Friday, January 25, 2008

ಮನಶ್ಯಾಸ್ತ್ರ

ಅವಳು ಬಾಗಿಲು ತೆಗೆದು ನೋಡಿದ್ರೆ ಅವನು ಅಲ್ಲಿ ನಿಂತಿದ್ದ. ಅವಳಿಗೆ ಯಾವತ್ತೂ ಆಗದಷ್ಟು ಖುಷಿಯಾಯಿತು. ಆವ್ನು ಅವ್ಳ ಹಿಂದೆನೇ ಒಳಗೆ ಬಂದ, ಅಲ್ಲೆಗೆ ಬಂದಿರೋದಕ್ಕೆ ತುಂಬ ಖುಷಿಯಾಗಿದಾನೆ ಅನ್ನಿಸಿತು.
'ಏನೂ ಕೆಲಸ ಇಲ್ಲವಲ್ಲ?'

'ಇಲ್ಲ ಕಾಫಿ ಮಾಡ್ಕೊಂಡು ಕುಡಿಯೋಣ ಅಂತಿದ್ದೆ.'

'ಮತ್ತೆ ಯಾರಾದ್ರೂ ಬರೋರು ಇದಾರ??'

'ಇಲ್ಲ ಯಾರೂ ಇಲ್ಲ' 'ಆಹಾ.. ಒಳ್ಳೇದಾಯ್ತು.'

ಕಾರ್ ಕೀಯನ್ನ ಟೇಬಲ್ಲಿನಮೇಲಿಟ್ಟು ಆರಾಮಾಗಿ ಜರ್ಕಿನ್ನನ್ನೂ ಶೂಸನ್ನೂ ಬಿಚ್ಚಿದ. ಆವನನ್ನ ನೋಡ್ತಿದ್ದ್ರೆ ಯಾವ್ದಕ್ಕೂ ಆತುರ ಇಲ್ಲವೇನೋ, ಆರಾಮಾಗಿದಾನೇನೋ ಅಥವ ಅವುಗಳೆಲ್ಲಾ ಜೀವನ ಪರ್ಯಂತ ಬೇಡ್ವೇನೋ ಅನ್ನೋಹಾಗೆ ಕಂಡ. ಬಚ್ಚಲಿಗೆ ಹೋಗಿ ಸುಖವಾಗಿ ಕೈಕಾಲು ತೊಳೆದುಕಂಡು ಬಂದ.

ಕಿಟಕಿಗಳನ್ನು ಮುಚ್ಚಿದ ಭಾರವಾದ ಪರದೆಗಳನ್ನ ದಾಟಿ ಒಳಬರುತ್ತಿರುವ ಮಬ್ಬು ಬೆಳಕಿನಲ್ಲಿ ಒಂದುಕ್ಷಣ ಇಬ್ಬರೂ ಸುಮ್ಮನಾದರು, ಸುಮ್ಮನಿರುವ ಮಬ್ಬು ಬೆಳಕಿನಂತೆ. ಅವರ ತುಟಿಗಳಲ್ಲಿ ಹರಡಿದ ಖುಷಿಯ ಸಿಹಿಯನ್ನು ಅನುಭವಿಸುತ್ತಾ.. ಅವರ ಒಳಗುಗಳು ಪಿಸುಗುಟ್ಟುತ್ತಿದ್ದವು.
‘ನಾವು ಯಾಕಾದರೂ ಮಾತಾಡಬೇಕು?

' ಇಷ್ಟು ಸಾಕಾಗದ?ಬೇಕಾದಷ್ಟು ಇದು.'

'ನನಗೆ ಇಲ್ಲಿಯವರೆಗೆ ಗೊತ್ತೇ ಆಗಲಿಲ್ಲವಲ್ಲ’

‘ನಿನ್ನ ಜೊತೆ ಸುಮ್ಮನೆ ಇರೋಕ್ಕೆ ಎಷ್ಟು ಚೆನ್ನಾಗಿರುತ್ತೆ’

'ಹೀಗೇ ಸುಮ್ನೆ.ಇಷ್ಟು ಸಾಕಪ್ಪಾ ಇನ್ನೇನು ಬೇಡ'


ಅವನ ಕಣ್ಗಳು ಅವಳದ್ದನ್ನು ಸಂಧಿಸಿದವು ಅವಳು ತಕ್ಷಣ ಬೇರೆ ಕಡೆ ನೋಡಿದಳು.
‘ಕಾಫಿ ! ಕಾಫಿ ಕುಡೀಬೇಕು ಅನ್ನಿಸ್ತಿದೆಯಾ?’

'ಇಲ್ಲ ಅನ್ನಿಸ್ತಿಲ್ಲ'

'ನಂಗೆ ಅನ್ನಿಸ್ತಿದೆ'

'ನೀನು ಹಾಸ್ಪಿಟಲ್ನಲ್ಲ ಕಾಫೀ ಡೇಲೇ ಹುಟ್ಟಿದ್ದು ನಿಜ…' ಎನ್ನುತ್ತಾ ಸೋಫಾಮೇಲೆ ಧಡಾರಂತ ಕೂತ

'ಹೌವ್ದು ಕಣೋ ಕಾಫಿ ಇಷ್ಟ ನಂಗೆ' ