚಿತ್ತಿಗೆ ಶ್ಯಾಮಲ ಅಂದ್ರೆ ಸ್ವಲ್ಪ ಹೆಚ್ಚೇ ಪ್ರೀತಿ..." ಅಂತ ಅಪ್ಪ ಗೋಪಾಲ ಮಾಮಂಗೆ ಹೇಳ್ತಿದಿದ್ದು ಕೇಳಿಸ್ತು. ಪಕ್ಕದಲ್ಲಿದ್ದ ಚಿಕ್ಕಪ್ಪ "ಒಳಗಡೆ ಹೋಗಿ ಕಾಫಿ ಮಾಡ್ಸ್ಕಬಾಮ್ಮ" ಅಂದ್ರು. ಅಡುಗೇ ಮನೇಲಿ ಚಿಕ್ಕಮ್ಮ ಇದ್ರು "ಕಾಫಿ ಮಾಡ್ಬೇಕಂತೆ ಗೋಪಾಲ ಮಾಮ ಬಂದಿದಾರೆ ಅಂದೆ." " ಈ ಮನೇಲಿ ಒಂದು ಹಂಡೆಗಟ್ಲೆ ಕಾಫಿ ಮಾಡಿದ್ರೂ ಖಾಲಿಯಾಗೋಗುತ್ತೆ, ನನ್ ಜೀವನವೆಲ್ಲಾ ಕಾಫಿ ಮಾಡೋದ್ರಲ್ಲೇ ಕಳ್ದ್ಹೋಯ್ತು...." ಅಂತ ಚಿಕ್ಕಮ್ಮ ಗೊಣಗುತ್ತಾ ಕಾಫಿಗೆ ನೀರಿಟ್ಟಳು. ಕಾಫಿ ಮಾಡುವುದರ ಬಗ್ಗೆ ಅಮ್ಮ ಮತ್ತು ಚಿಕ್ಕಮ್ಮನಿಗೆ ಇರುವ ಅಸಮಾಧಾನದ ಪರಿಚಯವಿದ್ದ ನನಗೆ ಚಿಕ್ಕಮ್ಮನ ಮಾತುಗಳಿಗಿಂತ ತೊಟ್ಟಿಯಲ್ಲಿ ನಡೆಯುತ್ತಿರುವ ಮಾತುಗಳು ಮುಖ್ಯ ಅನ್ನಿಸಿ ಅಮ್ಮ ಆಗತಾನೆ ಒಗೆದು ತಂದು ಇಟ್ಟಿದ್ದ ಬಟ್ಟೆಗಳನ್ನು ಹಿಂಡಿ ಕೊಡಿಯ ಮೇಲೆ ಒಣಗಿಸುವ ನೆಪದಲ್ಲಿ ತೊಟ್ಟಿಗೆ ಬಂದು ಬಟ್ಟೆ ಹಿಂಡತೊಡಗಿದೆ.ನಾನು ಒಳಗೆ ಹೋಗಿ ಬರುವ ಹೊತ್ತಿಗೆ ಅಪ್ಪ ಮಾತು ಮುಗಿಸಿಯಾಗಿತ್ತು "ನಂಗು ಸಾಕಾಗ್ ಹೋಗಿದೆ ಶ್ರೀನಿವಾಸ ಎಲ್ಲರೂ ಅವಳಿಗೆ ಹೇಳಿದ್ದಾಯ್ತು ಶ್ಯಾಮಲಾನೂ ಹೇಳಿದ್ಲು, ಅವಳ ಮುಂದೆ ಹೂಂ ಹೂಂ.. ಅಂತಾಳೆ ಅವಳು ಮರೆಯಾದ ತಕ್ಷಣ ಅದೇ ರಾಗ ಅದೇ ತಾಳ. ಟವ್ನ್ ನಲ್ಲಿ ಯಾವುದಾದರೂ ಬೇಕರಿಗೆ ಹೋಗಿ ಸೇರ್ಕಳಣ, ಬೇಕರಿ ಇಡೋಕ್ಕಂತು ಭಾಗ್ಯವಿಲ್ಲ ತಿಂಗಳಿಗೆ ಎರೆಡು ಮೂರು ಸಾವ್ರನಾದ್ರೂ ಸಿಗುತ್ತೆ ಅನ್ಕಂಡ್ರೆ ಇಲ್ಲಿ ತೋಟ ನೋಡ್ಕಳೋರ್ಯಾರು? ಅಮ್ಮನ್ನ ಈ ಕೊನೇಗಾಲ್ದಲ್ಲಿ ಬಿಟ್ಟೊಗದ್ ಹ್ಯಾಗೆ? ಈಗ ಊಟಕ್ ಕಷ್ಟ್ವಿಲ್ಲ, ಆಮೇಲೆ ಅದಕ್ಕೂ ಕುತ್ತು ಬಂದ್ರೆ ಏನ್ ಮಾಡದು....?" ಅಷ್ಟು ಹೊತ್ತಿಗೆ ಕಾಫಿ ಬಂತು.. ಒಳಗಡೆ ಗೊಣಗುತ್ತಿದ್ದ ಚಿಕ್ಕಮ್ಮ ಅಷ್ಟೇ ವಿರುದ್ದವಾದ ಶಾಂತ ನಗುಮುಖದಿಂದ ಕಫಿ ತಂದು ಕೊಟ್ಟಳು. ಗೋಪಾಲಮಾಮನ ಮುಖ, ಗಂಟಲು ಕಾಫಿಯ ಹಿತದಿಂದ ತುಂಬಿಕೊಂಡಿತು. ಚಿಕ್ಕಮ್ಮ ಅಧ್ಭುತವಾಗಿ ಕಾಫಿ ಮಾಡ್ತಾಳೆ. ಚಿಕ್ಕಪ್ಪ ದಡಬಡಿಸಿ ಕಾಫಿ ಕುಡಿದು ತಮ್ಮ ಬುಲೆಟ್ಟಿನ ಗುಡು ಗುಡು ಶಭ್ದದೊಂದಿಗೆ ಅಂಗಡಿಗೆ ಹೋದರು.
ನಾನು ಹಿಂಡಿದ ಬಟ್ಟೆಯನ್ನ ಕಷ್ಟಪಟ್ಟು ಕೊಡಿಯಮೇಲೆ ಒಣಗಿಸುತ್ತಿದ್ದೆ ..."ಹೇಳ್ಕಳಕ್ಕೆ ನಾಚಿಕೆ ಯಾಗುತ್ತೆ ಶ್ರೀನಿವಾಸ, ಈಗೀಗ ಬ್ರಾಮ್ಹಣಾರ್ಥಕ್ಕೆ ಯಾರದ್ರು ಕರೀತಾರೇನೋ ಅಂತ ಕಾಯಂಗಾಗೋಗಿದೆ. ತಿಂಗಳಲ್ಲಿ ಒಂದು ನಾಲ್ಕೈದು ಬ್ರಾಮ್ಹಣಾರ್ಥ ಆದ್ರೆ ಕೈಯಲ್ಲಿ ಸ್ವಲ್ಪ ದುಡ್ಡಾಡುತ್ತೆ, ದುರಂತ ನೋಡು ಯಾರೂ ಸಿಗ್ದೆ ಈಗ ನಾನಂಥೋರ್ನೆಲ್ಲಾ ಬ್ರಾಮ್ಹಣಾರ್ಥಕ್ಕೆ ಕರೆಯೋಹಂಗಾಗೋಗಿದೆ. ನನಗೆ ಹೋಗೊಕ್ಕೆ ಎಷ್ಟು ಹಿಂಸೆ ಆಗುತ್ತೆ ಆದ್ರೆ ಹೋಗ್ದೆ ವಿದಿಯಿಲ್ಲ. ಹೆಚ್ಚು ಕಡಿಮೆ ಬ್ಯಾಂಕಿನಲ್ಲಿ ಹೆಚ್ಚು ಕಡಿಮೆ ಅಮ್ಮನ ಹೆಸರಿನಲ್ಲಿ ಮೂರು ಲಕ್ಷ ಇದೆ ಯಾಕ್ ಬೇಕು ಅವ್ಳಿಗೆ ನಂಗ್ ಬೇಡಪ್ಪ ಹೋಗ್ಲಿ ವಿಮ್ಲಂಗಾದ್ರೂ ಕೊಡ್ತಾಳ ಅವ್ಳೂ ಕಷ್ಟದಲ್ಲಿದ್ದಾಳೆ.... ಅಮ್ಮ ಸತ್ರೂ ಆ ಹಣನ ನಾ ಮುಟ್ಟೋಲ್ಲ...ಮೊದಲು ಅಮ್ಮ ಹೀಗಿರ್ಲಿಲ್ವೋ ಅಥವಾ ನಮಗೇ ಅಮ್ಮನ ಗುಣ ಗೊತ್ತಾಗಿದ್ದೇ ಅಪ್ಪ ಸತ್ತ ಮೇಲೆ ಅನ್ಸುತ್ತೆ. ಅಪ್ಪ ಇದ್ದಾಗ ಅಮ್ಮನ್ನ ಕಾರಣವಿಲ್ಲದೇ ಮಾತು ಮಾತಿಗೂ ಬೈದು ಹೀಯಾಳಿಸೋರು, ಅಮ್ಮನ ವ್ಯಕ್ತಿತ್ವ, ಅವಳು ಹೇಗೆ? ಅನ್ನೋದೇ ಗೊತ್ತಿರ್ಲಿಲ್ಲ. ಅಪ್ಪ ಸತ್ತ್ಮೇಲೇನೇ ಅಮ್ಮ ಸ್ವತಂತ್ರವಾಗಿದ್ದು, ಖುಶಿಯಾಗಿದ್ದು. ಅಪ್ಪಂಗೆ ಗಾಳಿ ಹಿಡ್ದು ಹೋದ್ರು ಅಂತಾರೆ ಅಪ್ಪಂಗೆ ಗಾಳಿ ಹಿಡ್ದಿದ್ದೋ, ಇವ್ಳಿಗೇ ಧನ ಪಿಚಾಚಿ ಹಿಡಿತೋ ಗೊತ್ತಿಲ್ಲ..."ಅನ್ನುತ್ತಿದ್ದ್ರು ಗೋಪಾಲ ಮಾಮ....
5
ಅಜ್ಜಿ ಜೊತೆ ಜಗುಲಿ ಮೇಲೆ ಕೂತ್ಕೊಂಡೋ ಅರಂಗಿನಲ್ಲಿ ಕೂತ್ಕೋಂಡೋ "ರಂಗಮಣಿ.... ವಿಶ್ಯ ಕೇಳಿದ್ಯ ಬಿ ಎ ಮೇಷ್ಟ್ರಿಗೆ ಈಗ ಕಿವಿ ಕೇಳಲ್ವಂತೆ....,ರಂಗಮಣೀ ಮೊನ್ನೆ ಆ ಹಾಲುಮಾರೋ ಕರಿಯನ್ ಮಗು ಸತ್ತೋಯ್ತಂತೆ..ಪಾಪ..." ಅಂತಾನೋ "ರಂಗಮಣಿ ನಮ್ಮ ಶ್ಯಾಮಲ ಹಿಂಗಂದ್ಲು, ನಮ್ಮ ಶ್ಯಾಮಲ ದೆಲ್ಲಿಯಿಂದ ಮಿಠಾಯಿ ಕಾಳ್ಸಿದಾಳೆ ತೊಗೋ... ಶ್ಯಾಮ್ಲನ್ನ ಮಕ್ಕ್ಳು ಕ್ಲಾಸ್ನಲ್ಲಿ ಫಸ್ಟ್ ಅಂತೆ, ಶ್ಯಾಮಲನ್ನ ಮೊದ್ಲನೇ ಮಗ ಗರುಡ ಗರುಡ(ಅಂದ್ರೇ ತುಂಬ ಚೆನ್ನಗಿದಾನೆ ಅಂತ)" ಅಂತ ಕೊರೆಯುತ್ತಾ ಕೂರುವ ವೈದೇಚಿತ್ತಿ ಹೀಗೆಲ್ಲಾ ಮಾಡ್ತಾರೆ ಅನ್ಸಲ್ಲ.. ಭೈರಪ್ಪನವರ ಸಾಕ್ಶಿಯಲ್ಲಿ ಬರೊ ಜಿಪುಣ ಮನುಷ್ಯನ ಥರಾನ ಇವರು? ಇವರು ಸತ್ತಾಗ ಗೋಪಲಮಾನೂ ಆ ಕಾದಂಬರಿಯಲ್ಲಿ ಬರೋ ರೀತಿಯಲ್ಲೇ ಮೂರು ಲಕ್ಷಾನ ಇವರ ಹೆಣದ ಜೊತೆ ಸುಡಬಹುದ..??? ಎಂದು ಏನೇನೋ ಅಸಂಭದ್ದವಾಗಿ ಯೋಚಿಸುತ್ತಾ ಜಗುಲಿಯ ಮೇಲೆ ಕೂತಿದ್ದೆ, ನನ್ನ ತಂಗಿಯೂ ಪಕ್ಕದಲ್ಲಿದ್ದಳು ಅದ್ಯಾವುದೋ ಮಾಯೆಯೆಲ್ಲಿ ಮನೆ ಬಾಗಿಲಿನ ಬಳಿ ಪ್ರತ್ಯಕ್ಷವಾದ ವೈದೇಚಿತ್ತಿ "ಶ್ರೀನಿವಾಸನ ಮಕ್ಕಳಲ್ವೇನ್ರೇ ಯಾವಾಗ ಬಂದ್ರಿ... ಇದರಲ್ಲಿ ಅಕ್ಕ ಯಾರು ತಂಗಿ ಯಾರು?" ಅಂದ್ರು....
Wednesday, December 5, 2007
Friday, November 2, 2007
ಗೋಡೆ
1
ನನ್ನ ಬಿಟ್ಟು ಹೋಗ್ತೀಯ ಮೈತ್ರಿ? ನನ್ಗೆ ಭಯ ಆಗ್ತಿದೆ. ನಾನೇನ್ ತಪ್ಪು ಮಾಡಿದೀನಿ? ನೀನು ಹೇಳಿದ ಹಾಗೆ ಕೇಳ್ತೀನಿ, ನೀ ಹೇಳಿದ್ದರ ವಿರುದ್ದ ಏನಾದರೂ ಮಾಡಿದೀನ ಇಲ್ಲಿವರೆಗೂ? ದಯವಿಟ್ಟು ಬಿಟ್ಟು ಹೊಗಬೇಡ ಮೈತ್ರಿ. 'ನಾವು ಒಬ್ಬರಿಗೊಬ್ಬರು ಜೊತೆಯಾಗಿರ್ತೀವಿ ಕಷ್ಟ ಆಗ್ಲಿ, ಸುಖ ಆಗ್ಲಿ.' ಅಂತ ದೇವರ ಮುಂದೆ ಪ್ರಮಾಣ ಮಾಡಿದೀವಿ. ನಂಗೆ ಭಯ ಆಗ್ತಿದೆ, ನನ್ನ ಬಿಟ್ಟು ಹೋಗಬೇಡ... ಅಂತ ಪಕ್ಕದಲ್ಲಿ ಮಲಗಿದ್ದ ನನ್ನ ಗಂಡ ಒಂದೇ ಸಮನೆ ಬಡಬಡಿಸತೊಡಗಿದಾಗ ವ್ರಶಾಂಕ್ ಇವನ ಹತ್ತಿರ ಮಾತಾಡಿದಾನೆ ಅಂತ ಗೊತ್ತಾಯ್ತು..ಉತ್ತರ ಕೊಡೋಕ್ಕೂ ಹಿಂಸೆ ಆಗಿ ಎದ್ದು ಹೊಗಿ ವೆರೆಂಡಾದ ಈಸಿ ಕುರ್ಚಿ ಮೆಲೆ ಕೂತೆ.
ವರೆಂಡಾದ ಕಿಟಕಿಯಿಂದ ಕಾಣುತ್ತಿದ್ದ ಮನೆಯ ಮುಂದಿನ ನಲ್ಲಿಕಾಯಿ ಮರದ ರುಚಿ ಇಲ್ಲದ ಚಿಕ್ಕ ಚಿಕ್ಕ ಕಾಯಿಗಳ ಬಗ್ಗೆ ಏನೂ ಅನ್ನಿಸಲಿಲ್ಲ. ತನ್ನ ಗಂಡನ ಅತೀ ಒಳ್ಳೆಯತನದ, ಪ್ರತಿಯೊಂದಕ್ಕೂ 'ನೀ ಹೇಳಿದ ಹಾಗೆ' ಅನ್ನುವ, ನನ್ನ ಮುಂದೆ ತಾನು ಬುದ್ದಿವಂತ ಅಂತ ತೋರಿಸಿಕೊಳ್ಳಲು ಹೋಗಿ ಪೆಚ್ಚಾಗುವ, ತನ್ನ ಬಸುರಿ ಮಾಡಿದ್ದನ್ನೇ ದೊಡ್ಡ ಸಾಧನೆ ಅನ್ನುವಂತೆ ಆಡಿದ್ದ ಅವನ ಬಗ್ಗೆ ಅಸಹ್ಯ ಆಗುವುದೂ ನಿಂತು ಹೊಗಿತ್ತು. ಎನೂ ಅನ್ನಿಸುವುದಿಲ್ಲ ಅವನ ಬಗ್ಗೆ. ಯಾರ ವ್ಯಕ್ತಿತ್ವವೂ 'ಇಷ್ಟು' ಎಂದು ಅಳೆದು ಮುಗಿಸಿಬಿಡುವಂತೆ ಇರಬಾರದು ಗಟ್ಟಿಯಾಗಬೇಕು- ದೊಡ್ಡದಾಗಬೇಕು- ಅಗಲವಾಗಬೇಕು -ವಿಸ್ತಾರವಾಗಬೇಕು. ಇಲ್ಲವೇ ಚಿಕ್ಕದಾಗಬೇಕು- ಪುಟ್ಟದಾಗಬೇಕು- ಜೊಳ್ಳಾಗಬೇಕು. ಇರ್ಬಾರ್ದು ಹೀಗೆ, ಏನೂ ಅನ್ನಿಸದ ನಲ್ಲೀಕಾಯಿ ಮರದಂತೆ ಅನ್ನಿಸಿತು ಹೀಗೆ ಅನ್ನಿಸಿದ್ದು ಮೊದಲ ಸಲವೇನಲ್ಲವಲ್ಲ ಅಂದುಕೊಂಡಳು.
ಹುಡುಗರಿಗೆ ವಿಷಯಗಳು ಅರ್ಥವಾಗುವುದು ಎಲ್ಲಾ ಬಾಗಿಲು ಮುಚ್ಚಿ ಹೋಗಿದೆ, ಇನ್ನು ಬಿಡಿಸಿಕೊಂಡು ಹೋಗಲು ದಾರಿ ಇಲ್ಲ ಅನ್ನುವಾಗಲ? ಬಾಗಿಲು ತೆಗೆದಿದ್ದರೂ ನೆಡೆದುಕೊಂಡು ಹೋಗಲಾರೆ ಎನ್ನುವಷ್ಟು ನಿಷಕ್ತರಾಗಿ ತೋರುವವರು, ಎಲ್ಲಾ ಬಾಗಿಲು ಮುಚ್ಚಿದಮೇಲೆ ಗೋಡೆ ಒಡೆಯಲೂ ಹೆದರುವುದಿಲ್ಲ.
ನನ್ನ ಒಂದು ವರ್ಷದ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು, 'ಇದು ನನ್ನ ಮಗು ಅಂತಾನೆ ನೋಡ್ಕೊತೀನಿ ದಯವಿಟ್ಟು ನೀ ನನ್ನ ಜೊತೆ ಬಾ' ಅಂದ.ನನ್ನ ಗಂಡ ಬದುಕಿದ್ದಾನೆ ಮತ್ತು ನನಗೂ ಅವನಿಗೂ ಡೈವೋರ್ಸ್ ಆಗೋ ಯಾವ ಛಾನ್ಸು ಇಲ್ಲ ಅಂತ ಹೇಳಿ ಜೋರಾಗಿ ನಕ್ಕಿದ್ದೆ.ಅವ್ನು 'ನಾನು ಜೊಕ್ ಮಾಡ್ತಿಲ್ಲ ಹುಡುಗಿ, ಅರ್ಥ ಮಾಡ್ಕೊ ನನ್ನ' ಅಂದ. ಆವಾಗ ನೀ ನನ್ನ ಅರ್ಥಮಾಡ್ಕೊಬಹುದಿತ್ತು ನಮ್ಮ ಸಂಭಂದದ ಬಗ್ಗೆ, ಅದರ ಸಾರ್ಥಕತೆ ಬಗ್ಗೆ ನಿಶ್ಚಿತತೆ ಇತ್ತು. ನೀನು ಅದನ್ನ ಅರ್ಥ ಮಾಡ್ಕೊಳಲಿಲ್ಲ. ಯಾರಿಗೋ ಪ್ರಾಮಿಸ್ ಮಾಡ್ಬಿಟ್ಟಿದ್ದೆ. ಪಾಪ... ನಿಂಗೆ ಆವಾಗ ಅರ್ಥ ಆಗ್ಲಿಲ್ಲ ,ನಿನ್ನ ತಪ್ಪೇನಿಲ್ಲ ಬಿಡು ಅಂದು ನಕ್ಕೆ. 'ನನ್ನ ಚುಚ್ಚ ಬೇಡ ಕಣೆ ನಂಗೆ ಅರ್ಥ ಆಗಿದೆ, ನಿನ್ನ ಬಿಟ್ಟು ಇರೊಕ್ಕಾಗಲ್ಲ ನಂಗೆ ಅಂತ. ನಾನು ನಿನ್ನ ಗಂಡನ್ನೇ ಕೇಳ್ತಿನಿ, ನನ್ನ ಹುಡುಗಿನ ನಂಗೆ ಕೊಡು ಅಂತ, ನೀ ಬೇಡ ಅನ್ನಬೇಡ' ಅಂದ. ಕೇಳು ಅಂದೆ.
2
'ವ್ರಶಾಂಕ್, ಲಾವಣ್ಯ ಅನ್ನೋ ಹುಡುಗೀನ ಪ್ರೀತಿಸ್ತಿದಾನೆ ಕಣೆ' ಅಂತ ಆದಿ ಹೇಳ್ದಾಗ ಒಂದು ದೊಡ್ಡ ನಿಟ್ಟುಸಿರು ಹೊರಟಿತ್ತು.ಲಾವಣ್ಯ ಹೆಸರು ಚೆನಾಗಿದೆ ಅಂದುಕೊಂಡಳು. ಎರಡು ತಿಂಗಳು ಬಿಟ್ಟು ವ್ರಶಾಂಕೇ ಫೋನ್ ಮಾಡಿ, ಮೈತ್ರಿ... ಅಂದಾಗ ಆಶ್ಚರ್ಯ ಆಗಿತ್ತು. ಮನೆಗೆ ಬಾ ಅಂದಳು, ಬಂದ. ಅಪ್ಪ ಅಮ್ಮ ಹಳ್ಳಿಗೆ ಹೋಗಿದ್ದರು ಅಲ್ಲಿಯ ದೇವಸ್ತಾನದಲ್ಲಿ ಎನೋ ಪೂಜೆ ಮಾಡಿಸಲು, ಆದ್ರೆ ಅಜ್ಜಿ ಮಾತ್ರ ಇದ್ದಳು ಮನೆಯಲ್ಲಿ, ಆಗಾಗ ಕೆಮ್ಮುತ್ತಾ.
ಏನೇನೋ ಮಾತಾಡಿದೆವು ಸ್ನೇಹಿತರ ವಿಷಯ,ಅವನ ಕೆಲಸದ ವಿಷಯ, ಅವಳ ಕೆಲಸದ ವಿಷಯ, ಲಾವಣ್ಯ ಹೇಗಿದಾಳೆ ಕೇಳಿದಳು 'ಅದು ಮಗು ಬಿಡು' ಅಂದ. ಇರಬಹುದು ಅನ್ನಿಸಿತು ಅವಳಿಗೆ. ಅಮ್ಮ ಬೆಳಗ್ಗೆ ಮಾಡಿಹೋಗಿದ್ದ ಉಪ್ಪಿಟ್ಟನ್ನೇ ಹಾಕಿಕೊಟ್ಟಳು, ಬಟ್ಟಲಲ್ಲಿ ಬಿಳಿ ಮೊಸರು. ನಿನಗೆ ಕೆನೆ ಮೊಸರು ಅಂದ್ರೆ ಈಗಲೂ ಆಗೋಲ್ಲವ? ಅಂದ. ಪರವಾಗಿಲ್ಲ ಹಳೇದೆಲ್ಲ ಇನ್ನು ನೆನಪಿದೆಯಲ್ಲ ಅಂದು ನಕ್ಕಳು. ಹತ್ತಿರ ಬಾರೆ ಅಂದ, ಹೋಗಿ ಪಕ್ಕದಲ್ಲಿ ಕೂತಳು. ಕಾಲೇಜಿನಲ್ಲಿ ನೀ ನನ್ನ ಪ್ರೀತಿಸ್ತಿದ್ದೆ ಅಲ್ವ? ಅಂದ.ಇಷ್ಟು ಹೊತ್ತು ಕೇಳಿಸಿದರು ಕೇಳಿಸದ ಹಾಗೆ ಇದ್ದ ಅಜ್ಜಿಯ ಕೆಮ್ಮು ಕೇಳಿಸತೊಡಗಿತ್ತು. ನೀನೂ ನನ್ನ ಪ್ರೀತಿಸುತ್ತಿದ್ಡೆ ವ್ರಶಾಂಕ್ ಅಂದಳು. ನಿನ್ನ ಅಜ್ಜಿಗೆ ತುಂಬ ಕೆಮ್ಮು ಅಲ್ವ? ಅಂದ, ಮುಗುಳ್ನಕ್ಕಳು. ಇನ್ನು ಎನೇನೊ ಮಾತಾಡಿದರು ಹೊರಡೋ ಮುಂಚೆ ಅಜ್ಜಿ..ನಿಮ್ಮ ಆರೋಗ್ಯ ನೋಡ್ಕೊಳಿ ಅಂದ. ದೂರ ಹೋದ ಮೇಲೆ ಲಾವಣ್ಯಳ ಫೋಟೊ ಮೇಲ್ ಮಾಡ್ತೀನಿ ಅಂತ ಕೂಗ್ದ.
ಸರಿಯಾಗಿ ಮೊಳಕೆಯೇ ಒಡೆಯದ್ದಿದ್ದ ಸಂಭಂದ, ಅಂದಿನಿಂದ ಜೀವ ಪಡೆಯಲು ಕಾತರಿಸುತ್ತಿತ್ತು, ಹಸಿರಾಗಲು ಶುರುವಾಗಿತ್ತು, ರಸ ಒಸರಲು ಪ್ರಾರಂಭಿಸಿತ್ತು.ಅದೇ ಸಮಯಕ್ಕೆ ಸರಿಯಾಗಿ ಅವಳಿಗೆ ಗಂಡು ನೋಡಲು ಶುರು ಮಾಡಿದ್ದರು ಪ್ರತಿಯೊಂದು ಹುಡುಗನನ್ನೂ ಬೇಡ ಬೇಡ ಎಂದು ನಿರಾಕರಿಸುತ್ತಿದ್ದಳು. ಏಕೆ ಅಂತ ಅವಳಿಗೇ ಗೊತ್ತಿರಲಿಲ್ಲ. ಅವಳ ಅಮ್ಮ ಅಳಲು ಶುರು ಮಾಡಿದ್ದರು, ಹಿಂಸೆ ಆಗುತಿತ್ತು ಮನೆಯಲ್ಲಿ. ಇವತ್ತು ನಿರ್ಧಾರಕ್ಕೆ ಬಂದೇ ಬಿಡಬೇಕು ಅಂತ ವ್ರಶಾಂಕ್ ಬಳಿ ಹೋಗಿ 'ನನ್ನ ಮದುವೆ ಆಗು ವ್ರಶಾಂಕ್' ಅಂದಿದ್ದಳು ನಾನೇನೋ ತಯಾರಿದ್ದೀನಿ ಆದ್ರೆ ಲಾವಣ್ಯಾಗೆ ಪ್ರಾಮಿಸ್ ಮಾಡಿಬಿಟ್ಟಿದೀನಲ್ಲ, ಪ್ರಾಮಿಸ್ ಮುರಿಯೋದು ತಪ್ಪಲ್ಲವ? ಅಂದಿದ್ದ. ತನ್ನ ಬಳಿ ಇರೋವಾಗ, ತನ್ನ ಸೇರೋವಾಗ, ಸುಖಿಸುವಾಗ, ಆಣೆ- ಪ್ರಮಾಣ, ನಂಬಿಕೆ, ಮನಸ್ಸು- ಮನಸ್ಸಾಕ್ಷಿ, ಎಲ್ಲವನ್ನೂ ಬೀದಿಗೆ ಎಸೆದಂತೆ ಆಡುತ್ತಿದ್ದವನಿಗೆ ಆಣೆ ಪ್ರಮಾಣದ ಜ್ನಾಪಕ ಬಂದ್ದಿದ್ದು ನೋಡಿ ಹೇಡಿ ಅನ್ನಿಸಿ 'ಸರಿ ನೀನು ನಿನ್ನ ಆಣೆ ಉಳಿಸಿಕೋ ಅವಳನ್ನೇ ಮದುವೆ ಆಗು.' ಅಂದಿದ್ದಳು. ಇದಾದ ಎರಡೇ ತಿಂಗಳಲ್ಲಿ ಮೈತ್ರಿಯ ಮದುವೆ ಆಗಿಹೋಗಿತ್ತು.
3
ಛೇ.. ನಾವು ಮತ್ತೆ ಸಿಗಲೇಬಾರದಿತ್ತು ಅವತ್ತು ಫೋನ್ನಲ್ಲಿ ಮಾತಾಡೋವಾಗ ನಾನು ಕೇರಳಕ್ಕೆ ಹೋಗ್ತಿದೀನಿ ಒಂದು ವಾರ ಅಂದೆ. ಲಾವಣ್ಯ ಬರ್ತಿದಾಳ ಅಂತ ಕೇಳಿದಳು, ಇಲ್ಲ ಅಂದೆ. ನಾ ಬರ್ತೀನಿ ವ್ರಶಾಂಕ್ ಅಂದಳು. ಆಶರ್ಯ ಆಯ್ತು ನಿಜವಾಗ್ಲು ಮೈತ್ರಿ!!! ಅಂದೆ. 'ನನಗು ತಿರುಗಬೇಕು ಅಂತ ಮನಸ್ಸಾಗಿದೆ, ಒಂದೇ ಕಡೆ ಇದ್ದು ಬೊರು. ಕೆಲಸಕ್ಕು ಒಂದುವಾರ ರಜೆ ಹಾಕಿಬಿಡ್ತೀನಿ, ಇವರೂ ಫಾರಿನ್ ಟೂರ್ನಲ್ಲಿದಾರೆ, ಮಗೂನು ಕರ್ಕೊಂಡು ಬರ್ತೀನಿ. ನಿನ್ನ ಕೆಲಸಕ್ಕೆ ತೊಂದರೆ ಮಾಡೋಲ್ಲ ಅಂದಿದ್ದಳು.
ಒಂದು ವಾರ ಪೂರ್ತಿ ಜೊತೆಲಿ ಕಳೆದೆನಲ್ಲ ಆವಾಗಲೇ ಗೊತ್ತಾಗಿದ್ದು ಅವಳಿಗೂ ಇವಳಿಗೂ ಎಷ್ಟು ವ್ಯತ್ಯಾಸ ಎಂದು. ಮೊದಮೊದಲು ಇನೊಸೆಂಟ್ ಅನ್ನಿಸುತ್ತಿದ್ದ ಲಾವಣ್ಯ, ಈಗ ನಾಟಕ ಮಾಡ್ತಾಳೆ ಅನ್ನಿಸುತಿತ್ತು. ಅವಳ ಜೊತೆ ಇರೋವಾಗಲೆಲ್ಲಾ ಉಸಿರುಕಟ್ಟುತ್ತಿರುವ ಭಾವನೆ. ಚಿಕ್ಕ ಚಿಕ್ಕ ವಿಷಯಗಳನ್ನೂ ದೊಡ್ಡದು ಮಾಡುವ, ನಾನು ಬೇರೆ ಹುಡುಗಿಯರನ್ನು ನೋಡಿದರೆ ಸಾಕು ಉರಿದು ಬೀಳುವ, ನನ್ನ ಬೇಕು ಬೇಡಗಳನ್ನು ಅರ್ಥ ಮಾಡಿಕೊಳ್ಳದ, ಸಂದರ್ಭಗಳಿಗೆ ಸರಿಯಾಗಿ ಸ್ಪಂದಿಸದ, ಅತ್ಯಂತ ಹಠಮಾರಿ-ಪೊಸೆಸ್ಸಿವ್ ಹುಡುಗಿ ಅವಳು. ಪಕ್ಕದಲ್ಲೇ ಕುಳಿತುಕೊಂಡು ನಾನು ಹುಡುಗಿಯರ ಜೊತೆ ಫ್ಲರ್ಟ್ ಮಾಡುವುದನ್ನು ಎಂಜಾಯ್ ಮಾಡುತ್ತಾ, ನನ್ನ ಚುಡಾಯಿಸುತ್ತಾ, ಹೆಚ್ಚು ಸ್ಪೇಸ್ ಕೊಡುವ, ಬೇಕಾದಲ್ಲಿ ಮಾತಾಗುವ-ಬೇಡವಾದಲ್ಲಿ ಮೌನವಾಗುವ, ಬರೀ ಪ್ರೀತಿ ಪ್ರೇಮದ ಮಾತಡಿ ಬೋರ್ ಮಾಡದೆ, ಏನೇ ವಿಷಯ ಎತ್ತಿಕೊಂಡರೂ ಸಮರ್ಥವಾಗಿ ವಾದ ಮಾಡುವ, ಆದರೆ ಜಗಳ ಆಡದ ಅಷ್ಟೇ ಪ್ರೀತಿಸುವ ಹುಡುಗಿ ಮೈತ್ರಿ.
ಹೌದು ನಾನಾಗ ತಪ್ಪೇ ಮಾಡಿರಬಹುದು. ಅವಳನ್ನ ಅರ್ಥ ಮಾಡಿಕೊಂಡಿದ್ದು ಬಹಳ ನಿಧಾನ ಇರಬಹುದು, ಆದ್ರೆ ಅವಳನ್ನ ತುಂಬಾ ಪ್ರೀತಿಸುತ್ತೇನೆ. ಅವಳ ಗಂಡ ಅವಳನ್ನ ನೋಡಿಕೊಳ್ಳೋದಕ್ಕಿಂತ ಚೆನ್ನಾಗಿ ನೋಡಿಕೊತೆನೆ ನಾನು. ಲಾವಣ್ಯಾಗೆ ಮೊನ್ನೇನೆ ಹೇಳಿಬಂದೆನಲ್ಲ ನನಗೂ ನಿನಗೂ ಆಗಿಬರೋಲ್ಲ, ನಮ್ಮಿಬ್ಬರ ಸ್ವಭಾವಗಳು ಬೇರೆ ಬೇರೆ, ಜೊತೇಗಿರೋದು ಕಷ್ಟ ಆಗುತ್ತೆ ಅಂತ. ಇದನ್ನ ಎಷ್ಟು ಹೊತ್ತು ಅವಳಿಗೆ ವಿವರಿಸಿದೆ ಆದ್ರೆ ಅವಳು ಮೊನ್ನೇನೂ ಅದೇ ಥರ ಆಡಿದಳು, ಅತ್ತಳು, ಬಾಯಿಗೆ ಬಂದ ಹಾಗೆ ಬೈದಳು, ಹೊಡೆದಳು, ನಾನು ಎದ್ದು ಬಂದೆ. ಆದ್ರೆ ಇನ್ನು ಮುಂದೆ ಎಲ್ಲಾ ಚೆನ್ನಾಗಿರುತ್ತೆ ನಾನು-ನನ್ನ ಮೈತ್ರಿ-ಅವಳ ಮಗು, ಅಲ್ಲ ನಮ್ಮ ಮಗು ಆ ಮಗುನ ನನ್ನ ಮಗು ಥರನೇ ನೋಡಿಕೊಳ್ತೀನಿ. ಅವಳ ಗಂಡನಿಗೂ ಹೇಳಿಯಾಯಿತು, ಆ ಪ್ರಾಣಿ ನನ್ನ ಹೆಂಡತಿ ಹತ್ತಿರ ಮಾತಾಡ್ತೀನಿ ಅಂತ ಹೇಳಿದಾನೆ.'ಈಗ ಮನೆಗೆ ಬಾ' ಅಂತ ಮೈತ್ರಿ ಫೋನ್ ಮಾಡಿದ್ದಳಲ್ಲ, 'ಮಾತಾಡಬೇಕು' ಅಂತ. ನನಗೆ ಗೊತ್ತು ಮೈತ್ರಿ ನನ್ನ ಜೊತೆಗೆ ಬಂದೇ ಬರ್ತಾಳೆ, ನನ್ನ ತುಂಬ ಪ್ರೀತಿಸುತ್ತಾಳೆ ಅವಳು, ಅಂದುಕೊಂಡು ಕಾರಿನ ಕೀ ತೆಗೆದುಕೊಂಡು ಹೊರಟ.
4
ತನ್ನ ದುಃಖ ದುಮ್ಮಾನವನ್ನೆಲ್ಲಾ ಬಸಿದು ಹಾಕುವ ಹವಣಿಕೆ ಇರಬೇಕು, ರಾತ್ರಿಯೆಲ್ಲಾ ಆಕಾಶವು ಬಿಕ್ಕಳಿಸಿ ಅಳುತ್ತಿತ್ತು. ಏಕೋ ನನಗರಿವಿಲ್ಲದೆಯೇ ನನ್ನ ಕೆನ್ನೆಯ ಮೇಲೂ ಇಳಿದ ನೀರು, ಕಾರಣ ತಿಳಿಯದು. ಸುಮ್ಮನೆ ಕಲ್ಪಿಸಿಕೊಂಡ ಆತಂಕಗಳು ನನ್ನ ಕಾಡುತ್ತಿದ್ದರೆ ನನ್ನ ಕಲ್ಪನೆಗಳ ಬಗ್ಗೆ ನನಗೇ ಭಯ ಮೂಡಿ, ಟೀವಿ ನೋಡಲು ಬೇಸರವಾಗಿ, ಓದಲು ತಂದ ಪುಸ್ತಕದಲ್ಲಿ ಮನಸ್ಸು ಇಳಿಯದೆ, ಏನೂ ಮಾಡಲು ಹೊಳಿಯದೆ, ಆ ರಾತ್ರಿಯಲ್ಲಿ ಮನೆ ಒರೆಸತೊಡಗಿದೆ.
ಯಾವಾಗ ಮಲಗಿದೆನೋ!! ಬೆಳಗ್ಗೆ ಎದ್ದು ರಂಗೋಲಿ ಹಾಕುತ್ತಿರುವಾಗ, ರಾತ್ರಿಯೆಲ್ಲಾ ಅತ್ತಿದ್ದರಿಂದಲೋ ಏನೋ ಎನ್ನುವಂತೆ ಕಣ್ಣು ಕೆಂಪಗಾಗಿರುವ ಆಕಾಶ, ದುಃಖ ಹೊರಹಾಕಿದ ಸುಖದ ಜೊತೆ. ಸುಮ್ಮನೆ ಅಚ್ಚರಿಯಿಂದ ನೋಡಿದೆ, ರಂಗೋಲಿ ಹಾಕುವುದನ್ನೂ ಮರೆತು- ಹಕ್ಕಿಯೊಂದು ತನ್ನ ಮೇಲಿದ್ದ ಮಳೆ ನೀರನ್ನು ಕೊಡಗಿಕೊಳ್ಳುತ್ತಿತ್ತು, ಅಲ್ಲೊಂದು ಮೈನಾ ಹಕ್ಕಿ ಮಾತಾಡುತ್ತಿದ್ದರೆ, ಹೆಸರೇ ಗೊತ್ತಿಲ್ಲದ ಹಕ್ಕಿಯೊಂದು ಹಾಡಾಗಿ ಉತ್ತರಿಸುತ್ತಿತ್ತು...
ಅವನ ಕಾರು ದೂರದಲ್ಲಿ ಬರುತ್ತಿರುವುದು ಕಾಣಿಸುತ್ತಿತ್ತು, ಅವನಿಗೆ ಉತ್ತರ ಹೇಳಬೇಕಲ್ಲ. ಪಾಪು ಅಮ್ಮಾ ಎಂದು ಕರೆದ ಹಾಗೆ ಅನ್ನಿಸಿತು ಒಳಗೆ ಹೋಗಿ ನಿದ್ದೆಗಣ್ಣಿನ ಮಗುವನ್ನು ಎತ್ತಿಕೊಂಡು ಬಂದೆ. ಅವನು ನಲ್ಲೀಕಾಯಿ ಮರಕ್ಕೆ ಒರಗಿ ನಿಂತ್ತಿದ್ದ. ವ್ರಶಾಂಕ್,ನಿನಗೆ ನನ್ನ ಗಂಡನ್ನ ಕೇಳೋಕ್ಕೆ ಒಪ್ಪಿಗೆ ಕೊಟ್ಟಿದ್ದರಲ್ಲಿ ನನ್ನ ಸ್ವಾರ್ಥವಿದೆ, ಏನೂ ಅನ್ನಿಸದಂತಹ ವ್ಯಕ್ತಿತ್ವದ ಅವನಿಗೆ ನೀ ಹೇಳುವ ವಿಚಾರದಿಂದ ಏನಾದರೂ ಅನ್ನಿಸಬಹುದು, ರೊಚ್ಚಿಗೆ ಬೀಳಬಹುದು, ರೇಗಬಹುದು, ಸಿಟ್ಟಾಗಬಹುದು ಅನ್ನೋ ಆಸೆಯಿಂದ, ಆದರೆ ಅಂತದೇನೂ ಆಗಲಿಲ್ಲ.
ಏನೂ ಅನ್ನಿಸದವನ ಜೊತೆ ಬದುಕಲು ಕಲಿತಿದೀನಿ, ಅಭ್ಯಾಸ ಆಗಿಹೋಗಿದೆ.ಅವನಿಗೆಪ್ರಾ ಪ್ರಾಮಿಸ್ ಮಾಡಿದೀನಿ ಅದಕೆ ಬರ್ತಿಲ್ಲಾ, ಅಥವಾ ಸಮಾಜಕ್ಕೆ ಹೆದರಿ ಬರ್ತಿಲ್ಲಾ ಅನ್ಕೊಬೇಡ. ನನಗೆ ಇದ್ಯಾವುದರ ಭಯ ಇಲ್ಲ. ಸೋ ಕಾಲ್ಡ್ 'ಎಥಿಕ್ಸ್', 'ಮಾರಲ್ಸ್' ಗಳಲ್ಲಿ ನನಗೆ ನಂಬಿಕೆ ಇಲ್ಲ. ಆದ್ರೂ, ನಾ ಬರೋಲ್ಲ. ಅಂದು ತೆರೆದ ಬಾಗಿಲಿಂದ ನೆಡೆದು ಹೋಗಲು ನೀನು ಒಪ್ಪಲಿಲ್ಲ, ಧೈರ್ಯ ಮಾಡಲಿಲ್ಲ, ನಿನಗೆ ತುಂಬ ಬಾಗಿಲುಗಳಿದ್ದವು. ಇಂದು ನನ್ನ ಬಾಗಿಲುಗಳು ಮುಚ್ಚಿವೆ, ಗೋಡೆ ಒಡೆಯುವ ಧೈರ್ಯ ಇದೆ ಆದರೆ ಮನಸಿಲ್ಲ. ನಾನು ಬರೋಲ್ಲ ಅಂದೆ, ನಲ್ಲೀ ಕಾಯಿ ಮರಕ್ಕೆ ಒರಗಿ ನಿಂತವನನ್ನು ನೋಡುತ್ತ.. ತೊಡೆಯ ಮೇಲಿನ ಮಗಳು ನಕ್ಕಂತಾಯ್ತು.
ನನ್ನ ಬಿಟ್ಟು ಹೋಗ್ತೀಯ ಮೈತ್ರಿ? ನನ್ಗೆ ಭಯ ಆಗ್ತಿದೆ. ನಾನೇನ್ ತಪ್ಪು ಮಾಡಿದೀನಿ? ನೀನು ಹೇಳಿದ ಹಾಗೆ ಕೇಳ್ತೀನಿ, ನೀ ಹೇಳಿದ್ದರ ವಿರುದ್ದ ಏನಾದರೂ ಮಾಡಿದೀನ ಇಲ್ಲಿವರೆಗೂ? ದಯವಿಟ್ಟು ಬಿಟ್ಟು ಹೊಗಬೇಡ ಮೈತ್ರಿ. 'ನಾವು ಒಬ್ಬರಿಗೊಬ್ಬರು ಜೊತೆಯಾಗಿರ್ತೀವಿ ಕಷ್ಟ ಆಗ್ಲಿ, ಸುಖ ಆಗ್ಲಿ.' ಅಂತ ದೇವರ ಮುಂದೆ ಪ್ರಮಾಣ ಮಾಡಿದೀವಿ. ನಂಗೆ ಭಯ ಆಗ್ತಿದೆ, ನನ್ನ ಬಿಟ್ಟು ಹೋಗಬೇಡ... ಅಂತ ಪಕ್ಕದಲ್ಲಿ ಮಲಗಿದ್ದ ನನ್ನ ಗಂಡ ಒಂದೇ ಸಮನೆ ಬಡಬಡಿಸತೊಡಗಿದಾಗ ವ್ರಶಾಂಕ್ ಇವನ ಹತ್ತಿರ ಮಾತಾಡಿದಾನೆ ಅಂತ ಗೊತ್ತಾಯ್ತು..ಉತ್ತರ ಕೊಡೋಕ್ಕೂ ಹಿಂಸೆ ಆಗಿ ಎದ್ದು ಹೊಗಿ ವೆರೆಂಡಾದ ಈಸಿ ಕುರ್ಚಿ ಮೆಲೆ ಕೂತೆ.
ವರೆಂಡಾದ ಕಿಟಕಿಯಿಂದ ಕಾಣುತ್ತಿದ್ದ ಮನೆಯ ಮುಂದಿನ ನಲ್ಲಿಕಾಯಿ ಮರದ ರುಚಿ ಇಲ್ಲದ ಚಿಕ್ಕ ಚಿಕ್ಕ ಕಾಯಿಗಳ ಬಗ್ಗೆ ಏನೂ ಅನ್ನಿಸಲಿಲ್ಲ. ತನ್ನ ಗಂಡನ ಅತೀ ಒಳ್ಳೆಯತನದ, ಪ್ರತಿಯೊಂದಕ್ಕೂ 'ನೀ ಹೇಳಿದ ಹಾಗೆ' ಅನ್ನುವ, ನನ್ನ ಮುಂದೆ ತಾನು ಬುದ್ದಿವಂತ ಅಂತ ತೋರಿಸಿಕೊಳ್ಳಲು ಹೋಗಿ ಪೆಚ್ಚಾಗುವ, ತನ್ನ ಬಸುರಿ ಮಾಡಿದ್ದನ್ನೇ ದೊಡ್ಡ ಸಾಧನೆ ಅನ್ನುವಂತೆ ಆಡಿದ್ದ ಅವನ ಬಗ್ಗೆ ಅಸಹ್ಯ ಆಗುವುದೂ ನಿಂತು ಹೊಗಿತ್ತು. ಎನೂ ಅನ್ನಿಸುವುದಿಲ್ಲ ಅವನ ಬಗ್ಗೆ. ಯಾರ ವ್ಯಕ್ತಿತ್ವವೂ 'ಇಷ್ಟು' ಎಂದು ಅಳೆದು ಮುಗಿಸಿಬಿಡುವಂತೆ ಇರಬಾರದು ಗಟ್ಟಿಯಾಗಬೇಕು- ದೊಡ್ಡದಾಗಬೇಕು- ಅಗಲವಾಗಬೇಕು -ವಿಸ್ತಾರವಾಗಬೇಕು. ಇಲ್ಲವೇ ಚಿಕ್ಕದಾಗಬೇಕು- ಪುಟ್ಟದಾಗಬೇಕು- ಜೊಳ್ಳಾಗಬೇಕು. ಇರ್ಬಾರ್ದು ಹೀಗೆ, ಏನೂ ಅನ್ನಿಸದ ನಲ್ಲೀಕಾಯಿ ಮರದಂತೆ ಅನ್ನಿಸಿತು ಹೀಗೆ ಅನ್ನಿಸಿದ್ದು ಮೊದಲ ಸಲವೇನಲ್ಲವಲ್ಲ ಅಂದುಕೊಂಡಳು.
ಹುಡುಗರಿಗೆ ವಿಷಯಗಳು ಅರ್ಥವಾಗುವುದು ಎಲ್ಲಾ ಬಾಗಿಲು ಮುಚ್ಚಿ ಹೋಗಿದೆ, ಇನ್ನು ಬಿಡಿಸಿಕೊಂಡು ಹೋಗಲು ದಾರಿ ಇಲ್ಲ ಅನ್ನುವಾಗಲ? ಬಾಗಿಲು ತೆಗೆದಿದ್ದರೂ ನೆಡೆದುಕೊಂಡು ಹೋಗಲಾರೆ ಎನ್ನುವಷ್ಟು ನಿಷಕ್ತರಾಗಿ ತೋರುವವರು, ಎಲ್ಲಾ ಬಾಗಿಲು ಮುಚ್ಚಿದಮೇಲೆ ಗೋಡೆ ಒಡೆಯಲೂ ಹೆದರುವುದಿಲ್ಲ.
ನನ್ನ ಒಂದು ವರ್ಷದ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು, 'ಇದು ನನ್ನ ಮಗು ಅಂತಾನೆ ನೋಡ್ಕೊತೀನಿ ದಯವಿಟ್ಟು ನೀ ನನ್ನ ಜೊತೆ ಬಾ' ಅಂದ.ನನ್ನ ಗಂಡ ಬದುಕಿದ್ದಾನೆ ಮತ್ತು ನನಗೂ ಅವನಿಗೂ ಡೈವೋರ್ಸ್ ಆಗೋ ಯಾವ ಛಾನ್ಸು ಇಲ್ಲ ಅಂತ ಹೇಳಿ ಜೋರಾಗಿ ನಕ್ಕಿದ್ದೆ.ಅವ್ನು 'ನಾನು ಜೊಕ್ ಮಾಡ್ತಿಲ್ಲ ಹುಡುಗಿ, ಅರ್ಥ ಮಾಡ್ಕೊ ನನ್ನ' ಅಂದ. ಆವಾಗ ನೀ ನನ್ನ ಅರ್ಥಮಾಡ್ಕೊಬಹುದಿತ್ತು ನಮ್ಮ ಸಂಭಂದದ ಬಗ್ಗೆ, ಅದರ ಸಾರ್ಥಕತೆ ಬಗ್ಗೆ ನಿಶ್ಚಿತತೆ ಇತ್ತು. ನೀನು ಅದನ್ನ ಅರ್ಥ ಮಾಡ್ಕೊಳಲಿಲ್ಲ. ಯಾರಿಗೋ ಪ್ರಾಮಿಸ್ ಮಾಡ್ಬಿಟ್ಟಿದ್ದೆ. ಪಾಪ... ನಿಂಗೆ ಆವಾಗ ಅರ್ಥ ಆಗ್ಲಿಲ್ಲ ,ನಿನ್ನ ತಪ್ಪೇನಿಲ್ಲ ಬಿಡು ಅಂದು ನಕ್ಕೆ. 'ನನ್ನ ಚುಚ್ಚ ಬೇಡ ಕಣೆ ನಂಗೆ ಅರ್ಥ ಆಗಿದೆ, ನಿನ್ನ ಬಿಟ್ಟು ಇರೊಕ್ಕಾಗಲ್ಲ ನಂಗೆ ಅಂತ. ನಾನು ನಿನ್ನ ಗಂಡನ್ನೇ ಕೇಳ್ತಿನಿ, ನನ್ನ ಹುಡುಗಿನ ನಂಗೆ ಕೊಡು ಅಂತ, ನೀ ಬೇಡ ಅನ್ನಬೇಡ' ಅಂದ. ಕೇಳು ಅಂದೆ.
2
'ವ್ರಶಾಂಕ್, ಲಾವಣ್ಯ ಅನ್ನೋ ಹುಡುಗೀನ ಪ್ರೀತಿಸ್ತಿದಾನೆ ಕಣೆ' ಅಂತ ಆದಿ ಹೇಳ್ದಾಗ ಒಂದು ದೊಡ್ಡ ನಿಟ್ಟುಸಿರು ಹೊರಟಿತ್ತು.ಲಾವಣ್ಯ ಹೆಸರು ಚೆನಾಗಿದೆ ಅಂದುಕೊಂಡಳು. ಎರಡು ತಿಂಗಳು ಬಿಟ್ಟು ವ್ರಶಾಂಕೇ ಫೋನ್ ಮಾಡಿ, ಮೈತ್ರಿ... ಅಂದಾಗ ಆಶ್ಚರ್ಯ ಆಗಿತ್ತು. ಮನೆಗೆ ಬಾ ಅಂದಳು, ಬಂದ. ಅಪ್ಪ ಅಮ್ಮ ಹಳ್ಳಿಗೆ ಹೋಗಿದ್ದರು ಅಲ್ಲಿಯ ದೇವಸ್ತಾನದಲ್ಲಿ ಎನೋ ಪೂಜೆ ಮಾಡಿಸಲು, ಆದ್ರೆ ಅಜ್ಜಿ ಮಾತ್ರ ಇದ್ದಳು ಮನೆಯಲ್ಲಿ, ಆಗಾಗ ಕೆಮ್ಮುತ್ತಾ.
ಏನೇನೋ ಮಾತಾಡಿದೆವು ಸ್ನೇಹಿತರ ವಿಷಯ,ಅವನ ಕೆಲಸದ ವಿಷಯ, ಅವಳ ಕೆಲಸದ ವಿಷಯ, ಲಾವಣ್ಯ ಹೇಗಿದಾಳೆ ಕೇಳಿದಳು 'ಅದು ಮಗು ಬಿಡು' ಅಂದ. ಇರಬಹುದು ಅನ್ನಿಸಿತು ಅವಳಿಗೆ. ಅಮ್ಮ ಬೆಳಗ್ಗೆ ಮಾಡಿಹೋಗಿದ್ದ ಉಪ್ಪಿಟ್ಟನ್ನೇ ಹಾಕಿಕೊಟ್ಟಳು, ಬಟ್ಟಲಲ್ಲಿ ಬಿಳಿ ಮೊಸರು. ನಿನಗೆ ಕೆನೆ ಮೊಸರು ಅಂದ್ರೆ ಈಗಲೂ ಆಗೋಲ್ಲವ? ಅಂದ. ಪರವಾಗಿಲ್ಲ ಹಳೇದೆಲ್ಲ ಇನ್ನು ನೆನಪಿದೆಯಲ್ಲ ಅಂದು ನಕ್ಕಳು. ಹತ್ತಿರ ಬಾರೆ ಅಂದ, ಹೋಗಿ ಪಕ್ಕದಲ್ಲಿ ಕೂತಳು. ಕಾಲೇಜಿನಲ್ಲಿ ನೀ ನನ್ನ ಪ್ರೀತಿಸ್ತಿದ್ದೆ ಅಲ್ವ? ಅಂದ.ಇಷ್ಟು ಹೊತ್ತು ಕೇಳಿಸಿದರು ಕೇಳಿಸದ ಹಾಗೆ ಇದ್ದ ಅಜ್ಜಿಯ ಕೆಮ್ಮು ಕೇಳಿಸತೊಡಗಿತ್ತು. ನೀನೂ ನನ್ನ ಪ್ರೀತಿಸುತ್ತಿದ್ಡೆ ವ್ರಶಾಂಕ್ ಅಂದಳು. ನಿನ್ನ ಅಜ್ಜಿಗೆ ತುಂಬ ಕೆಮ್ಮು ಅಲ್ವ? ಅಂದ, ಮುಗುಳ್ನಕ್ಕಳು. ಇನ್ನು ಎನೇನೊ ಮಾತಾಡಿದರು ಹೊರಡೋ ಮುಂಚೆ ಅಜ್ಜಿ..ನಿಮ್ಮ ಆರೋಗ್ಯ ನೋಡ್ಕೊಳಿ ಅಂದ. ದೂರ ಹೋದ ಮೇಲೆ ಲಾವಣ್ಯಳ ಫೋಟೊ ಮೇಲ್ ಮಾಡ್ತೀನಿ ಅಂತ ಕೂಗ್ದ.
ಸರಿಯಾಗಿ ಮೊಳಕೆಯೇ ಒಡೆಯದ್ದಿದ್ದ ಸಂಭಂದ, ಅಂದಿನಿಂದ ಜೀವ ಪಡೆಯಲು ಕಾತರಿಸುತ್ತಿತ್ತು, ಹಸಿರಾಗಲು ಶುರುವಾಗಿತ್ತು, ರಸ ಒಸರಲು ಪ್ರಾರಂಭಿಸಿತ್ತು.ಅದೇ ಸಮಯಕ್ಕೆ ಸರಿಯಾಗಿ ಅವಳಿಗೆ ಗಂಡು ನೋಡಲು ಶುರು ಮಾಡಿದ್ದರು ಪ್ರತಿಯೊಂದು ಹುಡುಗನನ್ನೂ ಬೇಡ ಬೇಡ ಎಂದು ನಿರಾಕರಿಸುತ್ತಿದ್ದಳು. ಏಕೆ ಅಂತ ಅವಳಿಗೇ ಗೊತ್ತಿರಲಿಲ್ಲ. ಅವಳ ಅಮ್ಮ ಅಳಲು ಶುರು ಮಾಡಿದ್ದರು, ಹಿಂಸೆ ಆಗುತಿತ್ತು ಮನೆಯಲ್ಲಿ. ಇವತ್ತು ನಿರ್ಧಾರಕ್ಕೆ ಬಂದೇ ಬಿಡಬೇಕು ಅಂತ ವ್ರಶಾಂಕ್ ಬಳಿ ಹೋಗಿ 'ನನ್ನ ಮದುವೆ ಆಗು ವ್ರಶಾಂಕ್' ಅಂದಿದ್ದಳು ನಾನೇನೋ ತಯಾರಿದ್ದೀನಿ ಆದ್ರೆ ಲಾವಣ್ಯಾಗೆ ಪ್ರಾಮಿಸ್ ಮಾಡಿಬಿಟ್ಟಿದೀನಲ್ಲ, ಪ್ರಾಮಿಸ್ ಮುರಿಯೋದು ತಪ್ಪಲ್ಲವ? ಅಂದಿದ್ದ. ತನ್ನ ಬಳಿ ಇರೋವಾಗ, ತನ್ನ ಸೇರೋವಾಗ, ಸುಖಿಸುವಾಗ, ಆಣೆ- ಪ್ರಮಾಣ, ನಂಬಿಕೆ, ಮನಸ್ಸು- ಮನಸ್ಸಾಕ್ಷಿ, ಎಲ್ಲವನ್ನೂ ಬೀದಿಗೆ ಎಸೆದಂತೆ ಆಡುತ್ತಿದ್ದವನಿಗೆ ಆಣೆ ಪ್ರಮಾಣದ ಜ್ನಾಪಕ ಬಂದ್ದಿದ್ದು ನೋಡಿ ಹೇಡಿ ಅನ್ನಿಸಿ 'ಸರಿ ನೀನು ನಿನ್ನ ಆಣೆ ಉಳಿಸಿಕೋ ಅವಳನ್ನೇ ಮದುವೆ ಆಗು.' ಅಂದಿದ್ದಳು. ಇದಾದ ಎರಡೇ ತಿಂಗಳಲ್ಲಿ ಮೈತ್ರಿಯ ಮದುವೆ ಆಗಿಹೋಗಿತ್ತು.
3
ಛೇ.. ನಾವು ಮತ್ತೆ ಸಿಗಲೇಬಾರದಿತ್ತು ಅವತ್ತು ಫೋನ್ನಲ್ಲಿ ಮಾತಾಡೋವಾಗ ನಾನು ಕೇರಳಕ್ಕೆ ಹೋಗ್ತಿದೀನಿ ಒಂದು ವಾರ ಅಂದೆ. ಲಾವಣ್ಯ ಬರ್ತಿದಾಳ ಅಂತ ಕೇಳಿದಳು, ಇಲ್ಲ ಅಂದೆ. ನಾ ಬರ್ತೀನಿ ವ್ರಶಾಂಕ್ ಅಂದಳು. ಆಶರ್ಯ ಆಯ್ತು ನಿಜವಾಗ್ಲು ಮೈತ್ರಿ!!! ಅಂದೆ. 'ನನಗು ತಿರುಗಬೇಕು ಅಂತ ಮನಸ್ಸಾಗಿದೆ, ಒಂದೇ ಕಡೆ ಇದ್ದು ಬೊರು. ಕೆಲಸಕ್ಕು ಒಂದುವಾರ ರಜೆ ಹಾಕಿಬಿಡ್ತೀನಿ, ಇವರೂ ಫಾರಿನ್ ಟೂರ್ನಲ್ಲಿದಾರೆ, ಮಗೂನು ಕರ್ಕೊಂಡು ಬರ್ತೀನಿ. ನಿನ್ನ ಕೆಲಸಕ್ಕೆ ತೊಂದರೆ ಮಾಡೋಲ್ಲ ಅಂದಿದ್ದಳು.
ಒಂದು ವಾರ ಪೂರ್ತಿ ಜೊತೆಲಿ ಕಳೆದೆನಲ್ಲ ಆವಾಗಲೇ ಗೊತ್ತಾಗಿದ್ದು ಅವಳಿಗೂ ಇವಳಿಗೂ ಎಷ್ಟು ವ್ಯತ್ಯಾಸ ಎಂದು. ಮೊದಮೊದಲು ಇನೊಸೆಂಟ್ ಅನ್ನಿಸುತ್ತಿದ್ದ ಲಾವಣ್ಯ, ಈಗ ನಾಟಕ ಮಾಡ್ತಾಳೆ ಅನ್ನಿಸುತಿತ್ತು. ಅವಳ ಜೊತೆ ಇರೋವಾಗಲೆಲ್ಲಾ ಉಸಿರುಕಟ್ಟುತ್ತಿರುವ ಭಾವನೆ. ಚಿಕ್ಕ ಚಿಕ್ಕ ವಿಷಯಗಳನ್ನೂ ದೊಡ್ಡದು ಮಾಡುವ, ನಾನು ಬೇರೆ ಹುಡುಗಿಯರನ್ನು ನೋಡಿದರೆ ಸಾಕು ಉರಿದು ಬೀಳುವ, ನನ್ನ ಬೇಕು ಬೇಡಗಳನ್ನು ಅರ್ಥ ಮಾಡಿಕೊಳ್ಳದ, ಸಂದರ್ಭಗಳಿಗೆ ಸರಿಯಾಗಿ ಸ್ಪಂದಿಸದ, ಅತ್ಯಂತ ಹಠಮಾರಿ-ಪೊಸೆಸ್ಸಿವ್ ಹುಡುಗಿ ಅವಳು. ಪಕ್ಕದಲ್ಲೇ ಕುಳಿತುಕೊಂಡು ನಾನು ಹುಡುಗಿಯರ ಜೊತೆ ಫ್ಲರ್ಟ್ ಮಾಡುವುದನ್ನು ಎಂಜಾಯ್ ಮಾಡುತ್ತಾ, ನನ್ನ ಚುಡಾಯಿಸುತ್ತಾ, ಹೆಚ್ಚು ಸ್ಪೇಸ್ ಕೊಡುವ, ಬೇಕಾದಲ್ಲಿ ಮಾತಾಗುವ-ಬೇಡವಾದಲ್ಲಿ ಮೌನವಾಗುವ, ಬರೀ ಪ್ರೀತಿ ಪ್ರೇಮದ ಮಾತಡಿ ಬೋರ್ ಮಾಡದೆ, ಏನೇ ವಿಷಯ ಎತ್ತಿಕೊಂಡರೂ ಸಮರ್ಥವಾಗಿ ವಾದ ಮಾಡುವ, ಆದರೆ ಜಗಳ ಆಡದ ಅಷ್ಟೇ ಪ್ರೀತಿಸುವ ಹುಡುಗಿ ಮೈತ್ರಿ.
ಹೌದು ನಾನಾಗ ತಪ್ಪೇ ಮಾಡಿರಬಹುದು. ಅವಳನ್ನ ಅರ್ಥ ಮಾಡಿಕೊಂಡಿದ್ದು ಬಹಳ ನಿಧಾನ ಇರಬಹುದು, ಆದ್ರೆ ಅವಳನ್ನ ತುಂಬಾ ಪ್ರೀತಿಸುತ್ತೇನೆ. ಅವಳ ಗಂಡ ಅವಳನ್ನ ನೋಡಿಕೊಳ್ಳೋದಕ್ಕಿಂತ ಚೆನ್ನಾಗಿ ನೋಡಿಕೊತೆನೆ ನಾನು. ಲಾವಣ್ಯಾಗೆ ಮೊನ್ನೇನೆ ಹೇಳಿಬಂದೆನಲ್ಲ ನನಗೂ ನಿನಗೂ ಆಗಿಬರೋಲ್ಲ, ನಮ್ಮಿಬ್ಬರ ಸ್ವಭಾವಗಳು ಬೇರೆ ಬೇರೆ, ಜೊತೇಗಿರೋದು ಕಷ್ಟ ಆಗುತ್ತೆ ಅಂತ. ಇದನ್ನ ಎಷ್ಟು ಹೊತ್ತು ಅವಳಿಗೆ ವಿವರಿಸಿದೆ ಆದ್ರೆ ಅವಳು ಮೊನ್ನೇನೂ ಅದೇ ಥರ ಆಡಿದಳು, ಅತ್ತಳು, ಬಾಯಿಗೆ ಬಂದ ಹಾಗೆ ಬೈದಳು, ಹೊಡೆದಳು, ನಾನು ಎದ್ದು ಬಂದೆ. ಆದ್ರೆ ಇನ್ನು ಮುಂದೆ ಎಲ್ಲಾ ಚೆನ್ನಾಗಿರುತ್ತೆ ನಾನು-ನನ್ನ ಮೈತ್ರಿ-ಅವಳ ಮಗು, ಅಲ್ಲ ನಮ್ಮ ಮಗು ಆ ಮಗುನ ನನ್ನ ಮಗು ಥರನೇ ನೋಡಿಕೊಳ್ತೀನಿ. ಅವಳ ಗಂಡನಿಗೂ ಹೇಳಿಯಾಯಿತು, ಆ ಪ್ರಾಣಿ ನನ್ನ ಹೆಂಡತಿ ಹತ್ತಿರ ಮಾತಾಡ್ತೀನಿ ಅಂತ ಹೇಳಿದಾನೆ.'ಈಗ ಮನೆಗೆ ಬಾ' ಅಂತ ಮೈತ್ರಿ ಫೋನ್ ಮಾಡಿದ್ದಳಲ್ಲ, 'ಮಾತಾಡಬೇಕು' ಅಂತ. ನನಗೆ ಗೊತ್ತು ಮೈತ್ರಿ ನನ್ನ ಜೊತೆಗೆ ಬಂದೇ ಬರ್ತಾಳೆ, ನನ್ನ ತುಂಬ ಪ್ರೀತಿಸುತ್ತಾಳೆ ಅವಳು, ಅಂದುಕೊಂಡು ಕಾರಿನ ಕೀ ತೆಗೆದುಕೊಂಡು ಹೊರಟ.
4
ತನ್ನ ದುಃಖ ದುಮ್ಮಾನವನ್ನೆಲ್ಲಾ ಬಸಿದು ಹಾಕುವ ಹವಣಿಕೆ ಇರಬೇಕು, ರಾತ್ರಿಯೆಲ್ಲಾ ಆಕಾಶವು ಬಿಕ್ಕಳಿಸಿ ಅಳುತ್ತಿತ್ತು. ಏಕೋ ನನಗರಿವಿಲ್ಲದೆಯೇ ನನ್ನ ಕೆನ್ನೆಯ ಮೇಲೂ ಇಳಿದ ನೀರು, ಕಾರಣ ತಿಳಿಯದು. ಸುಮ್ಮನೆ ಕಲ್ಪಿಸಿಕೊಂಡ ಆತಂಕಗಳು ನನ್ನ ಕಾಡುತ್ತಿದ್ದರೆ ನನ್ನ ಕಲ್ಪನೆಗಳ ಬಗ್ಗೆ ನನಗೇ ಭಯ ಮೂಡಿ, ಟೀವಿ ನೋಡಲು ಬೇಸರವಾಗಿ, ಓದಲು ತಂದ ಪುಸ್ತಕದಲ್ಲಿ ಮನಸ್ಸು ಇಳಿಯದೆ, ಏನೂ ಮಾಡಲು ಹೊಳಿಯದೆ, ಆ ರಾತ್ರಿಯಲ್ಲಿ ಮನೆ ಒರೆಸತೊಡಗಿದೆ.
ಯಾವಾಗ ಮಲಗಿದೆನೋ!! ಬೆಳಗ್ಗೆ ಎದ್ದು ರಂಗೋಲಿ ಹಾಕುತ್ತಿರುವಾಗ, ರಾತ್ರಿಯೆಲ್ಲಾ ಅತ್ತಿದ್ದರಿಂದಲೋ ಏನೋ ಎನ್ನುವಂತೆ ಕಣ್ಣು ಕೆಂಪಗಾಗಿರುವ ಆಕಾಶ, ದುಃಖ ಹೊರಹಾಕಿದ ಸುಖದ ಜೊತೆ. ಸುಮ್ಮನೆ ಅಚ್ಚರಿಯಿಂದ ನೋಡಿದೆ, ರಂಗೋಲಿ ಹಾಕುವುದನ್ನೂ ಮರೆತು- ಹಕ್ಕಿಯೊಂದು ತನ್ನ ಮೇಲಿದ್ದ ಮಳೆ ನೀರನ್ನು ಕೊಡಗಿಕೊಳ್ಳುತ್ತಿತ್ತು, ಅಲ್ಲೊಂದು ಮೈನಾ ಹಕ್ಕಿ ಮಾತಾಡುತ್ತಿದ್ದರೆ, ಹೆಸರೇ ಗೊತ್ತಿಲ್ಲದ ಹಕ್ಕಿಯೊಂದು ಹಾಡಾಗಿ ಉತ್ತರಿಸುತ್ತಿತ್ತು...
ಅವನ ಕಾರು ದೂರದಲ್ಲಿ ಬರುತ್ತಿರುವುದು ಕಾಣಿಸುತ್ತಿತ್ತು, ಅವನಿಗೆ ಉತ್ತರ ಹೇಳಬೇಕಲ್ಲ. ಪಾಪು ಅಮ್ಮಾ ಎಂದು ಕರೆದ ಹಾಗೆ ಅನ್ನಿಸಿತು ಒಳಗೆ ಹೋಗಿ ನಿದ್ದೆಗಣ್ಣಿನ ಮಗುವನ್ನು ಎತ್ತಿಕೊಂಡು ಬಂದೆ. ಅವನು ನಲ್ಲೀಕಾಯಿ ಮರಕ್ಕೆ ಒರಗಿ ನಿಂತ್ತಿದ್ದ. ವ್ರಶಾಂಕ್,ನಿನಗೆ ನನ್ನ ಗಂಡನ್ನ ಕೇಳೋಕ್ಕೆ ಒಪ್ಪಿಗೆ ಕೊಟ್ಟಿದ್ದರಲ್ಲಿ ನನ್ನ ಸ್ವಾರ್ಥವಿದೆ, ಏನೂ ಅನ್ನಿಸದಂತಹ ವ್ಯಕ್ತಿತ್ವದ ಅವನಿಗೆ ನೀ ಹೇಳುವ ವಿಚಾರದಿಂದ ಏನಾದರೂ ಅನ್ನಿಸಬಹುದು, ರೊಚ್ಚಿಗೆ ಬೀಳಬಹುದು, ರೇಗಬಹುದು, ಸಿಟ್ಟಾಗಬಹುದು ಅನ್ನೋ ಆಸೆಯಿಂದ, ಆದರೆ ಅಂತದೇನೂ ಆಗಲಿಲ್ಲ.
ಏನೂ ಅನ್ನಿಸದವನ ಜೊತೆ ಬದುಕಲು ಕಲಿತಿದೀನಿ, ಅಭ್ಯಾಸ ಆಗಿಹೋಗಿದೆ.ಅವನಿಗೆಪ್ರಾ ಪ್ರಾಮಿಸ್ ಮಾಡಿದೀನಿ ಅದಕೆ ಬರ್ತಿಲ್ಲಾ, ಅಥವಾ ಸಮಾಜಕ್ಕೆ ಹೆದರಿ ಬರ್ತಿಲ್ಲಾ ಅನ್ಕೊಬೇಡ. ನನಗೆ ಇದ್ಯಾವುದರ ಭಯ ಇಲ್ಲ. ಸೋ ಕಾಲ್ಡ್ 'ಎಥಿಕ್ಸ್', 'ಮಾರಲ್ಸ್' ಗಳಲ್ಲಿ ನನಗೆ ನಂಬಿಕೆ ಇಲ್ಲ. ಆದ್ರೂ, ನಾ ಬರೋಲ್ಲ. ಅಂದು ತೆರೆದ ಬಾಗಿಲಿಂದ ನೆಡೆದು ಹೋಗಲು ನೀನು ಒಪ್ಪಲಿಲ್ಲ, ಧೈರ್ಯ ಮಾಡಲಿಲ್ಲ, ನಿನಗೆ ತುಂಬ ಬಾಗಿಲುಗಳಿದ್ದವು. ಇಂದು ನನ್ನ ಬಾಗಿಲುಗಳು ಮುಚ್ಚಿವೆ, ಗೋಡೆ ಒಡೆಯುವ ಧೈರ್ಯ ಇದೆ ಆದರೆ ಮನಸಿಲ್ಲ. ನಾನು ಬರೋಲ್ಲ ಅಂದೆ, ನಲ್ಲೀ ಕಾಯಿ ಮರಕ್ಕೆ ಒರಗಿ ನಿಂತವನನ್ನು ನೋಡುತ್ತ.. ತೊಡೆಯ ಮೇಲಿನ ಮಗಳು ನಕ್ಕಂತಾಯ್ತು.
Wednesday, August 29, 2007
ಮಳೆ-ನೆನಪು
ನಾನು ಸುಶ್ ನಮ್ಮ ಹಾಸ್ಟಲೆಂಬ ಜೈಲಿನಲ್ಲಿ ನನ್ನ ರೂಮಿನ ಮುಂದಿನ ಕಿಟಕಿಯ ಬಳಿ ಬುಕ್ಕು ಪೆನ್ನು ಹಿಡಿದುಕೊಂಡು ಕುಳಿತಿದ್ದೆವು. ಮನೆಯಂಗಳದಲ್ಲೊಂದು ಸಾಹಿತ್ಯ ಸಂಜೆ ಎಂಬ ಕಾರ್ಯಕ್ರಮದ ರಿಪೋರ್ಟು ಮಾಡೊಕ್ಕಿತ್ತು.. ಜರ್ನಲಿಸಮ್ ಮೇಡಂ ಅಸೈನ್ಮೆಂಟ್ ಕೊಟ್ಟಿದ್ದರು. ಸುಶ್ ಬರೆಯೋಕ್ಕೆ ಶುರು ಮಾಡಿದ್ದಳು ನಾನು ಕಿಟಕಿಯಂದ ಕಾಣುವ ನಮ್ಮ ಕಾಲೇಜನ್ನೇ ನೋಡುತ್ತಾ ಕುಳಿತ್ತಿದ್ದೆ. ಸುಶ್ ಮಳೆ ಅಂದ್ರೆ ಏನನ್ನಿಸುತ್ತೆ ನಿಂಗೆ ಅಂತ ಕೇಳ್ದೆ ಅವಳು ಸುಮ್ನೆ ನನ್ನ ದುರುಗುಟ್ಟಿಕೊಂಡು ನೋಡಿ ಮತ್ತೆ ಬರೆಯೊದನ್ನ ಮುಂದುವರೆಸಿದಳು."ಇವಳಿಗೊಂದು ಮಳೆ ಹುಚ್ಚು" ಅಂತ ಗೊಣಗಿದ್ದು ಕೇಳಿಸಿತು.
ಕಡಲೂರಿನ ಮಳೆ ವಿಚಿತ್ರ .ನಮ್ಮೂರಲ್ಲಿ ಚಂದ, ಮಳೆ ಬರೋಕ್ಕೆ ಶುರುವಾದರೆ ಪೂರ್ತಿ ನಿಂತಿತು ಅಂತ ಹೇಳೋಕ್ಕಾಗಲ್ಲ ಸಣ್ಣಗೆ ಉದುರುತ್ತಾನೇ ಇರುತ್ತೆ.ಇಲ್ಲಿ ವಿಚಿತ್ರ ಸೂಚನೆಯನ್ನೇ ಕೊಡದೆ ದಬ ದಬ ಅಂತ ಸುರಿದು ಮತ್ತೆ ನಿಂತೇ ಹೋಗುತ್ತೆ ಅದರ ಘಮವನ್ನೂ ಉಳಿಸದೆ.
ನಮ್ಮೂರ ಮಳೆ ಅಮ್ಮ ಮಾಡೋ ಕಾಫಿ ಥರ; ಬೆಳಗ್ಗೆ ಆರು ಮೂವತ್ತಕ್ಕೆ ಸ್ವಲ್ಪವೇ ಸ್ವಲ್ಪ ಒಂದು ಅರ್ಧ ಹಿಡಿಯಷ್ಟು ಕಾಫಿ ಬೀಜವನ್ನು ಹುರಿದು, ಅದನ್ನ ಪುಡಿ ಮಾಡುವ ಬಿಳೀ ಮಿಷಿನ್ನಿಗೆ ಹಾಕಿ ಟರ್ರ್ ಅನ್ನಿಸುತ್ತಿರುವಾಗಲೇ ಮನೆಯೆಲ್ಲಾ ಹಿತವಾಗಿ ಹರಡಿದ ಕಾಫಿಯ ಘಮ ಅದನ್ನ ಕುದಿಯೋ ಸಕ್ಕರೆ ನೀರಿಗೆ ಹಾಕಿ, ಸೋಸಿ, ಆಗಷ್ಟೇ ಹಾಲಿನವನು ತಂದ ಹಾಲನ್ನು ಕಾಯಿಸಿ ಅದನ್ನ ಡಿಕಾಕ್ಷನ್ನಿಗೆ ಸೇರಿಸಿ ಕುಡಿಯಲು ಕೊಟ್ಟ ಹಾಗೆ.. ಮಳೆ ಬರುವ ಮುಂಚೆಯೂ ಬಂದ ಮೇಲೂ ಹಿತವಾಗಿ ಹರಡಿದ ಮಳೆಯ ವಾತಾವರಣ, ಥೇಟ್ ಅಮ್ಮನ ಕಾಫಿಯೇ ಕುಡಿಯೋ ಮುಂಚೆಯೂ ಕುಡಿದ ಮೇಲೂ ಹಿತವೆನಿಸುವ ಅದರ ರುಚಿಯಂತೆ.
ಈ ಯೋಚನಾ ಲಹರಿಯನ್ನು ತುಂಡರಿಸಿದ್ದು ಸೂಚನೆಯನ್ನೇ ಕೊಡದೆ ಸುರಿಯಲು ಶುರುವಾದ ಮಳೆ ಸುಶ್ ನನ್ನ ನೊಡಿ ಮುಗುಳ್ನಕ್ಕಳು. ನಮ್ಮ ಕಾಲೇಜು ಮಳೆಯಲ್ಲಿ ನೆನೆಯುತ್ತಿತ್ತು.ತಂಗಾಳಿಯ ಜೊತೆ ಚುರುಚೂರೇ ಕಿಟಕಿಯೊಳಕ್ಕೆ ನುಗ್ಗುತ್ತಿರುವ ಮಳೆಯ ಹನಿಗಳು ಹಿತವಾಗಿ ನಮ್ಮಿಬ್ಬರನ್ನೂ ಒದ್ದೆಯಾಗಿಸುತ್ತಿತ್ತು.. ಸುಶ್ ಪುಸ್ತಕ ಮುಚ್ಚಿಟ್ಟು ಏನೋ ಯೊಚಿಸತೊಡಗಿದಳು...
ಮಳೆ ಅಂದ್ರೆ ನೆನಪು. ಮಳೆ ನೆಲವನ್ನು ಅಪ್ಪಿ ಚಿಮ್ಮುತ್ತಿದ್ದರೆ, ನನ್ನೊಳಗಿನ ನೆನಪಿನ ಪುಟಗಳು ಒಂದೊಂದಾಗಿ ಬಿಚ್ಚಿಕೊಳ್ಳಲು ಶುರು. ತಾತನ ಮನೆ ನೆನಪು, ಮಳೆ ಬೀಳುತ್ತಿದ್ದಂತೆಯೇ ಉರಿನಲ್ಲಿ ಮನೆ ಮುಂದೆ ಹರಡಿರುವ ಅಡಕೆಯನ್ನೆಲ್ಲಾ ಆ ದೊಡ್ಡ ದೊಡ್ಡ ಗೋಣಿ ಚೇಲದ ಸಮೇತ ಒಳಗೆ ತೆಗದುಕೊಂಡು ಹೋಗುವ ಚಿಕ್ಕಮ್ಮ, ಸರ ಸರನೆ ಓಡಿ ಬಂದು ಅವಳ ಜೊತೆ ಕೈ ಜೊಡಿಸುವ ಚಿಕ್ಕಪ್ಪ, ಆಗಿನ ಗಡಿಬಿಡಿ, 'ಹಾಳು ಮಳೆ' ಎಂದು ಸುಮ್ಮನೆ ಬಯ್ಯುವ ಪಾಟಿ(ಅಜ್ಜಿ), ಮಳೆಯಲ್ಲಿ ಒದ್ದೆಯಾಗುತ್ತಿರುವ ತನ್ನ ಹದಿನಾರು ಮೊಳದ ಸೀರೆಯನ್ನು ತೆಗೆಯಲು ಬರುತ್ತಿರುವ ಎದುರು ಮನೆಯ ಶೇಶಮ್ ಪಾಟಿ, ಮಳೆ ಶುರುವಾಗುತ್ತಿದ್ದಂತೆಯೇ ಕಾಫಿಗೆ ಹವಣಿಸುವ ಅಜ್ಜ,ಇವನ್ನೆಲ್ಲಾ ಪ್ರತೀ ವರ್ಷವೂ ಹೊಸದು ಎನ್ನುವಂತೆ ನೋಡುವ ನಾವು.....
ಏನೋ ಯೋಚಿಸುತ್ತಿದ್ದವಳು, ಹ್ಮ್ ಮ್ ಮ್.. ಎಂದು ನಿಟ್ಟುಸಿರು ಬಿಡುತ್ತಾ "ಮಳೆ ಅಂದ್ರೆ ನೆನಪು." ಅಂದಳು ಸುಶ್. ನಾನು ಸುಮ್ಮನೆ ನಕ್ಕೆ....
ಕಡಲೂರಿನ ಮಳೆ ವಿಚಿತ್ರ .ನಮ್ಮೂರಲ್ಲಿ ಚಂದ, ಮಳೆ ಬರೋಕ್ಕೆ ಶುರುವಾದರೆ ಪೂರ್ತಿ ನಿಂತಿತು ಅಂತ ಹೇಳೋಕ್ಕಾಗಲ್ಲ ಸಣ್ಣಗೆ ಉದುರುತ್ತಾನೇ ಇರುತ್ತೆ.ಇಲ್ಲಿ ವಿಚಿತ್ರ ಸೂಚನೆಯನ್ನೇ ಕೊಡದೆ ದಬ ದಬ ಅಂತ ಸುರಿದು ಮತ್ತೆ ನಿಂತೇ ಹೋಗುತ್ತೆ ಅದರ ಘಮವನ್ನೂ ಉಳಿಸದೆ.
ನಮ್ಮೂರ ಮಳೆ ಅಮ್ಮ ಮಾಡೋ ಕಾಫಿ ಥರ; ಬೆಳಗ್ಗೆ ಆರು ಮೂವತ್ತಕ್ಕೆ ಸ್ವಲ್ಪವೇ ಸ್ವಲ್ಪ ಒಂದು ಅರ್ಧ ಹಿಡಿಯಷ್ಟು ಕಾಫಿ ಬೀಜವನ್ನು ಹುರಿದು, ಅದನ್ನ ಪುಡಿ ಮಾಡುವ ಬಿಳೀ ಮಿಷಿನ್ನಿಗೆ ಹಾಕಿ ಟರ್ರ್ ಅನ್ನಿಸುತ್ತಿರುವಾಗಲೇ ಮನೆಯೆಲ್ಲಾ ಹಿತವಾಗಿ ಹರಡಿದ ಕಾಫಿಯ ಘಮ ಅದನ್ನ ಕುದಿಯೋ ಸಕ್ಕರೆ ನೀರಿಗೆ ಹಾಕಿ, ಸೋಸಿ, ಆಗಷ್ಟೇ ಹಾಲಿನವನು ತಂದ ಹಾಲನ್ನು ಕಾಯಿಸಿ ಅದನ್ನ ಡಿಕಾಕ್ಷನ್ನಿಗೆ ಸೇರಿಸಿ ಕುಡಿಯಲು ಕೊಟ್ಟ ಹಾಗೆ.. ಮಳೆ ಬರುವ ಮುಂಚೆಯೂ ಬಂದ ಮೇಲೂ ಹಿತವಾಗಿ ಹರಡಿದ ಮಳೆಯ ವಾತಾವರಣ, ಥೇಟ್ ಅಮ್ಮನ ಕಾಫಿಯೇ ಕುಡಿಯೋ ಮುಂಚೆಯೂ ಕುಡಿದ ಮೇಲೂ ಹಿತವೆನಿಸುವ ಅದರ ರುಚಿಯಂತೆ.
ಈ ಯೋಚನಾ ಲಹರಿಯನ್ನು ತುಂಡರಿಸಿದ್ದು ಸೂಚನೆಯನ್ನೇ ಕೊಡದೆ ಸುರಿಯಲು ಶುರುವಾದ ಮಳೆ ಸುಶ್ ನನ್ನ ನೊಡಿ ಮುಗುಳ್ನಕ್ಕಳು. ನಮ್ಮ ಕಾಲೇಜು ಮಳೆಯಲ್ಲಿ ನೆನೆಯುತ್ತಿತ್ತು.ತಂಗಾಳಿಯ ಜೊತೆ ಚುರುಚೂರೇ ಕಿಟಕಿಯೊಳಕ್ಕೆ ನುಗ್ಗುತ್ತಿರುವ ಮಳೆಯ ಹನಿಗಳು ಹಿತವಾಗಿ ನಮ್ಮಿಬ್ಬರನ್ನೂ ಒದ್ದೆಯಾಗಿಸುತ್ತಿತ್ತು.. ಸುಶ್ ಪುಸ್ತಕ ಮುಚ್ಚಿಟ್ಟು ಏನೋ ಯೊಚಿಸತೊಡಗಿದಳು...
ಮಳೆ ಅಂದ್ರೆ ನೆನಪು. ಮಳೆ ನೆಲವನ್ನು ಅಪ್ಪಿ ಚಿಮ್ಮುತ್ತಿದ್ದರೆ, ನನ್ನೊಳಗಿನ ನೆನಪಿನ ಪುಟಗಳು ಒಂದೊಂದಾಗಿ ಬಿಚ್ಚಿಕೊಳ್ಳಲು ಶುರು. ತಾತನ ಮನೆ ನೆನಪು, ಮಳೆ ಬೀಳುತ್ತಿದ್ದಂತೆಯೇ ಉರಿನಲ್ಲಿ ಮನೆ ಮುಂದೆ ಹರಡಿರುವ ಅಡಕೆಯನ್ನೆಲ್ಲಾ ಆ ದೊಡ್ಡ ದೊಡ್ಡ ಗೋಣಿ ಚೇಲದ ಸಮೇತ ಒಳಗೆ ತೆಗದುಕೊಂಡು ಹೋಗುವ ಚಿಕ್ಕಮ್ಮ, ಸರ ಸರನೆ ಓಡಿ ಬಂದು ಅವಳ ಜೊತೆ ಕೈ ಜೊಡಿಸುವ ಚಿಕ್ಕಪ್ಪ, ಆಗಿನ ಗಡಿಬಿಡಿ, 'ಹಾಳು ಮಳೆ' ಎಂದು ಸುಮ್ಮನೆ ಬಯ್ಯುವ ಪಾಟಿ(ಅಜ್ಜಿ), ಮಳೆಯಲ್ಲಿ ಒದ್ದೆಯಾಗುತ್ತಿರುವ ತನ್ನ ಹದಿನಾರು ಮೊಳದ ಸೀರೆಯನ್ನು ತೆಗೆಯಲು ಬರುತ್ತಿರುವ ಎದುರು ಮನೆಯ ಶೇಶಮ್ ಪಾಟಿ, ಮಳೆ ಶುರುವಾಗುತ್ತಿದ್ದಂತೆಯೇ ಕಾಫಿಗೆ ಹವಣಿಸುವ ಅಜ್ಜ,ಇವನ್ನೆಲ್ಲಾ ಪ್ರತೀ ವರ್ಷವೂ ಹೊಸದು ಎನ್ನುವಂತೆ ನೋಡುವ ನಾವು.....
ಏನೋ ಯೋಚಿಸುತ್ತಿದ್ದವಳು, ಹ್ಮ್ ಮ್ ಮ್.. ಎಂದು ನಿಟ್ಟುಸಿರು ಬಿಡುತ್ತಾ "ಮಳೆ ಅಂದ್ರೆ ನೆನಪು." ಅಂದಳು ಸುಶ್. ನಾನು ಸುಮ್ಮನೆ ನಕ್ಕೆ....
Tuesday, August 21, 2007
ಅಮ್ಮಾ.. ನಿನ್ನ ಎದೆಯಾಳದಲ್ಲಿ..
ಉಹೂಂ, ಅಪ್ಪನ ಮುಖ ನೆನಪಿಲ್ಲ ನನಗೆ ನನಗೆ ನೆನಪಿರೋದೆಲ್ಲ ಬರೀ ಇಷ್ಟೆ ಅಮ್ಮ ಕೆಂಪು ಸೀರೆ ಉಟ್ಟುಕೊಂಡು ಒಂದು ಶವದ ಮುಂದೆ ಕೂತಿರೋದು (ಅದು ಶವ ಅಂತಾನೂ ಗೊತ್ತಿರಲಿಲ್ಲ ನಂಗೆ ಯಾರೋ ಮಲಗಿದಾರಲ್ಲ .. ಯಾಕೆ ಬೀದೀಲಿ ಮಲಗಿದಾರೆ ಅನ್ಕೊಂಡಿದ್ದೆ) ಮತ್ತೆ ಶೂನ್ಯವನ್ನು ದ್ರುಷ್ಟಿಸುವ ಅಮ್ಮನ ಕಣ್ಣುಗಳು. ಎಲ್ಲರೂ ಅಳುತ್ತಿದ್ದರು, ಅಮ್ಮನ ಕಣ್ಣು ಭಯವಾಗೊಷ್ಟು ಕೆಂಪಾಗಿತ್ತು. ಪ್ರಾಯಷಃ ರಾತ್ರಿಯೆಲ್ಲಾ ಅತ್ತಿರಬೇಕು. ಏನಾಗಿದೆ ಅಂತ ಗೊತ್ತಿರಲಿಲ್ಲ ನನಗೆ ಆದರೆ ಅಮ್ಮನಲ್ಲಿ ಆದ ಬದಲಾವಣೆ ನನಗೆ ಅಳು ತರಿಸಿತ್ತು.ಅಮ್ಮನ ಹತ್ತಿರ ಹೋಗೋಕ್ಕೆ ಬಿಟ್ಟಿರಲಿಲ್ಲ ನಮ್ಮನ್ನ
"ಈ ಮೂರು ವರ್ಷದ ಮಗೀಗೆ ನಿನ್ ಅಪ್ಪಜಿ ಸತ್ತ್ ಹೋಗೈತೆ ಅಂತ ಹೇಗ್ ಹೇಳಾದು?"
ಅಂತ ಅಜ್ಜಿ ದೊಡ್ಡ್ ದನಿ ಮಾಡಿ ಅಳೋಕ್ಕೆ ಶುರು ಮಾಡಿದ್ಲು ನನಗೆ ಭಯ ಆಗಿ ನಾನು ಮನೆಯಾಳು ಮಂಜನ ಹತ್ರ ಓಡೋಗಿದ್ದೆ
ಹ್ಮ್ಮ್ಮ್ಮ್ ಮ್ ಮ್... ಅಂತ ದೊಡ್ಡ ನಿಟ್ಟುಸಿರುಬಿಟ್ಟು ನಾನ್ಯಾವಾಗಲೂ ಇಷ್ಟೇ ನೆನಪುಗಳಲ್ಲೇ ಮುಳುಗಿ ಹೋಗಿರ್ತೀನಿ ಅವರು ಬರೋಷ್ಟೊತ್ತಿಗೆ ಬೀಟ್ರೂಟ್ ಪಲ್ಯ ಮಾಡಿಟ್ಟಿರಬೇಕು.ಇರೋ ಮೂರು ಜನಕ್ಕೆ ಎರಡು ಕೇಜಿ ಬೀಟ್ರೂಟ್ ತಂದಿಟ್ಟಿದಾರೆ ಬರೀ ಅದರದೇ ಪಲ್ಯ, ಸಾಂಬಾರು, ಗೊಜ್ಜು ಅಂತ ದಿನಾ ಮಾಡಿ ಹಾಕಬೇಕು. ಆವಾಗ ಬುದ್ದಿ ಬರುತ್ತೆ ಅಂದುಕೊಂಡು, ಅಡುಗೆ ಮನೆ ಕಡೆ ನೆಡೆದಳು.
ವಾಣಿ ಗ್ರುಹಿಣಿ ಮ್ ಸ್ ಸಿ ಮಡಿದಾಳೆ ಗಂಡ ಆರ್ ಬಿ ಐ ನಲ್ಲಿ ಮ್ಯಾನೇಜರ್. ದೊಡ್ಡ ಬ್ಯಾಂಕು, ದೊಡ್ಡ ಕೆಲಸ, ದೊಡ್ಡ ಸಂಬಳ. ಇವರಿಗೆ ಒಬ್ಬನೇ ಮಗ ರಾಘು. ವಾಣಿಗೆ ಅಮ್ಮ ತನ್ನ ಜೊತೇಲಿ ಇರಲಿ ಅನ್ನೋ ಆಸೆ ಆದರೆ ಅವಳ ಅಮ್ಮ ಮಾತ್ರ ತನ್ನ ಹಳ್ಳಿ ಮನೆಯೇ ಸ್ವರ್ಗವೆಂದುಕೊಂಡಾಕೆ. ಬೇಜಾರಾದಾಗ ವಾಣಿ ಮನೇಲಿ ಸ್ವಲ್ಪ ದಿನ ಇನ್ನೊಂದು ಸ್ವಲ್ಪ ದಿನ ವಾಣಿ ಅಕ್ಕ ವೀಣನ ಮನೇಲಿರ್ತಾರೆ.
ವಸುದಕ್ಕನ ಮದುವೆ ದಿನದ ಚಿತ್ರ ಇನ್ನೂ ಕಣ್ಣಲ್ಲಿ ಕಟ್ಟಿದಂತಿದೆ ಅವಳ ಅಮ್ಮ ಸತ್ತ ಮೇಲಲ್ಲವೆ ನಮ್ಮಮ್ಮ ಎರಡನೇ ಹೆಂಡತಿಯಾಗಿ ಆ ಮನೆ ಸೇರಿದ್ದು. ಅವಳೂ 'ಅಮ್ಮ' ಎಂದೇ ಕರೆಯುತ್ತಿದ್ದಳು ಆದರೆ ಅತ್ತೆ ,ಅಜ್ಜಿ, ಎಲ್ಲರೂ ಸೇರಿಕೊಂಡು ಅವಳ ಮದುವೆಯ ಯಾವ ಕೆಲಸಕ್ಕೂ ಕರೆಯದೆ ದೂರ ಇಟ್ಟಿದ್ದರು. ಮದುವೆಗೆ ಕರೆಯುವ ಯೋಚನೆಯನ್ನೂ ಮಾಡಿರಲಿಲ್ಲ ಅವರು ಅವಳ ಮದುವೆಯ ಓಲಗದ ಸದ್ದು ಬಸ್ಸ್ಟಾಂಡಿನಲ್ಲಿ ಮಂಗಳಜ್ಜಿ ಮನೆಗೆ ಹೋಗಲು ಬಸ್ಸಿಗೆ ಕಾಯುತ್ತ ಕುಳಿತಿದ್ದ ನಮಗೆ ಕೇಳಿಸುತ್ತಿತ್ತು. ನಾನು ಜೋರಾಗಿ ಅಳುತ್ತಿದ್ದೆ, ನನಗಿಂತ ಎರಡೇ ವರ್ಷಕ್ಕೆ ದೊಡ್ಡವಳಾದ ವೀಣ ವಯಸ್ಸಿಗೆ ಮೀರಿದ ಅರಿವನ್ನು ಮುಖದಲ್ಲಿ ಹೊತ್ತು ಮೌನವಾಗಿ ಕುಳಿತಿದ್ದಳು.ಅಮ್ಮನ ಕಣ್ಣು ಮತ್ತದೇ ಶೂನ್ಯದೆಡೆಗೆ...
ಗಂಗಜ್ಜಿ ಹೆಸರೇ ಒಂದು ನಡುಕ ಇಡೀ ಊರಿಗೆ ಊರೇ ಹೆದರುತ್ತಿತ್ತು ಈ ಹೆಸರಿಗೆ. ಗಂಗಜ್ಜಿಯಂತಹ ಅತ್ತೆ ಸಿಗುತ್ತಳೆ ಅಂತ ಗೊತ್ತಿದ್ದರೂ ಮಂಗಳಜ್ಜಿ ತನ್ನ ಪ್ರೀತಿಯ ಕೊನೇ ಮಗಳನ್ನು ಹೇಗೆ ಅವರ ಮನೆಗೆ ಕೊಟ್ಟರು ಅದೂ ಎರಡನೇ ಸಂಭಂದಕ್ಕೆ? ಶ್ರೀಮಂತರ ಮನೆ ಅಂತಲ? ಸೆರೆಮನೆ ಆದರೂ ಪರವಾಗಿಲ್ಲ ಬಂಗಾರದ್ದಲ್ಲವ ಅನ್ನೋ ಸ್ವಭಾವವ?
ನಿಮ್ಮ ಅಪ್ಪ ಎಂದರೆ ಗಂಡು ಗಂಡು ದೊಡ್ಡಪ್ಪ ಯಾವುದ್ದಕ್ಕೂ ಲಾಯಕ್ಕಿಲ್ಲ ಅನ್ನುತ್ತಿದ್ದರು ಊರಿನವರು ಯಾವುದೇ ಇತಿಮಿತಿ ಇಲ್ಲದೆ ಖರ್ಚು ಮಾಡುತ್ತಿದ್ದರಂತೆ ಅಪ್ಪ. ಗಂಗಜ್ಜಿಯಂತಹ ಗಂಗಜ್ಜಿ ಅಪ್ಪನಿಗೆ ಹೆದರುತ್ತ್ಹಿದ್ದಳಂತೆ.ತನಗೆ ಕಿಂಚಿತ್ತೂ ಹೆದರದ ಬಿಟ್ಟರೆ ತನ್ನನ್ನೇ ಹುರಿದು ತಿನ್ನುವಂತ ತನ್ನ ಮಗನ ಮೇಲೆ ಗಂಗಜ್ಜಿಗೆ ಅಸಾದ್ಯ ಸಿಟ್ಟು.
ಅವಳೇ ಅಪ್ಪನ ಮೊದಲನೇ ಹೆಂಡತಿಯನ್ನು ಸಾಯಿಸಿದ್ದು, ಆಮೇಲೆ ಅಪ್ಪನನ್ನೂ ಕೊಂದಳು. ನಾನು ಹುಟ್ಟಿದಾಗ ತಂದೆಗೆ ಆಗದ ನಕ್ಷತ್ರದಲ್ಲಿ ಹುಟ್ಟಿದಾಳೆ ಸಾಯಿಸಿಬಿಡಿ ಎಂದು ನನ್ನ ಕೊಲ್ಲಲು ಮಂಗಳಜ್ಜಿಯ ಮನೆಯವರೆಗೂ ಬಂದಿದ್ದಳಂತೆ. ಅಕ್ಕನ ಬಾಯಿಗೆ ಭಾರದ ಕಬ್ಬಿಣ ಹಾಕಿ ಅವಳು ಸಾಯುವ ಸ್ಥಿತಿ ತಲುಪಿ ಒದ್ದಾಡುತ್ತಿದ್ದರೂ ಸುಮ್ಮನೇ ಯಾವುದೇ ಭಾವನೆಗಳಿಲ್ಲದೆ ನೋಡುತ್ತಿದ್ದ ಅಜ್ಜಿಯನ್ನು ಕಂಡು ಮಂಜ ದಂಗಾಗಿದ್ದನಂತೆ, ಅವನು ಅ ದಿನ ಅಲ್ಲಿಲ್ಲದಿದ್ದರೆ ಅಕ್ಕ ಎಂದು ಕರೆಯಲೂ ಯಾರಿರುತ್ತಿರಲಿಲ್ಲ. ಅಜ್ಜಿಗೆ ಕೊಲೆ ಮಾಡುವುದು ಒಂದು fancy ಆಗಿಬಿಟ್ಟಿತ್ತಾ?
"ನಿಮ್ಮಪ್ಪ ರಾಜಪ್ಪ ಹೆಸರಿಗೆ ತಕ್ಕ ಹಾಗೆ ರಾಜನಂತೆ ಇರುತ್ತಿದ್ದ. ಬಿಳೀ ಪಂಚೆ, ಬಿಳೀ ಶರಟು, ಕೈಯಲ್ಲಿ ಪುಸ್ತಕ ಮತ್ತು ಪಂಚೆಯ ಗಂಟಿಗೆ ಸಿಗಿಸಿದ ಮಚ್ಚು ಅವನು ತೋಟದ ಕಡೆಗೆ ಹೊರಟ ಅಂದರೆ ಆಳುಗಳೆಲ್ಲಾ ಚುರುಕಾಗಿ ಕೆಲಸ ಮಾಡಲು ಶುರು ಮಾಡುತ್ತಿದ್ದರು. ಅವ್ನ ಗತ್ತೇ ಗತ್ತು"
ಎಂದು ಹೇಳುತ್ತಿದ್ದ ಪಕ್ಕದ ಮನೆ ಪದ್ಮಜ್ಜಿಯ ಮಾತುಗಳಿಂದ ಅಪ್ಪ ಹೇಗಿದ್ದಿರಬಹುದು ಎಂದು ತುಂಬ ಸಾರಿ ಕಲ್ಪಿಸಿಕೊಂಡಿದ್ದೇನೆ... ಅಪ್ಪ ಇರಬೇಕಿತ್ತು.....
ಆಸ್ತಿ ಭಾಗ ಮಾಡೋವಾಗ ಮಾವ ಸಹಾಯಕ್ಕೆ ಬಂದ್ದಿದ್ದ ಅನ್ನೋದೆನೋ ನಿಜ, ಆದರೆ ಆಮೇಲೆ ಅವನೂ ಅತ್ತೆಯೂ ಸೇರಿಕೊಂಡು ಗುಕ್ಕುಗುಕ್ಕಾಗಿ ನಮ್ಮ ಆಸ್ತಿಯನ್ನು ತಿನ್ನುತ್ತಿದ್ದುದು ಗೊತ್ತಾಗುತ್ತಿದ್ದರೂ, ಅಮ್ಮ ಏಕೆ ಸುಮ್ಮನಿದ್ದಳು ?ಗೊತ್ತಾಗುವುದಿಲ್ಲ."ಗಂಡು ದಿಕ್ಕಿಲ್ಲದ ಮನೆ ಅವನಾದರೂ ಒತ್ತಾಸೆಗೆ ಇರಲಿ ಅಂತ ಸುಮ್ಮನಿದ್ದೆ" ಅಂದಿದ್ದಳು ಬೇರೆ ಯಾವ ಕಾರಣವೂ ಹೊಳೆಯದೆ ನಿಜವಾದ ವಿಶಯವೆಂದರೆ ತನ್ನ ಅಣ್ಣನೆಂದರೆ ಸುಮ್ಮನೆ ಪ್ರೀತಿ ಅವಳಿಗೆ.ಅಣ್ಣನಿಗೆ ಏನೂ ಗೊತ್ತಗಲ್ಲ ಅತ್ತಿಗೆ ಹೇಳಿದಂಗೆ ಕುಣಿತಾನೆ ಪಾಪ ಅನ್ನೊ ನಂಬಿಕೆ ಅವಳದ್ದು ಆದರೆ ಮಾವ ಎಂಥವನೆಂದು ನನಗೆ ಗೊತ್ತಾಗುತ್ತಿತ್ತು ನಾನು ಇವತ್ತಿಗೂ ಮಾವನನ್ನು ಮಾತಾಡಿಸುತ್ತಿಲ್ಲ....
ಅಪ್ಪನ ಜೊತೆಯ ಐದು ವರ್ಷದ ದಾಂಪತ್ಯ ಜೀವನದಲ್ಲಿ ನೀನು ಸುಖವಾಗಿದ್ದೆಯ ಎಂದು ಕೇಳಿದರೆ ಅಮ್ಮ ಇಂದಿಗೂ ಉತ್ತರಿಸುವುದಿಲ್ಲ ಉತ್ತರ ಕೊಡದೇ ಇರುವುದೂ ಒಂದು ಉತ್ತರವೇ.. ಆದರೆ ನನಗೂ ಅಮ್ಮನ ಉತ್ತರ ಬೇಕಿಲ್ಲ.. ಈ ಪ್ರಶ್ನೆ ಕೇಳಿದ ನಂತರ ಮೌನವಾಗುವ ಅಮ್ಮ, ಇಪ್ಪತ್ತು ಇಪ್ಪತ್ತೆರೆಡು ವರ್ಷ ಹಿಂದಕ್ಕೆ ಹೋಗುವ ಅವಳ ಯೋಚನೆ, ಅವಳ ಮೌನದಿಂದ ವಿಸ್ತರಿತವಾಗುವ ನನ್ನ ಕಲ್ಪನೆ ಇಷ್ಟ ನನಗೆ ಎಂದುಕೊಳುತ್ತಾ ಸಾರು ಕುದಿಯುವುದನ್ನೆ ನೋಡುತ್ತಿದ್ದಳು.
ನಮ್ಮಿಬ್ಬರ ಓದಿನ ಪ್ರತಿ ಹಂತದಲ್ಲೂ ಅಮ್ಮ ಖುಷಿಯಾಗಿ ಪಾಲ್ಗೊಂಡಿದ್ದಾಳೆ. ಅಕ್ಕನ ಮದುವೆಯಲ್ಲೂ ಅವಳ ಕಣ್ಗಳು ಖುಷಿಯಿಂದ ಅರಳಿದ್ದವು, ಆದರೆ ನನ್ನ ಮದುವೆಯ ಸಿದ್ದತೆಗಳನ್ನು ಆಸಕ್ತಿಯಿಂದ ಮಾಡುತ್ತಿದ್ದವಳು ಮದುವೆಯ ದಿನ ಸುಮ್ಮನಾಗಿಬಿಟ್ಟಿದ್ದಳು. ಯಾವುದರಲ್ಲೂ ಆಸಕ್ತಿ ಇರದ ಹಾಗೆ ಇದ್ದಳು,.. ಕಡೇ ಪಕ್ಷ ನನ್ನ ಕಳಿಸಿಕೊಡುವಾಗ ಕೂಡ ಅಳಲಿಲ್ಲ ಕಣ್ಣು ಶೂನ್ಯದೆಡೆಗೆ...
ಅಮ್ಮ ಯಾಕವತ್ತು ಹಾಗಿದ್ದೆ ಅಂದರೆ ತುಂಬ ಹೊತ್ತಿನ ನಂತರ ಇದಕ್ಕೂ ಉತ್ತರ ಕೊಡುವುದಿಲ್ಲವೇನೋ ಅಂದುಕೊಳುತ್ತಿದ್ದಾಗ ನಿಧಾನವಾಗಿ ಹೆಳಿದಳು
"ನಿಮ್ಮಪ್ಪ ಇದ್ದಾಗ ಅಂಥವರನ್ನು ಅರ್ಥಮಾಡಿಕೊಳ್ಳಬೇಕೆಂಬ ಕನಸಿತ್ತು, ಅವರು ಸತ್ತಾಗ ಎಲ್ಲ ಶೂನ್ಯ ಅನ್ನಿಸುತ್ತಿತ್ತು. ಆದ್ದರೆ ನಿಮ್ಮನ್ನು ಚೆನ್ನಾಗಿ ಓದಿಸುವ ಕನಸು ಕಟ್ಟಿಕೊಂಡೆ. ನಿಮ್ಮ ಓದಾದಮೇಲೆ ನಿಮ್ಮಗಳ ಮದುವೆಯ ಕನಸು, ನಿನ್ನ ಮದುವೆಯಾದ ಮೇಲೆ ಮತ್ತೆ ಶೂನ್ಯಕ್ಕೆ ಹಿಂತಿರುಗಿದೆ. ನಿಮಗಾಗಿ ನನ್ನ ಜೀವನ ಮುಡುಪಿಟ್ಟೆ ಅನ್ನೊ ಬೊಗಳೆ ಮಾತು ಹೇಳೊಲ್ಲ ನಾನು. ಬದುಕೊಕ್ಕೆ ಕನಸು ಬೆಕಿತ್ತು. ನಿಮ್ಮಗಳ ಭವಿಷ್ಯದ ಕನಸು, ಸುಖದ ಕನಸು, ನಿಮ್ಮ ಸುಖ-ದುಃಖ, ಆಸೆ, ಅಚ್ಚರಿ, ಅಳು, ಪ್ರತಿಯೊಂದನ್ನೂ ನನ್ನ ಜೊತೆಗೇ ಹಂಚಿಕೊಳ್ಳುತ್ತಿದ್ದಿರಿ 'ನನ್ನ ಬಿಟ್ಟರೆ ನಿಮಗೆ ಇನ್ಯಾರೂ ಇಲ್ಲ' ಅನ್ನೋಭಾವನೆಯೇ ಖುಷಿ ಕೊಡುತ್ತಿತ್ತು ನಂಗೆ. ಆದರೆ ನೀನು ಮದುವೆಯಾಗಿ ಹೋದಾಗ ಎಲ್ಲ ಕಳಕೊಂಡ ಭಾವ ನಿನ್ನ ಮದುವೆ ಸಮಯದಲ್ಲಿ ಕವಿದ ಶೂನ್ಯ ಭಯಂಕರವಾದದ್ದು ನನಗೆ ಬದುಕೋಕ್ಕೆ ಬೇರಾವ ಕನಸುಗಳೂ ಇಲ್ಲ ನನ್ನ ಮೇಲೆ ಯಾರೂ ಅವಲಂಬಿತವಾಗಿಲ್ಲ ಅನ್ನೊ ವಾಸ್ತವ ಕಣ್ಣೆದುರಿಗೆ.....
ಅಂದಿದ್ದಳು ಅಂದುಕೊಳ್ಳುತ್ತಿದ್ದಾಗ ರಾಘವ ಧಡಾರಂತ ಬಾಗಿಲು ತಳ್ಳಿಕೊಂಡು ಒಳಗೆ ಬಂದು ಶೂಸು ಬಿಚ್ಚುತ್ತಾ ಅವನ ಸ್ಕೂಲಿನಲ್ಲಿ ನೆಡೆದುದ್ದನ್ನು ವರದಿ ಒಪ್ಪಿಸಲು ಶುರುಮಾಡಿದಾಗ, ಅವಳು ತನ್ನ ಆಲೊಚನೆಯ ಸರಣಿಯಿಂದ ಹೊರಬಂದು ಅವನ ಮುದ್ದು ಮಾತುಗಳಲ್ಲಿ ಮುಳುಗಿಹೋದಳು.
"ಈ ಮೂರು ವರ್ಷದ ಮಗೀಗೆ ನಿನ್ ಅಪ್ಪಜಿ ಸತ್ತ್ ಹೋಗೈತೆ ಅಂತ ಹೇಗ್ ಹೇಳಾದು?"
ಅಂತ ಅಜ್ಜಿ ದೊಡ್ಡ್ ದನಿ ಮಾಡಿ ಅಳೋಕ್ಕೆ ಶುರು ಮಾಡಿದ್ಲು ನನಗೆ ಭಯ ಆಗಿ ನಾನು ಮನೆಯಾಳು ಮಂಜನ ಹತ್ರ ಓಡೋಗಿದ್ದೆ
ಹ್ಮ್ಮ್ಮ್ಮ್ ಮ್ ಮ್... ಅಂತ ದೊಡ್ಡ ನಿಟ್ಟುಸಿರುಬಿಟ್ಟು ನಾನ್ಯಾವಾಗಲೂ ಇಷ್ಟೇ ನೆನಪುಗಳಲ್ಲೇ ಮುಳುಗಿ ಹೋಗಿರ್ತೀನಿ ಅವರು ಬರೋಷ್ಟೊತ್ತಿಗೆ ಬೀಟ್ರೂಟ್ ಪಲ್ಯ ಮಾಡಿಟ್ಟಿರಬೇಕು.ಇರೋ ಮೂರು ಜನಕ್ಕೆ ಎರಡು ಕೇಜಿ ಬೀಟ್ರೂಟ್ ತಂದಿಟ್ಟಿದಾರೆ ಬರೀ ಅದರದೇ ಪಲ್ಯ, ಸಾಂಬಾರು, ಗೊಜ್ಜು ಅಂತ ದಿನಾ ಮಾಡಿ ಹಾಕಬೇಕು. ಆವಾಗ ಬುದ್ದಿ ಬರುತ್ತೆ ಅಂದುಕೊಂಡು, ಅಡುಗೆ ಮನೆ ಕಡೆ ನೆಡೆದಳು.
ವಾಣಿ ಗ್ರುಹಿಣಿ ಮ್ ಸ್ ಸಿ ಮಡಿದಾಳೆ ಗಂಡ ಆರ್ ಬಿ ಐ ನಲ್ಲಿ ಮ್ಯಾನೇಜರ್. ದೊಡ್ಡ ಬ್ಯಾಂಕು, ದೊಡ್ಡ ಕೆಲಸ, ದೊಡ್ಡ ಸಂಬಳ. ಇವರಿಗೆ ಒಬ್ಬನೇ ಮಗ ರಾಘು. ವಾಣಿಗೆ ಅಮ್ಮ ತನ್ನ ಜೊತೇಲಿ ಇರಲಿ ಅನ್ನೋ ಆಸೆ ಆದರೆ ಅವಳ ಅಮ್ಮ ಮಾತ್ರ ತನ್ನ ಹಳ್ಳಿ ಮನೆಯೇ ಸ್ವರ್ಗವೆಂದುಕೊಂಡಾಕೆ. ಬೇಜಾರಾದಾಗ ವಾಣಿ ಮನೇಲಿ ಸ್ವಲ್ಪ ದಿನ ಇನ್ನೊಂದು ಸ್ವಲ್ಪ ದಿನ ವಾಣಿ ಅಕ್ಕ ವೀಣನ ಮನೇಲಿರ್ತಾರೆ.
ವಸುದಕ್ಕನ ಮದುವೆ ದಿನದ ಚಿತ್ರ ಇನ್ನೂ ಕಣ್ಣಲ್ಲಿ ಕಟ್ಟಿದಂತಿದೆ ಅವಳ ಅಮ್ಮ ಸತ್ತ ಮೇಲಲ್ಲವೆ ನಮ್ಮಮ್ಮ ಎರಡನೇ ಹೆಂಡತಿಯಾಗಿ ಆ ಮನೆ ಸೇರಿದ್ದು. ಅವಳೂ 'ಅಮ್ಮ' ಎಂದೇ ಕರೆಯುತ್ತಿದ್ದಳು ಆದರೆ ಅತ್ತೆ ,ಅಜ್ಜಿ, ಎಲ್ಲರೂ ಸೇರಿಕೊಂಡು ಅವಳ ಮದುವೆಯ ಯಾವ ಕೆಲಸಕ್ಕೂ ಕರೆಯದೆ ದೂರ ಇಟ್ಟಿದ್ದರು. ಮದುವೆಗೆ ಕರೆಯುವ ಯೋಚನೆಯನ್ನೂ ಮಾಡಿರಲಿಲ್ಲ ಅವರು ಅವಳ ಮದುವೆಯ ಓಲಗದ ಸದ್ದು ಬಸ್ಸ್ಟಾಂಡಿನಲ್ಲಿ ಮಂಗಳಜ್ಜಿ ಮನೆಗೆ ಹೋಗಲು ಬಸ್ಸಿಗೆ ಕಾಯುತ್ತ ಕುಳಿತಿದ್ದ ನಮಗೆ ಕೇಳಿಸುತ್ತಿತ್ತು. ನಾನು ಜೋರಾಗಿ ಅಳುತ್ತಿದ್ದೆ, ನನಗಿಂತ ಎರಡೇ ವರ್ಷಕ್ಕೆ ದೊಡ್ಡವಳಾದ ವೀಣ ವಯಸ್ಸಿಗೆ ಮೀರಿದ ಅರಿವನ್ನು ಮುಖದಲ್ಲಿ ಹೊತ್ತು ಮೌನವಾಗಿ ಕುಳಿತಿದ್ದಳು.ಅಮ್ಮನ ಕಣ್ಣು ಮತ್ತದೇ ಶೂನ್ಯದೆಡೆಗೆ...
ಗಂಗಜ್ಜಿ ಹೆಸರೇ ಒಂದು ನಡುಕ ಇಡೀ ಊರಿಗೆ ಊರೇ ಹೆದರುತ್ತಿತ್ತು ಈ ಹೆಸರಿಗೆ. ಗಂಗಜ್ಜಿಯಂತಹ ಅತ್ತೆ ಸಿಗುತ್ತಳೆ ಅಂತ ಗೊತ್ತಿದ್ದರೂ ಮಂಗಳಜ್ಜಿ ತನ್ನ ಪ್ರೀತಿಯ ಕೊನೇ ಮಗಳನ್ನು ಹೇಗೆ ಅವರ ಮನೆಗೆ ಕೊಟ್ಟರು ಅದೂ ಎರಡನೇ ಸಂಭಂದಕ್ಕೆ? ಶ್ರೀಮಂತರ ಮನೆ ಅಂತಲ? ಸೆರೆಮನೆ ಆದರೂ ಪರವಾಗಿಲ್ಲ ಬಂಗಾರದ್ದಲ್ಲವ ಅನ್ನೋ ಸ್ವಭಾವವ?
ನಿಮ್ಮ ಅಪ್ಪ ಎಂದರೆ ಗಂಡು ಗಂಡು ದೊಡ್ಡಪ್ಪ ಯಾವುದ್ದಕ್ಕೂ ಲಾಯಕ್ಕಿಲ್ಲ ಅನ್ನುತ್ತಿದ್ದರು ಊರಿನವರು ಯಾವುದೇ ಇತಿಮಿತಿ ಇಲ್ಲದೆ ಖರ್ಚು ಮಾಡುತ್ತಿದ್ದರಂತೆ ಅಪ್ಪ. ಗಂಗಜ್ಜಿಯಂತಹ ಗಂಗಜ್ಜಿ ಅಪ್ಪನಿಗೆ ಹೆದರುತ್ತ್ಹಿದ್ದಳಂತೆ.ತನಗೆ ಕಿಂಚಿತ್ತೂ ಹೆದರದ ಬಿಟ್ಟರೆ ತನ್ನನ್ನೇ ಹುರಿದು ತಿನ್ನುವಂತ ತನ್ನ ಮಗನ ಮೇಲೆ ಗಂಗಜ್ಜಿಗೆ ಅಸಾದ್ಯ ಸಿಟ್ಟು.
ಅವಳೇ ಅಪ್ಪನ ಮೊದಲನೇ ಹೆಂಡತಿಯನ್ನು ಸಾಯಿಸಿದ್ದು, ಆಮೇಲೆ ಅಪ್ಪನನ್ನೂ ಕೊಂದಳು. ನಾನು ಹುಟ್ಟಿದಾಗ ತಂದೆಗೆ ಆಗದ ನಕ್ಷತ್ರದಲ್ಲಿ ಹುಟ್ಟಿದಾಳೆ ಸಾಯಿಸಿಬಿಡಿ ಎಂದು ನನ್ನ ಕೊಲ್ಲಲು ಮಂಗಳಜ್ಜಿಯ ಮನೆಯವರೆಗೂ ಬಂದಿದ್ದಳಂತೆ. ಅಕ್ಕನ ಬಾಯಿಗೆ ಭಾರದ ಕಬ್ಬಿಣ ಹಾಕಿ ಅವಳು ಸಾಯುವ ಸ್ಥಿತಿ ತಲುಪಿ ಒದ್ದಾಡುತ್ತಿದ್ದರೂ ಸುಮ್ಮನೇ ಯಾವುದೇ ಭಾವನೆಗಳಿಲ್ಲದೆ ನೋಡುತ್ತಿದ್ದ ಅಜ್ಜಿಯನ್ನು ಕಂಡು ಮಂಜ ದಂಗಾಗಿದ್ದನಂತೆ, ಅವನು ಅ ದಿನ ಅಲ್ಲಿಲ್ಲದಿದ್ದರೆ ಅಕ್ಕ ಎಂದು ಕರೆಯಲೂ ಯಾರಿರುತ್ತಿರಲಿಲ್ಲ. ಅಜ್ಜಿಗೆ ಕೊಲೆ ಮಾಡುವುದು ಒಂದು fancy ಆಗಿಬಿಟ್ಟಿತ್ತಾ?
"ನಿಮ್ಮಪ್ಪ ರಾಜಪ್ಪ ಹೆಸರಿಗೆ ತಕ್ಕ ಹಾಗೆ ರಾಜನಂತೆ ಇರುತ್ತಿದ್ದ. ಬಿಳೀ ಪಂಚೆ, ಬಿಳೀ ಶರಟು, ಕೈಯಲ್ಲಿ ಪುಸ್ತಕ ಮತ್ತು ಪಂಚೆಯ ಗಂಟಿಗೆ ಸಿಗಿಸಿದ ಮಚ್ಚು ಅವನು ತೋಟದ ಕಡೆಗೆ ಹೊರಟ ಅಂದರೆ ಆಳುಗಳೆಲ್ಲಾ ಚುರುಕಾಗಿ ಕೆಲಸ ಮಾಡಲು ಶುರು ಮಾಡುತ್ತಿದ್ದರು. ಅವ್ನ ಗತ್ತೇ ಗತ್ತು"
ಎಂದು ಹೇಳುತ್ತಿದ್ದ ಪಕ್ಕದ ಮನೆ ಪದ್ಮಜ್ಜಿಯ ಮಾತುಗಳಿಂದ ಅಪ್ಪ ಹೇಗಿದ್ದಿರಬಹುದು ಎಂದು ತುಂಬ ಸಾರಿ ಕಲ್ಪಿಸಿಕೊಂಡಿದ್ದೇನೆ... ಅಪ್ಪ ಇರಬೇಕಿತ್ತು.....
ಆಸ್ತಿ ಭಾಗ ಮಾಡೋವಾಗ ಮಾವ ಸಹಾಯಕ್ಕೆ ಬಂದ್ದಿದ್ದ ಅನ್ನೋದೆನೋ ನಿಜ, ಆದರೆ ಆಮೇಲೆ ಅವನೂ ಅತ್ತೆಯೂ ಸೇರಿಕೊಂಡು ಗುಕ್ಕುಗುಕ್ಕಾಗಿ ನಮ್ಮ ಆಸ್ತಿಯನ್ನು ತಿನ್ನುತ್ತಿದ್ದುದು ಗೊತ್ತಾಗುತ್ತಿದ್ದರೂ, ಅಮ್ಮ ಏಕೆ ಸುಮ್ಮನಿದ್ದಳು ?ಗೊತ್ತಾಗುವುದಿಲ್ಲ."ಗಂಡು ದಿಕ್ಕಿಲ್ಲದ ಮನೆ ಅವನಾದರೂ ಒತ್ತಾಸೆಗೆ ಇರಲಿ ಅಂತ ಸುಮ್ಮನಿದ್ದೆ" ಅಂದಿದ್ದಳು ಬೇರೆ ಯಾವ ಕಾರಣವೂ ಹೊಳೆಯದೆ ನಿಜವಾದ ವಿಶಯವೆಂದರೆ ತನ್ನ ಅಣ್ಣನೆಂದರೆ ಸುಮ್ಮನೆ ಪ್ರೀತಿ ಅವಳಿಗೆ.ಅಣ್ಣನಿಗೆ ಏನೂ ಗೊತ್ತಗಲ್ಲ ಅತ್ತಿಗೆ ಹೇಳಿದಂಗೆ ಕುಣಿತಾನೆ ಪಾಪ ಅನ್ನೊ ನಂಬಿಕೆ ಅವಳದ್ದು ಆದರೆ ಮಾವ ಎಂಥವನೆಂದು ನನಗೆ ಗೊತ್ತಾಗುತ್ತಿತ್ತು ನಾನು ಇವತ್ತಿಗೂ ಮಾವನನ್ನು ಮಾತಾಡಿಸುತ್ತಿಲ್ಲ....
ಅಪ್ಪನ ಜೊತೆಯ ಐದು ವರ್ಷದ ದಾಂಪತ್ಯ ಜೀವನದಲ್ಲಿ ನೀನು ಸುಖವಾಗಿದ್ದೆಯ ಎಂದು ಕೇಳಿದರೆ ಅಮ್ಮ ಇಂದಿಗೂ ಉತ್ತರಿಸುವುದಿಲ್ಲ ಉತ್ತರ ಕೊಡದೇ ಇರುವುದೂ ಒಂದು ಉತ್ತರವೇ.. ಆದರೆ ನನಗೂ ಅಮ್ಮನ ಉತ್ತರ ಬೇಕಿಲ್ಲ.. ಈ ಪ್ರಶ್ನೆ ಕೇಳಿದ ನಂತರ ಮೌನವಾಗುವ ಅಮ್ಮ, ಇಪ್ಪತ್ತು ಇಪ್ಪತ್ತೆರೆಡು ವರ್ಷ ಹಿಂದಕ್ಕೆ ಹೋಗುವ ಅವಳ ಯೋಚನೆ, ಅವಳ ಮೌನದಿಂದ ವಿಸ್ತರಿತವಾಗುವ ನನ್ನ ಕಲ್ಪನೆ ಇಷ್ಟ ನನಗೆ ಎಂದುಕೊಳುತ್ತಾ ಸಾರು ಕುದಿಯುವುದನ್ನೆ ನೋಡುತ್ತಿದ್ದಳು.
ನಮ್ಮಿಬ್ಬರ ಓದಿನ ಪ್ರತಿ ಹಂತದಲ್ಲೂ ಅಮ್ಮ ಖುಷಿಯಾಗಿ ಪಾಲ್ಗೊಂಡಿದ್ದಾಳೆ. ಅಕ್ಕನ ಮದುವೆಯಲ್ಲೂ ಅವಳ ಕಣ್ಗಳು ಖುಷಿಯಿಂದ ಅರಳಿದ್ದವು, ಆದರೆ ನನ್ನ ಮದುವೆಯ ಸಿದ್ದತೆಗಳನ್ನು ಆಸಕ್ತಿಯಿಂದ ಮಾಡುತ್ತಿದ್ದವಳು ಮದುವೆಯ ದಿನ ಸುಮ್ಮನಾಗಿಬಿಟ್ಟಿದ್ದಳು. ಯಾವುದರಲ್ಲೂ ಆಸಕ್ತಿ ಇರದ ಹಾಗೆ ಇದ್ದಳು,.. ಕಡೇ ಪಕ್ಷ ನನ್ನ ಕಳಿಸಿಕೊಡುವಾಗ ಕೂಡ ಅಳಲಿಲ್ಲ ಕಣ್ಣು ಶೂನ್ಯದೆಡೆಗೆ...
ಅಮ್ಮ ಯಾಕವತ್ತು ಹಾಗಿದ್ದೆ ಅಂದರೆ ತುಂಬ ಹೊತ್ತಿನ ನಂತರ ಇದಕ್ಕೂ ಉತ್ತರ ಕೊಡುವುದಿಲ್ಲವೇನೋ ಅಂದುಕೊಳುತ್ತಿದ್ದಾಗ ನಿಧಾನವಾಗಿ ಹೆಳಿದಳು
"ನಿಮ್ಮಪ್ಪ ಇದ್ದಾಗ ಅಂಥವರನ್ನು ಅರ್ಥಮಾಡಿಕೊಳ್ಳಬೇಕೆಂಬ ಕನಸಿತ್ತು, ಅವರು ಸತ್ತಾಗ ಎಲ್ಲ ಶೂನ್ಯ ಅನ್ನಿಸುತ್ತಿತ್ತು. ಆದ್ದರೆ ನಿಮ್ಮನ್ನು ಚೆನ್ನಾಗಿ ಓದಿಸುವ ಕನಸು ಕಟ್ಟಿಕೊಂಡೆ. ನಿಮ್ಮ ಓದಾದಮೇಲೆ ನಿಮ್ಮಗಳ ಮದುವೆಯ ಕನಸು, ನಿನ್ನ ಮದುವೆಯಾದ ಮೇಲೆ ಮತ್ತೆ ಶೂನ್ಯಕ್ಕೆ ಹಿಂತಿರುಗಿದೆ. ನಿಮಗಾಗಿ ನನ್ನ ಜೀವನ ಮುಡುಪಿಟ್ಟೆ ಅನ್ನೊ ಬೊಗಳೆ ಮಾತು ಹೇಳೊಲ್ಲ ನಾನು. ಬದುಕೊಕ್ಕೆ ಕನಸು ಬೆಕಿತ್ತು. ನಿಮ್ಮಗಳ ಭವಿಷ್ಯದ ಕನಸು, ಸುಖದ ಕನಸು, ನಿಮ್ಮ ಸುಖ-ದುಃಖ, ಆಸೆ, ಅಚ್ಚರಿ, ಅಳು, ಪ್ರತಿಯೊಂದನ್ನೂ ನನ್ನ ಜೊತೆಗೇ ಹಂಚಿಕೊಳ್ಳುತ್ತಿದ್ದಿರಿ 'ನನ್ನ ಬಿಟ್ಟರೆ ನಿಮಗೆ ಇನ್ಯಾರೂ ಇಲ್ಲ' ಅನ್ನೋಭಾವನೆಯೇ ಖುಷಿ ಕೊಡುತ್ತಿತ್ತು ನಂಗೆ. ಆದರೆ ನೀನು ಮದುವೆಯಾಗಿ ಹೋದಾಗ ಎಲ್ಲ ಕಳಕೊಂಡ ಭಾವ ನಿನ್ನ ಮದುವೆ ಸಮಯದಲ್ಲಿ ಕವಿದ ಶೂನ್ಯ ಭಯಂಕರವಾದದ್ದು ನನಗೆ ಬದುಕೋಕ್ಕೆ ಬೇರಾವ ಕನಸುಗಳೂ ಇಲ್ಲ ನನ್ನ ಮೇಲೆ ಯಾರೂ ಅವಲಂಬಿತವಾಗಿಲ್ಲ ಅನ್ನೊ ವಾಸ್ತವ ಕಣ್ಣೆದುರಿಗೆ.....
ಅಂದಿದ್ದಳು ಅಂದುಕೊಳ್ಳುತ್ತಿದ್ದಾಗ ರಾಘವ ಧಡಾರಂತ ಬಾಗಿಲು ತಳ್ಳಿಕೊಂಡು ಒಳಗೆ ಬಂದು ಶೂಸು ಬಿಚ್ಚುತ್ತಾ ಅವನ ಸ್ಕೂಲಿನಲ್ಲಿ ನೆಡೆದುದ್ದನ್ನು ವರದಿ ಒಪ್ಪಿಸಲು ಶುರುಮಾಡಿದಾಗ, ಅವಳು ತನ್ನ ಆಲೊಚನೆಯ ಸರಣಿಯಿಂದ ಹೊರಬಂದು ಅವನ ಮುದ್ದು ಮಾತುಗಳಲ್ಲಿ ಮುಳುಗಿಹೋದಳು.
Sunday, August 12, 2007
ವನಸಿರಿಯ ಮಗಳು
ಯಾರೂ ಓಡಾಡದಿದ್ದಲ್ಲಿ ಅವಳಿದ್ದಳು
ಜೊತೆಗೆ ಕಾವೇರಿಯ ಝರಿ
ಇವಳನ್ನು ಹೊಗಳಲು ಯಾರೂ ಇರಲಿಲ್ಲ
ಪ್ರೀತಿಸುವವರು ಇನ್ನ್ಯಾರು
ಅವಳ ಓಡಾಟವೆಲ್ಲಾ ಹಸಿರ ಬಳಿ
ಜೊತೆಗೆ ಬೆಚ್ಚಗಾಗುತಿಹ ಸೂರ್ಯ
ದನಿಗೂಡಿಸಲು ಕೋಗಿಲೆಗಳಿವೆ
ಅಲ್ಲಿ ಇನ್ನೆಲ್ಲಿಯ ಕ್ರೌರ್ಯ
ಅವಳ ಊಟ ಕಾಡು ಫಲ
ಕುಡಿಯುವುದು ಮಕರಂದ
ವನಸಿರಿಯ ಮಗಳಲ್ಲವೇ
ನೋಡಲು ಬಲುಚಂದ
ಎಲೆಯ ಮರೆಯ ಸಂಪಿಗೆ
ಕಣ್ಣಿಗೆ ಕಾಣದೆ ಅಡಗಿಹಳು
ರಾತ್ರಿಯ ಒಂಟಿ ನಕ್ಷತ್ರ
ಬೆಳ್ಳನೆ ಬೆಳಗುತಿಹಳು
ಅವಳಿದ್ದಳೆಂಬುದೇ ಕೆಲವರಿಗೆ ಗೊತ್ತಿದ್ದು
ಸತ್ತರೆ ಹೇಗೆ ತಿಳಿಯಬೇಕು;
ಅವಳೀಗ ಮಣ್ಣಲ್ಲಿ ಮಣ್ಣಾಗಿದ್ದಾಳೆ
ಸಂಕಟವನ್ನು ನಾನೆಲ್ಲಿ ಬಚ್ಚಿಡಬೇಕು!
ಇದು William Wordsworthನ She dwelt amoung the untrodden waysನ ಭಾವಾನುವಾದ ಆ poem ಹೀಗಿದೆ
She dwelt among the untrodden ways
Beside the springs of Dove;
A Maid whom there were none to praise
And very few to love
A violet by a mossy stone
Half hidden from the eye
Fair as a star when only one
Is shining in the sky
She lived unknown and few could know
When Lucy ceased to be
She is in her grave, and,Oh!
The difference to me
ಜೊತೆಗೆ ಕಾವೇರಿಯ ಝರಿ
ಇವಳನ್ನು ಹೊಗಳಲು ಯಾರೂ ಇರಲಿಲ್ಲ
ಪ್ರೀತಿಸುವವರು ಇನ್ನ್ಯಾರು
ಅವಳ ಓಡಾಟವೆಲ್ಲಾ ಹಸಿರ ಬಳಿ
ಜೊತೆಗೆ ಬೆಚ್ಚಗಾಗುತಿಹ ಸೂರ್ಯ
ದನಿಗೂಡಿಸಲು ಕೋಗಿಲೆಗಳಿವೆ
ಅಲ್ಲಿ ಇನ್ನೆಲ್ಲಿಯ ಕ್ರೌರ್ಯ
ಅವಳ ಊಟ ಕಾಡು ಫಲ
ಕುಡಿಯುವುದು ಮಕರಂದ
ವನಸಿರಿಯ ಮಗಳಲ್ಲವೇ
ನೋಡಲು ಬಲುಚಂದ
ಎಲೆಯ ಮರೆಯ ಸಂಪಿಗೆ
ಕಣ್ಣಿಗೆ ಕಾಣದೆ ಅಡಗಿಹಳು
ರಾತ್ರಿಯ ಒಂಟಿ ನಕ್ಷತ್ರ
ಬೆಳ್ಳನೆ ಬೆಳಗುತಿಹಳು
ಅವಳಿದ್ದಳೆಂಬುದೇ ಕೆಲವರಿಗೆ ಗೊತ್ತಿದ್ದು
ಸತ್ತರೆ ಹೇಗೆ ತಿಳಿಯಬೇಕು;
ಅವಳೀಗ ಮಣ್ಣಲ್ಲಿ ಮಣ್ಣಾಗಿದ್ದಾಳೆ
ಸಂಕಟವನ್ನು ನಾನೆಲ್ಲಿ ಬಚ್ಚಿಡಬೇಕು!
ಇದು William Wordsworthನ She dwelt amoung the untrodden waysನ ಭಾವಾನುವಾದ ಆ poem ಹೀಗಿದೆ
She dwelt among the untrodden ways
Beside the springs of Dove;
A Maid whom there were none to praise
And very few to love
A violet by a mossy stone
Half hidden from the eye
Fair as a star when only one
Is shining in the sky
She lived unknown and few could know
When Lucy ceased to be
She is in her grave, and,Oh!
The difference to me
Wednesday, August 1, 2007
ಮರೆತು ಹೋದವಳು
ಕಣ್ಣೀರು ತಡೆಯಕ್ಕೆ ಆಗ್ತಾ ಇಲ್ಲ...
ಗಂಡಸರು ಅಳಬಾರದು ಅಂತಾರಲ್ವ?? 'ಮದುವೇಲಿ ಹುಡುಗಿ ಅತ್ತರೆ ಎನೇ ಕಾರಣ ಇದ್ದರೂ ತವರು ಮನೆ ಬಿಟ್ಟು ಹೋಗುತ್ತಿದ್ದಾಳೆ ಅಂತ ಅಳುತ್ತಿದ್ದಾಳೆ' ಅಂದುಕೊಳ್ತಾರೆ ಈ ಮದುವೆ ಆಗಿ ನಿನ್ನಿಂದ ದೂರ ಆಗ್ತಿದೀನಿ ಅಂತ ಗೊತ್ತಾದರೂ ದು:ಖ ಆಗಬಾರದ? ಅಳು ಬಂದರೆ ಏನು ತಪ್ಪು?
ಮೊದಲನೇ ಸಾರಿ ನಾನು ಸಾಗರ ಸಮ್ಮುಖದಲ್ಲಿ ನಿನ್ನೊಳಗಿಳಿದಾಗ ನಿನ್ನ ಬಿಳಿಗೆನ್ನೆಮೇಲಿದ್ದ ಕಣ್ಣೀರು, ಕೂಗಬಾರದೆಂದು ನೀನು ತುಟಿ ಕಚ್ಚಿದ್ದರಿಂದ ಜಿನುಗಿದ ರಕ್ತ, ನನ್ನ ಕಣ್ಣು ಚ್ಚುಚ್ಚುತ್ತಿದೆ.
ಹ್ಮ್ ಮ್... ನಿನ್ನ ಆಸೆಗಳೇ ಹಾಗೆ ನೀನು ಎಷ್ಟು ಹತ್ತಿರವಾಗಿ ಸಿಕ್ಕಿದ್ದೆ ನನ್ನ ರೂಮಿನಲ್ಲೇ ಆದರೆ ನನಗೆ ನಿನ್ನ ಕೈ ಮುಟ್ಟೊಕ್ಕೆ ಬಿಟ್ಟಿರಲಿಲ್ಲ ನೀನು ನಿನ್ನ ಸೇರಬೇಕೆಂದರೆ ಅದು ಕಡಲ ಮುಂದೆಯೋ, ಜಲಪಾತದೆದುರಿಗೋ, ಹರಿಯುವ ನದಿ ಪಕ್ಕದಲ್ಲೋ ,ಸುಡುವ ಬಂಡೆಗಲ್ಲ ಮೇಲೊ....
ಅವತ್ತು ನನ್ನ ಮನೆಯಲ್ಲಿ ನಾವಿಬ್ಬರೇ ನಾನು ನಿನ್ನ ಆಸೆಯಿಂದ ನೋಡುತ್ತಿದ್ದರೆ
"ಯಾವುದೊ ರೂಮಿನ ಮೂಲೆಯಲ್ಲಿ ನನ್ನ ಮೀಸಲು ಮುರಿಯೋಕ್ಕೆ ಇಷ್ಟ ಇಲ್ಲ. ಕಡಲೆಂದರೆ ಆಸೆ ನಂಗೆ, ನೀನು ಕಡಲೂರಿನವನು ಸಮುದ್ರದೆದುರಿಗೆ ಬೆಳ್ದಿಂಗಳ ರಾತ್ರಿಯಲ್ಲಿ ಕಡಲ ಶಬ್ಧ ಕೇಳುತ್ತಾ ನಮ್ಮಿಬ್ಬರ ಮಿಲನವಾಗಲಿ ನನಗೂ ಇನ್ನು ಹೆಚ್ಚು ವರ್ಷ ತಡೆಯೋಕ್ಕಾಗಲ್ಲ ವರ್ಷ 24ಆಯಿತು ಅಂದಿದ್ದೆ.
ನೀನು ಯಾವತ್ತೂ ಹೀಗೆ.. ನೇರ- ನೇರ. ನನ್ನ ಕಣ್ಣ ಬೇಡಿಕೆ ಅರ್ಥವಾಗುತ್ತಿತ್ತು ನಿನಗೆ.
"ಕಾಡು ಕುದುರೆ ಸವಾರಿಗೆ ಸಿದ್ದವೇ ಹುಡುಗ?" ಎಂಡು ಕೇಳಿ ಝಲ್ಲನೆ ನಗುತ್ತಿದ್ದೆ ಅಷ್ಟೇ ಬೇಗ ತೆಕ್ಕೆಗೆ ಬಂದು ಬಿಡುತ್ತಿದ್ದೆ.
ಕ್ರೂರಿ ನೀನು ಯಾಕೆ ಹೀಗೆ ನೆನಪಾಗ್ತಾ ಇದ್ದೀಯ?? ಪುರೋಹಿತರು ಗೊಣಗುತ್ತಾ ಇದ್ದಾರೆ ಸರಿಯಾಗಿ ಮಂತ್ರ ಹೆಳುತ್ತಿಲ್ಲ ನಾನು ಅಂತ. ನಿನ್ನ ನೆನಪುಗಳಿಂದ ಕಳಚಿಕಂಡು ಮಂತ್ರ ಪಠಿಸೋದಾದರೂ ಹೇಗೆ?
ನನ್ನ ಪಕ್ಕದಲ್ಲಿ ಕುಳಿತಿರುವ ಹುಡುಗಿ ಎಷ್ಟು ಸಪೂರ- ಸಪೂರ ಬಗ್ಗಿಸಿದ ಕತ್ತು ಎತ್ತಿಲ್ಲ ,ನೀನೇ ಇಲ್ಲಿದ್ದಿದ್ದರೆ ದಿಟ್ಟ ಕಣ್ಣುಗಳಿಂದ ನನ್ನೇ ನೋಡುತ್ತಿರುತ್ತಿದ್ದೆ.. ಆದರೆ ನೀ ಇಲ್ಲಿರಲು ಹೇಗೆ ಸಾಧ್ಯ?
ಅವತ್ತು ನೀನು ನನ್ನ ಭುಜದ ಮೇಲೆ ಗಲ್ಲವನ್ನಿಟ್ಟುಕೊಂಡು ಮುದ್ದುಮುದ್ದಾಗಿ
"ಜಲತರಂಗದ ಸದ್ದು ಇದಕ್ಕಿಂತ ಚೆನ್ನಗಿರುತ್ತಾ?"
ಅಂತ ಕೇಳಿದ್ದೆ ಜಿಂಕ್ ಶೀಟಿನ ಮೇಲೆ ಬೀಳುತ್ತಿದ್ದ ಮಳೆ ಸದ್ದು ಕೇಳುತ್ತ.. ನಿನ್ನ ತುಂಬಿದ ಬಿಳಿಗೆನ್ನೆ ಕಚ್ಚಿಹಾಕಬೇಕೆನಿಸಿತ್ತು ಆವಾಗ.
ನಿನ್ನಷ್ಟು ಚಂದದ ಹುಡುಗಿ ಸುಮ್ಮನೆ ನನ್ನ ಬಳಿ ಬಂದ್ದಾದರೂ ಹೇಗೆ? ಎಂದು ಯೋಚಿಸುತ್ತಿರುತ್ತೇನೆ ಬಹಳ ಸಲ, ಅಂತೆಯೇ ಏನೂ ಕಾರಣ ಕೊಡದೆ ನನ್ನಿಂದ ದೂರವಾದ ಮೇಲೂ...
ನಿಂಗೆ ಅವತ್ತಿನ ದಿನ ನೆನಪಿದೆಯ? ಎಂದಿನಂತೆ ಬೆಳದಿಂಗಳ ರಾತ್ರಿಯಲ್ಲಿ ಕಡಲೆದುರಿಗೆ ಕುಳಿತಿದ್ದೆವು ಭೊರ್ಗರೆಯುವ ಕಡಲೆದುರಿಗೆ ಮೌನ ದೇವತೆ ನೀನು. ಆದರೆ ಅವತ್ತು ಕೇಳಿದ್ದೆ
"ಈಗ ಕಡಲನ್ನು ನೋಡಿದ್ರೆ ಹೇಗನ್ನಿಸುತ್ತೆ ನಿಂಗೆ... "
"ಅದರ ಭೋರ್ಗರೆತ ಗಂಡಸಿನ ಆವೇಷದಂತೆ.." ಎನ್ನುವುದು ನನ್ನ ಉತ್ತರ..
ನೀನು ಸ್ವಲ್ಪ ಹೊತ್ತು ಸುಮ್ಮನಿದ್ದು ಮುಂದುವರಿದೆ
"ನಮ್ಮ ಕವಿಗಳು ನದೀನ ಹೆಣ್ಣಿಗೆ ಸಮುದ್ರನ ಗಂಡಸಿಗೆ ಹೋಲಿಸುತ್ತಾರೆ .ಪೌರಾಣಿಕ ಪುಸ್ತಕಗಳಲ್ಲಿ ಸಮುದ್ರ ರಾಜನ ಕಲ್ಪನೆ ಬರುತ್ತೆ...ಅದಕ್ಕೆ ನಾವೆಲ್ಲ ಸಮುದ್ರದ ಭೊರ್ಗರೆತದಲ್ಲಿ ಗಂಡಸಿನ ಆವೇಶ ಕಾಣುತ್ತೀವಿ. ಆದ್ರೆ ನಂಗೆ ಈ ಬೆಳ್ದಿಂಗಳ ರಾತ್ರಿಯಲ್ಲಿ ಕಡಲು ಹೆಣ್ಣಾಗಿ ಕಾಣ್ತಾಳೆ, ಅವಳ ನಗ್ನತೆಯನ್ನು ತನ್ನ ತೆಳು ಬೆಳ್ಳನೆ ಹೊದಿಕೆಯಿಂದ ಮುಚ್ಚಿದಾನೆ ಎನ್ನಿಸುವ ಚಂದ್ರ, ನಿದ್ದೆಯಲ್ಲಿ ಮಗ್ಗಲು ಬದಲಿಸುತ್ತಿರುವಳೋ ಎನ್ನುವಂತೆ ದಡ ಮುಟ್ಟುವ ಅಲೆಗಳು... "
ಅವತ್ತಿನಿಂದ ನನಗೆ ಕಡಲನ್ನು ಗಂಡೆಂದು ನೋಡಲು ಸದ್ಯವೇ ಆಗಿಲ್ಲ....
ನೀನು ಹೇಳದೇ ಕೇಳದೇ ನನ್ನ ಬಿಟ್ಟು ಹೋಗಿ ಐದು ವರ್ಷಗಳಾದರೂ ನಾನು ಬೇರೆಯವರನ್ನು ಮದುವೆಯಾಗಲು ಒಪ್ಪಿರಲಿಲ್ಲ ನಿನ್ನ ಬಂಗಾರು ಬಣ್ಣದ ಕಣ್ಣುಗಳು ನಿನ್ನನ್ನು ಮರೆಯಲು ಬಿಟ್ಟಿರಲಿಲ್ಲ...ಆದರೆ ಮದುವೆಯಾಗಲೇಬೇಕಿತ್ತು ನಿನ್ನ ಮರೆಯಲಾದರೂ ಈ ಹುಡುಗಿಯಲ್ಲಿ ನಿನ್ನ ಹುಡುಕುವುದಿಲ್ಲ ನಾನು. ನನಗೆ ಒಂದು ಮಾತೂ ಹೇಳದೇ ಹೋದವಳಿಗೆ ಇನ್ನೇನು ಶಿಕ್ಷೆ ಕೊಡಲಿ?
"ಸಂತು ನೆನಪು ಬರ್ತಾ ಇದೆ ಬೀಚ್ ಹತ್ರ ಹೋಗ್ತೀನಿ"
ಅಂತ ನಿನ್ನ ಸ್ನೇಹಿತೆಗೆ ಹೇಳಿ ಹೋದವಳು ಎಷ್ಟು ಹೊತ್ತಾದರೂ ವಾಪಸ್ಸು ಬಂದಿರಲಿಲ್ಲ ಅವಳು ಗಾಭರಿಗೊಂಡು ಫೊನ್ ಮಾಡಿದ್ದಳು ನಾನು ದಡಬಡಿಸಿ ಬೆಂಗಳೂರಿನಿಂದ ಓಡಿ ಬಂದಿದ್ದೆ... ನಮ್ಮ ಘಾಬರಿ ಧಾವಂತಗಳು ಕಡಲಾಳಡಲ್ಲಿ ನೆಮ್ಮದಿಯ ಚಿರನಿದ್ದೆಗೆ ಇಳಿದವಳಿಗೆ ಹೇಗೆ ಗೊತ್ತಾಗಬೇಕು ನೆನಪಾಗಿ ಕಾಡಬೇಡ ಇನ್ನು ನಿನ್ನವನಲ್ಲ ನಾನು....
ಗಂಡಸರು ಅಳಬಾರದು ಅಂತಾರಲ್ವ?? 'ಮದುವೇಲಿ ಹುಡುಗಿ ಅತ್ತರೆ ಎನೇ ಕಾರಣ ಇದ್ದರೂ ತವರು ಮನೆ ಬಿಟ್ಟು ಹೋಗುತ್ತಿದ್ದಾಳೆ ಅಂತ ಅಳುತ್ತಿದ್ದಾಳೆ' ಅಂದುಕೊಳ್ತಾರೆ ಈ ಮದುವೆ ಆಗಿ ನಿನ್ನಿಂದ ದೂರ ಆಗ್ತಿದೀನಿ ಅಂತ ಗೊತ್ತಾದರೂ ದು:ಖ ಆಗಬಾರದ? ಅಳು ಬಂದರೆ ಏನು ತಪ್ಪು?
ಮೊದಲನೇ ಸಾರಿ ನಾನು ಸಾಗರ ಸಮ್ಮುಖದಲ್ಲಿ ನಿನ್ನೊಳಗಿಳಿದಾಗ ನಿನ್ನ ಬಿಳಿಗೆನ್ನೆಮೇಲಿದ್ದ ಕಣ್ಣೀರು, ಕೂಗಬಾರದೆಂದು ನೀನು ತುಟಿ ಕಚ್ಚಿದ್ದರಿಂದ ಜಿನುಗಿದ ರಕ್ತ, ನನ್ನ ಕಣ್ಣು ಚ್ಚುಚ್ಚುತ್ತಿದೆ.
ಹ್ಮ್ ಮ್... ನಿನ್ನ ಆಸೆಗಳೇ ಹಾಗೆ ನೀನು ಎಷ್ಟು ಹತ್ತಿರವಾಗಿ ಸಿಕ್ಕಿದ್ದೆ ನನ್ನ ರೂಮಿನಲ್ಲೇ ಆದರೆ ನನಗೆ ನಿನ್ನ ಕೈ ಮುಟ್ಟೊಕ್ಕೆ ಬಿಟ್ಟಿರಲಿಲ್ಲ ನೀನು ನಿನ್ನ ಸೇರಬೇಕೆಂದರೆ ಅದು ಕಡಲ ಮುಂದೆಯೋ, ಜಲಪಾತದೆದುರಿಗೋ, ಹರಿಯುವ ನದಿ ಪಕ್ಕದಲ್ಲೋ ,ಸುಡುವ ಬಂಡೆಗಲ್ಲ ಮೇಲೊ....
ಅವತ್ತು ನನ್ನ ಮನೆಯಲ್ಲಿ ನಾವಿಬ್ಬರೇ ನಾನು ನಿನ್ನ ಆಸೆಯಿಂದ ನೋಡುತ್ತಿದ್ದರೆ
"ಯಾವುದೊ ರೂಮಿನ ಮೂಲೆಯಲ್ಲಿ ನನ್ನ ಮೀಸಲು ಮುರಿಯೋಕ್ಕೆ ಇಷ್ಟ ಇಲ್ಲ. ಕಡಲೆಂದರೆ ಆಸೆ ನಂಗೆ, ನೀನು ಕಡಲೂರಿನವನು ಸಮುದ್ರದೆದುರಿಗೆ ಬೆಳ್ದಿಂಗಳ ರಾತ್ರಿಯಲ್ಲಿ ಕಡಲ ಶಬ್ಧ ಕೇಳುತ್ತಾ ನಮ್ಮಿಬ್ಬರ ಮಿಲನವಾಗಲಿ ನನಗೂ ಇನ್ನು ಹೆಚ್ಚು ವರ್ಷ ತಡೆಯೋಕ್ಕಾಗಲ್ಲ ವರ್ಷ 24ಆಯಿತು ಅಂದಿದ್ದೆ.
ನೀನು ಯಾವತ್ತೂ ಹೀಗೆ.. ನೇರ- ನೇರ. ನನ್ನ ಕಣ್ಣ ಬೇಡಿಕೆ ಅರ್ಥವಾಗುತ್ತಿತ್ತು ನಿನಗೆ.
"ಕಾಡು ಕುದುರೆ ಸವಾರಿಗೆ ಸಿದ್ದವೇ ಹುಡುಗ?" ಎಂಡು ಕೇಳಿ ಝಲ್ಲನೆ ನಗುತ್ತಿದ್ದೆ ಅಷ್ಟೇ ಬೇಗ ತೆಕ್ಕೆಗೆ ಬಂದು ಬಿಡುತ್ತಿದ್ದೆ.
ಕ್ರೂರಿ ನೀನು ಯಾಕೆ ಹೀಗೆ ನೆನಪಾಗ್ತಾ ಇದ್ದೀಯ?? ಪುರೋಹಿತರು ಗೊಣಗುತ್ತಾ ಇದ್ದಾರೆ ಸರಿಯಾಗಿ ಮಂತ್ರ ಹೆಳುತ್ತಿಲ್ಲ ನಾನು ಅಂತ. ನಿನ್ನ ನೆನಪುಗಳಿಂದ ಕಳಚಿಕಂಡು ಮಂತ್ರ ಪಠಿಸೋದಾದರೂ ಹೇಗೆ?
ನನ್ನ ಪಕ್ಕದಲ್ಲಿ ಕುಳಿತಿರುವ ಹುಡುಗಿ ಎಷ್ಟು ಸಪೂರ- ಸಪೂರ ಬಗ್ಗಿಸಿದ ಕತ್ತು ಎತ್ತಿಲ್ಲ ,ನೀನೇ ಇಲ್ಲಿದ್ದಿದ್ದರೆ ದಿಟ್ಟ ಕಣ್ಣುಗಳಿಂದ ನನ್ನೇ ನೋಡುತ್ತಿರುತ್ತಿದ್ದೆ.. ಆದರೆ ನೀ ಇಲ್ಲಿರಲು ಹೇಗೆ ಸಾಧ್ಯ?
ಅವತ್ತು ನೀನು ನನ್ನ ಭುಜದ ಮೇಲೆ ಗಲ್ಲವನ್ನಿಟ್ಟುಕೊಂಡು ಮುದ್ದುಮುದ್ದಾಗಿ
"ಜಲತರಂಗದ ಸದ್ದು ಇದಕ್ಕಿಂತ ಚೆನ್ನಗಿರುತ್ತಾ?"
ಅಂತ ಕೇಳಿದ್ದೆ ಜಿಂಕ್ ಶೀಟಿನ ಮೇಲೆ ಬೀಳುತ್ತಿದ್ದ ಮಳೆ ಸದ್ದು ಕೇಳುತ್ತ.. ನಿನ್ನ ತುಂಬಿದ ಬಿಳಿಗೆನ್ನೆ ಕಚ್ಚಿಹಾಕಬೇಕೆನಿಸಿತ್ತು ಆವಾಗ.
ನಿನ್ನಷ್ಟು ಚಂದದ ಹುಡುಗಿ ಸುಮ್ಮನೆ ನನ್ನ ಬಳಿ ಬಂದ್ದಾದರೂ ಹೇಗೆ? ಎಂದು ಯೋಚಿಸುತ್ತಿರುತ್ತೇನೆ ಬಹಳ ಸಲ, ಅಂತೆಯೇ ಏನೂ ಕಾರಣ ಕೊಡದೆ ನನ್ನಿಂದ ದೂರವಾದ ಮೇಲೂ...
ನಿಂಗೆ ಅವತ್ತಿನ ದಿನ ನೆನಪಿದೆಯ? ಎಂದಿನಂತೆ ಬೆಳದಿಂಗಳ ರಾತ್ರಿಯಲ್ಲಿ ಕಡಲೆದುರಿಗೆ ಕುಳಿತಿದ್ದೆವು ಭೊರ್ಗರೆಯುವ ಕಡಲೆದುರಿಗೆ ಮೌನ ದೇವತೆ ನೀನು. ಆದರೆ ಅವತ್ತು ಕೇಳಿದ್ದೆ
"ಈಗ ಕಡಲನ್ನು ನೋಡಿದ್ರೆ ಹೇಗನ್ನಿಸುತ್ತೆ ನಿಂಗೆ... "
"ಅದರ ಭೋರ್ಗರೆತ ಗಂಡಸಿನ ಆವೇಷದಂತೆ.." ಎನ್ನುವುದು ನನ್ನ ಉತ್ತರ..
ನೀನು ಸ್ವಲ್ಪ ಹೊತ್ತು ಸುಮ್ಮನಿದ್ದು ಮುಂದುವರಿದೆ
"ನಮ್ಮ ಕವಿಗಳು ನದೀನ ಹೆಣ್ಣಿಗೆ ಸಮುದ್ರನ ಗಂಡಸಿಗೆ ಹೋಲಿಸುತ್ತಾರೆ .ಪೌರಾಣಿಕ ಪುಸ್ತಕಗಳಲ್ಲಿ ಸಮುದ್ರ ರಾಜನ ಕಲ್ಪನೆ ಬರುತ್ತೆ...ಅದಕ್ಕೆ ನಾವೆಲ್ಲ ಸಮುದ್ರದ ಭೊರ್ಗರೆತದಲ್ಲಿ ಗಂಡಸಿನ ಆವೇಶ ಕಾಣುತ್ತೀವಿ. ಆದ್ರೆ ನಂಗೆ ಈ ಬೆಳ್ದಿಂಗಳ ರಾತ್ರಿಯಲ್ಲಿ ಕಡಲು ಹೆಣ್ಣಾಗಿ ಕಾಣ್ತಾಳೆ, ಅವಳ ನಗ್ನತೆಯನ್ನು ತನ್ನ ತೆಳು ಬೆಳ್ಳನೆ ಹೊದಿಕೆಯಿಂದ ಮುಚ್ಚಿದಾನೆ ಎನ್ನಿಸುವ ಚಂದ್ರ, ನಿದ್ದೆಯಲ್ಲಿ ಮಗ್ಗಲು ಬದಲಿಸುತ್ತಿರುವಳೋ ಎನ್ನುವಂತೆ ದಡ ಮುಟ್ಟುವ ಅಲೆಗಳು... "
ಅವತ್ತಿನಿಂದ ನನಗೆ ಕಡಲನ್ನು ಗಂಡೆಂದು ನೋಡಲು ಸದ್ಯವೇ ಆಗಿಲ್ಲ....
ನೀನು ಹೇಳದೇ ಕೇಳದೇ ನನ್ನ ಬಿಟ್ಟು ಹೋಗಿ ಐದು ವರ್ಷಗಳಾದರೂ ನಾನು ಬೇರೆಯವರನ್ನು ಮದುವೆಯಾಗಲು ಒಪ್ಪಿರಲಿಲ್ಲ ನಿನ್ನ ಬಂಗಾರು ಬಣ್ಣದ ಕಣ್ಣುಗಳು ನಿನ್ನನ್ನು ಮರೆಯಲು ಬಿಟ್ಟಿರಲಿಲ್ಲ...ಆದರೆ ಮದುವೆಯಾಗಲೇಬೇಕಿತ್ತು ನಿನ್ನ ಮರೆಯಲಾದರೂ ಈ ಹುಡುಗಿಯಲ್ಲಿ ನಿನ್ನ ಹುಡುಕುವುದಿಲ್ಲ ನಾನು. ನನಗೆ ಒಂದು ಮಾತೂ ಹೇಳದೇ ಹೋದವಳಿಗೆ ಇನ್ನೇನು ಶಿಕ್ಷೆ ಕೊಡಲಿ?
"ಸಂತು ನೆನಪು ಬರ್ತಾ ಇದೆ ಬೀಚ್ ಹತ್ರ ಹೋಗ್ತೀನಿ"
ಅಂತ ನಿನ್ನ ಸ್ನೇಹಿತೆಗೆ ಹೇಳಿ ಹೋದವಳು ಎಷ್ಟು ಹೊತ್ತಾದರೂ ವಾಪಸ್ಸು ಬಂದಿರಲಿಲ್ಲ ಅವಳು ಗಾಭರಿಗೊಂಡು ಫೊನ್ ಮಾಡಿದ್ದಳು ನಾನು ದಡಬಡಿಸಿ ಬೆಂಗಳೂರಿನಿಂದ ಓಡಿ ಬಂದಿದ್ದೆ... ನಮ್ಮ ಘಾಬರಿ ಧಾವಂತಗಳು ಕಡಲಾಳಡಲ್ಲಿ ನೆಮ್ಮದಿಯ ಚಿರನಿದ್ದೆಗೆ ಇಳಿದವಳಿಗೆ ಹೇಗೆ ಗೊತ್ತಾಗಬೇಕು ನೆನಪಾಗಿ ಕಾಡಬೇಡ ಇನ್ನು ನಿನ್ನವನಲ್ಲ ನಾನು....
Friday, July 6, 2007
ಮಳೆ-ನೆನೆಯುವ ಖುಷಿ
ಕಡಲೂರಿನಲ್ಲಿ ಅದ್ಭುತ ಮಳೆ.ಗುಡುಗಿನ ತಬಲಕ್ಕೆ ಸಿಡಿಲಿನ ನರ್ತನ ಗಾಳಿಯ ಹಿಮ್ಮೇಳದಲ್ಲಿ ಮಳೆಯ ಹಾಡು.
ನೀವು ಮಳೆಲಿ ನೆಂದಿದೀರಾ? ಅಯ್ಯೋ ಯಾರು ನೆಂದಿರೋಲ್ಲ ಎಲ್ಲ ನೆಂದಿರ್ತಾರೆ ಅನ್ನಬೇಡಿ.. ಒಂದೇ ಸಮನೆ ಸುರಿಯೋ ಮಳೆಲಿ, ಒಂದು ಅರ್ಧ ಗಂಟೆ ಬೇರೇನು ಮಾಡದೇ, ಕುಣಿದೆ, ಕಿರುಚದೆ ಸುಮ್ಮನೇ ಮಳೆ ಸದ್ದು ಕೇಳುತ್ತಾ ನೆಂದಿದೀರಾ? ಇಲ್ಲ ಅನ್ನೋದಾದರೆ ಈ ಮಳೆಗಾಲದಲ್ಲಿ ಚಾನ್ಸ್ ಬಿಡಬೇಡಿ. ಮಳೆ ಸುರಿಯೊಕ್ಕೆ ಶುರುವಾಯಿತ? ಮನೆಯಿಂದ, ರೂಮಿನಿಂದ, ಆಫೀಸಿನಿಂದ ಹೊರಗೆ ಬನ್ನಿ. ಆಕಾಶದಿಂದ ಮುತ್ತಾಗಿ ಬೀಳುತ್ತಿರುವ ಮಳೆಗೆ ಮೈ ಒಡ್ಡಿ ಖುಶಿ ಆಗ್ತಿದೆ ಅಲ್ಲವ? ಉಹೂo ಕಿರುಚಲೇಬಾರದು. ಮೋಡ ಮೌನ ಒಡೆದಿರುವಾಗ ನಿಮ್ಮ ಮಾತಿಗೆ ಬೆಲೆ ಇಲ್ಲ. ಸುಮ್ಮನೇ ಕೇಳಿ,ಸುರಿವ ಧಾರೆಯ ಶಬ್ಧವನ್ನ ಗಾಳಿಯ ಪಿಸುಮಾತನ್ನ.. ಛಳಿ ಆಗ್ತಿದೆಯಾ?? ಪರವಾಗಿಲ್ಲ ರೀ, ಮನಸ್ಸು ಬೆಚ್ಚಾಗಾಗುತ್ತಿದೆಯಲ್ಲ.. ಹೊಟ್ಟೆಯೋಳಗಿನಿಂದ ಇಷ್ಟಿಷ್ಟೇ ಚಿಮ್ಮುತ್ತಿರುವ ನಡುಕ ಎರಡೇ ನಿಮಿಷಕ್ಕೆ ಹತೋಟಿಗೆ ಬರುತ್ತದೆ. ಹೀಗೆ ಇಂಚಿಂಚಾಗಿ ವ್ಯಾಪಿಸುವ ನಡುಕ ನಿಮಗೆ ಮಳೆಯ ಹುಚ್ಚು ಹಿಡಿಸದಿದ್ದರೆ ಕೇಳಿ...
ಈ ಕನ್ನಡ, ಹಿಂದಿ ಚಲನಚಿತ್ರಗಳ ಬಗ್ಗೆ ನನ್ನದೊಂದು complaint ಇದೆ ಯಾವುದಾದರೂ ಭುತಾನೋ, ದೆವ್ವಾನೋ, ಕರಾಳ ರಾತ್ರಿಯ ಮಾಂತ್ರಿಕನನ್ನೋ, ಇಲ್ಲ ಯಾವುದಾದರೂ ಅಪಘಾತವಾನ್ನೋ ತೋರಿಸುವಾಗ ಕಂಪಲ್ಸರಿ ಮಳೆ ಬರ್ತಿರಬೇಕು. ಮಳೆ ಇಲ್ಲದಿದ್ದರೆ ಅಪಘಾತವೇ ಆಗೋಲ್ಲ, ಭೂತ ದೆವ್ವ ಬರೋಲ್ಲ ಅನ್ನೋ ಹಾಗೆ. ಇಂಥದನ್ನ ನೋಡಿದರೆ ಜನ ಮಳೆನ ಹೇಗೆ ಪ್ರೀತಿಸುತ್ತಾರೆ? ಮಳೆ ಅಂದ ತಕ್ಷಣ ಹೆದರಿಕೊಂಡು ಹೊದ್ದುಕೊಂಡು ಮಲಗುತ್ತಾರೆ ಅಷ್ಟೇ.
ಈ ಬಯಲುಸೀಮೆಯವರಿಗೆ ಮಳೆ ಅಂದರೆ ವಿಚಿತ್ರ ಭಯ. ಒಂದು ದಿನ ನಾನು ನನ್ನ ಸ್ನೇಹಿತೆಯರು(ಎಲ್ಲ ಬಯಲುಸೀಮೆಯವರು) ಅವರ ಉರಿನಲ್ಲಿ ಯಾವುದೋ ಚಂದದ ಕೆರೆ ಇದೆ ಅಂತ ಅದನ್ನ ನೋಡೋಕ್ಕೆ ಹೊರಟೆವು ಹತ್ತು ಹದಿನೈದು ನಿಮಿಷ ನೆಡೆದಮೇಲೆ 'ಕಾಡು-ಕಾಡು' ಅಂತ ಕೂಗೊಕ್ಕೆ ಶುರು ಮಾಡಿದರು. ನನಗೆ ದೂರದವರೆಗೂ ಕಾಡು ಕಾಣಿಸುತ್ತಿರಲಿಲ್ಲ ಇವರು ನೋಡಿದರೆ ಕಾಡು ಕಾಡು ಅಂತ ಕುಣೀತಿದಾರೆ.. "ಎಲ್ರೆ ಕಾಡು?" ಅಂದ್ರೆ ನೋಡು ಅಂತ ಒಂದಷ್ಟು ಪೊದೆ, ಹತ್ತು ಹದಿನೈದು ಮರ ಬೆಳೆದಿರುವ ಕಡೆ ಬೊಟ್ಟು ಮಾಡುತ್ತಿದ್ದರು.ಇವರನ್ನು ನೋಡಿ ನಗಬೇಕೋ ಅಳಬೆಕೋ ಗೊತ್ತಾಗಲಿಲ್ಲ ನನಗೆ.
ಹಾ ಎಲ್ಲಿಗೋ ಬಂದುಬಿಟ್ಟೆ ಸರಿ ಅಲ್ಲೇ ಪಕ್ಕದಲ್ಲಿದ್ದ ಕೆರೆ ಕಡೆ ಹೋಗುತ್ತಿದ್ದೇವೆ, ದಪ್ಪ ದಪ್ಪ ಹನಿಗಳು ಆಕಾಶದಿಂದ ಉದುರಲು ಶುರು. ಈ ಹುಡುಗೀರೆಲ್ಲ "ಅಯ್ಯೋ ಮಳೆ! ಬೇಗ ಬಾರೆ" ಅಂದುಕೊಂಡು ರೈಟ್ ಅಬೌಟ್ ಟರ್ನ್ ಅಂತ ಮನೆ ಕಡೆ ಒಂದೇ ಸಮ ಓಡಿದರು. ನನಗೆ ಕಕ್ಕಾಬಿಕ್ಕಿ. ನಾನು ಆರಾಮಾಗಿ ಮಳೆಲಿ ನೆಂದುಕೊಂಡು ನಾವೆಲ್ಲ ಉಳಿದುಕೊಂಡಿದ್ದ ನನ್ನ ಸ್ನೇಹಿತೆಯ ಮನೆ ಸೇರಿದೆ.
"ಯಾಕ್ರೆ ಹಂಗೆ ಓಡಿ ಬಂದ್ರಿ" ಅಂದ್ರೆ
"ಅಯ್ಯೋ ಮಳೆ ಬರೊಕ್ಕೆ ಶುರುವಾಯಿತು ಭಯ ಆಗೋಲ್ವಾ?" ಅಂದಳು ಶಿಲ್ಪ.
ಭಯ ಯಾಕೆ ಅಂದ್ರೆ, ಮಳೆ ಬಂದಾಗ ಕರ್ನಾಟಕದಲ್ಲಿ ಸತ್ತವರ ಕಥೆಗಳನ್ನೆಲ್ಲಾ ಬಿಡದೆ ಕೊರೆದಳು 'ಅತಿವೃಷ್ಟಿಯಿಂದ ಉಂಟಾಗುವ ಹಾನಿಗಳು' ಅಂತ ನಾನು ಪ್ರಭoದ ಬರೀಬಹುದೇನೋ ಅಷ್ಟು ಮಳೆಯಿಂದ ಆಗುವ ಹಾನಿಗಳ ಬಗ್ಗೆ ಇನ್ನೊಬ್ಬಳು ಹೇಳಿದಳು. ನಾನು "ಅದೆಲ್ಲ ಸರಿ ನಿಮ್ಮೂರಲ್ಲಿ ಮಳೆ ಬರೋದೆ ಅಪರೂಪ. ಅದು ಏನು ತುಂಬಾ ಜೋರಾಗಿ ಬರುತ್ತಿರಲಿಲ್ಲ ನಾನು ನೆಂದುಕೊಂಡು ಬಂದೆನಲ್ಲ ಏನಾಯ್ತು?" ಅಂದ್ರೆ ನೀನು ಬಿಡು ಅಂದಳು. ನೀನೊಂದು ಮೆಂಟ್ಲೂ ನಿಂಗೆನು ಹೇಳಿದ್ರು ಪ್ರಯೋಜನ ಇಲ್ಲ ಅನ್ನೋ ಅರ್ಥ.
ಸರಿ ಅದು ಬಿಡಿ ಎಲ್ಲಿದ್ಡೀವಿ? ಮಳೆಲಿ ನೆನಿತಾ ಇದ್ದೀವಿ. ತೃಪ್ತಿಯಾಗಿ ನೆಂದಾಯಿತ? ವಾಪಸ್ಸು ರೂಮಿಗೆ, ಮನೆಗೆ, ಬನ್ನಿ. ನೀವು ಆಫೀಸಿನಲ್ಲಿದ್ರೆ ದಯವಿಟ್ಟು ರಜ ಹಾಕಿ ಮನೆಗೆ ಹೋಗಿ. ಬೆಚ್ಚಗಿನ ಬಟ್ಟೆ ಹಾಕಿಕೊಳ್ಳಿ ನಂತರ ಒಂದು ಅತ್ಯದ್ಭುತವಾದ ಕಾಫಿ ಮಾಡಿಕೊಂಡು ಒಂದು ದೊಡ್ಡ ಬಟ್ಟಲಿಗೆ ಅದನ್ನ ಸುರಿದುಕೊಂಡು ಅದರ ಹಿತವಾದ ಬಿಸಿ ಮೈ ಮನಗಳನ್ನು ವ್ಯಾಪಿಸುವಂತೆ ತೊಟ್ಟು ತೊಟ್ಟಾಗಿ ಹೀರುತ್ತಿದ್ದರೆ ಅದೇನೋ ಹೇಳುತ್ತಾರಲ್ಲ.... ಸ್ವರ್ಗಕ್ಕೆ ಮೂರೇ ಗೇಣು.
ನೀವು ಮಳೆಲಿ ನೆಂದಿದೀರಾ? ಅಯ್ಯೋ ಯಾರು ನೆಂದಿರೋಲ್ಲ ಎಲ್ಲ ನೆಂದಿರ್ತಾರೆ ಅನ್ನಬೇಡಿ.. ಒಂದೇ ಸಮನೆ ಸುರಿಯೋ ಮಳೆಲಿ, ಒಂದು ಅರ್ಧ ಗಂಟೆ ಬೇರೇನು ಮಾಡದೇ, ಕುಣಿದೆ, ಕಿರುಚದೆ ಸುಮ್ಮನೇ ಮಳೆ ಸದ್ದು ಕೇಳುತ್ತಾ ನೆಂದಿದೀರಾ? ಇಲ್ಲ ಅನ್ನೋದಾದರೆ ಈ ಮಳೆಗಾಲದಲ್ಲಿ ಚಾನ್ಸ್ ಬಿಡಬೇಡಿ. ಮಳೆ ಸುರಿಯೊಕ್ಕೆ ಶುರುವಾಯಿತ? ಮನೆಯಿಂದ, ರೂಮಿನಿಂದ, ಆಫೀಸಿನಿಂದ ಹೊರಗೆ ಬನ್ನಿ. ಆಕಾಶದಿಂದ ಮುತ್ತಾಗಿ ಬೀಳುತ್ತಿರುವ ಮಳೆಗೆ ಮೈ ಒಡ್ಡಿ ಖುಶಿ ಆಗ್ತಿದೆ ಅಲ್ಲವ? ಉಹೂo ಕಿರುಚಲೇಬಾರದು. ಮೋಡ ಮೌನ ಒಡೆದಿರುವಾಗ ನಿಮ್ಮ ಮಾತಿಗೆ ಬೆಲೆ ಇಲ್ಲ. ಸುಮ್ಮನೇ ಕೇಳಿ,ಸುರಿವ ಧಾರೆಯ ಶಬ್ಧವನ್ನ ಗಾಳಿಯ ಪಿಸುಮಾತನ್ನ.. ಛಳಿ ಆಗ್ತಿದೆಯಾ?? ಪರವಾಗಿಲ್ಲ ರೀ, ಮನಸ್ಸು ಬೆಚ್ಚಾಗಾಗುತ್ತಿದೆಯಲ್ಲ.. ಹೊಟ್ಟೆಯೋಳಗಿನಿಂದ ಇಷ್ಟಿಷ್ಟೇ ಚಿಮ್ಮುತ್ತಿರುವ ನಡುಕ ಎರಡೇ ನಿಮಿಷಕ್ಕೆ ಹತೋಟಿಗೆ ಬರುತ್ತದೆ. ಹೀಗೆ ಇಂಚಿಂಚಾಗಿ ವ್ಯಾಪಿಸುವ ನಡುಕ ನಿಮಗೆ ಮಳೆಯ ಹುಚ್ಚು ಹಿಡಿಸದಿದ್ದರೆ ಕೇಳಿ...
ಈ ಕನ್ನಡ, ಹಿಂದಿ ಚಲನಚಿತ್ರಗಳ ಬಗ್ಗೆ ನನ್ನದೊಂದು complaint ಇದೆ ಯಾವುದಾದರೂ ಭುತಾನೋ, ದೆವ್ವಾನೋ, ಕರಾಳ ರಾತ್ರಿಯ ಮಾಂತ್ರಿಕನನ್ನೋ, ಇಲ್ಲ ಯಾವುದಾದರೂ ಅಪಘಾತವಾನ್ನೋ ತೋರಿಸುವಾಗ ಕಂಪಲ್ಸರಿ ಮಳೆ ಬರ್ತಿರಬೇಕು. ಮಳೆ ಇಲ್ಲದಿದ್ದರೆ ಅಪಘಾತವೇ ಆಗೋಲ್ಲ, ಭೂತ ದೆವ್ವ ಬರೋಲ್ಲ ಅನ್ನೋ ಹಾಗೆ. ಇಂಥದನ್ನ ನೋಡಿದರೆ ಜನ ಮಳೆನ ಹೇಗೆ ಪ್ರೀತಿಸುತ್ತಾರೆ? ಮಳೆ ಅಂದ ತಕ್ಷಣ ಹೆದರಿಕೊಂಡು ಹೊದ್ದುಕೊಂಡು ಮಲಗುತ್ತಾರೆ ಅಷ್ಟೇ.
ಈ ಬಯಲುಸೀಮೆಯವರಿಗೆ ಮಳೆ ಅಂದರೆ ವಿಚಿತ್ರ ಭಯ. ಒಂದು ದಿನ ನಾನು ನನ್ನ ಸ್ನೇಹಿತೆಯರು(ಎಲ್ಲ ಬಯಲುಸೀಮೆಯವರು) ಅವರ ಉರಿನಲ್ಲಿ ಯಾವುದೋ ಚಂದದ ಕೆರೆ ಇದೆ ಅಂತ ಅದನ್ನ ನೋಡೋಕ್ಕೆ ಹೊರಟೆವು ಹತ್ತು ಹದಿನೈದು ನಿಮಿಷ ನೆಡೆದಮೇಲೆ 'ಕಾಡು-ಕಾಡು' ಅಂತ ಕೂಗೊಕ್ಕೆ ಶುರು ಮಾಡಿದರು. ನನಗೆ ದೂರದವರೆಗೂ ಕಾಡು ಕಾಣಿಸುತ್ತಿರಲಿಲ್ಲ ಇವರು ನೋಡಿದರೆ ಕಾಡು ಕಾಡು ಅಂತ ಕುಣೀತಿದಾರೆ.. "ಎಲ್ರೆ ಕಾಡು?" ಅಂದ್ರೆ ನೋಡು ಅಂತ ಒಂದಷ್ಟು ಪೊದೆ, ಹತ್ತು ಹದಿನೈದು ಮರ ಬೆಳೆದಿರುವ ಕಡೆ ಬೊಟ್ಟು ಮಾಡುತ್ತಿದ್ದರು.ಇವರನ್ನು ನೋಡಿ ನಗಬೇಕೋ ಅಳಬೆಕೋ ಗೊತ್ತಾಗಲಿಲ್ಲ ನನಗೆ.
ಹಾ ಎಲ್ಲಿಗೋ ಬಂದುಬಿಟ್ಟೆ ಸರಿ ಅಲ್ಲೇ ಪಕ್ಕದಲ್ಲಿದ್ದ ಕೆರೆ ಕಡೆ ಹೋಗುತ್ತಿದ್ದೇವೆ, ದಪ್ಪ ದಪ್ಪ ಹನಿಗಳು ಆಕಾಶದಿಂದ ಉದುರಲು ಶುರು. ಈ ಹುಡುಗೀರೆಲ್ಲ "ಅಯ್ಯೋ ಮಳೆ! ಬೇಗ ಬಾರೆ" ಅಂದುಕೊಂಡು ರೈಟ್ ಅಬೌಟ್ ಟರ್ನ್ ಅಂತ ಮನೆ ಕಡೆ ಒಂದೇ ಸಮ ಓಡಿದರು. ನನಗೆ ಕಕ್ಕಾಬಿಕ್ಕಿ. ನಾನು ಆರಾಮಾಗಿ ಮಳೆಲಿ ನೆಂದುಕೊಂಡು ನಾವೆಲ್ಲ ಉಳಿದುಕೊಂಡಿದ್ದ ನನ್ನ ಸ್ನೇಹಿತೆಯ ಮನೆ ಸೇರಿದೆ.
"ಯಾಕ್ರೆ ಹಂಗೆ ಓಡಿ ಬಂದ್ರಿ" ಅಂದ್ರೆ
"ಅಯ್ಯೋ ಮಳೆ ಬರೊಕ್ಕೆ ಶುರುವಾಯಿತು ಭಯ ಆಗೋಲ್ವಾ?" ಅಂದಳು ಶಿಲ್ಪ.
ಭಯ ಯಾಕೆ ಅಂದ್ರೆ, ಮಳೆ ಬಂದಾಗ ಕರ್ನಾಟಕದಲ್ಲಿ ಸತ್ತವರ ಕಥೆಗಳನ್ನೆಲ್ಲಾ ಬಿಡದೆ ಕೊರೆದಳು 'ಅತಿವೃಷ್ಟಿಯಿಂದ ಉಂಟಾಗುವ ಹಾನಿಗಳು' ಅಂತ ನಾನು ಪ್ರಭoದ ಬರೀಬಹುದೇನೋ ಅಷ್ಟು ಮಳೆಯಿಂದ ಆಗುವ ಹಾನಿಗಳ ಬಗ್ಗೆ ಇನ್ನೊಬ್ಬಳು ಹೇಳಿದಳು. ನಾನು "ಅದೆಲ್ಲ ಸರಿ ನಿಮ್ಮೂರಲ್ಲಿ ಮಳೆ ಬರೋದೆ ಅಪರೂಪ. ಅದು ಏನು ತುಂಬಾ ಜೋರಾಗಿ ಬರುತ್ತಿರಲಿಲ್ಲ ನಾನು ನೆಂದುಕೊಂಡು ಬಂದೆನಲ್ಲ ಏನಾಯ್ತು?" ಅಂದ್ರೆ ನೀನು ಬಿಡು ಅಂದಳು. ನೀನೊಂದು ಮೆಂಟ್ಲೂ ನಿಂಗೆನು ಹೇಳಿದ್ರು ಪ್ರಯೋಜನ ಇಲ್ಲ ಅನ್ನೋ ಅರ್ಥ.
ಸರಿ ಅದು ಬಿಡಿ ಎಲ್ಲಿದ್ಡೀವಿ? ಮಳೆಲಿ ನೆನಿತಾ ಇದ್ದೀವಿ. ತೃಪ್ತಿಯಾಗಿ ನೆಂದಾಯಿತ? ವಾಪಸ್ಸು ರೂಮಿಗೆ, ಮನೆಗೆ, ಬನ್ನಿ. ನೀವು ಆಫೀಸಿನಲ್ಲಿದ್ರೆ ದಯವಿಟ್ಟು ರಜ ಹಾಕಿ ಮನೆಗೆ ಹೋಗಿ. ಬೆಚ್ಚಗಿನ ಬಟ್ಟೆ ಹಾಕಿಕೊಳ್ಳಿ ನಂತರ ಒಂದು ಅತ್ಯದ್ಭುತವಾದ ಕಾಫಿ ಮಾಡಿಕೊಂಡು ಒಂದು ದೊಡ್ಡ ಬಟ್ಟಲಿಗೆ ಅದನ್ನ ಸುರಿದುಕೊಂಡು ಅದರ ಹಿತವಾದ ಬಿಸಿ ಮೈ ಮನಗಳನ್ನು ವ್ಯಾಪಿಸುವಂತೆ ತೊಟ್ಟು ತೊಟ್ಟಾಗಿ ಹೀರುತ್ತಿದ್ದರೆ ಅದೇನೋ ಹೇಳುತ್ತಾರಲ್ಲ.... ಸ್ವರ್ಗಕ್ಕೆ ಮೂರೇ ಗೇಣು.
Subscribe to:
Posts (Atom)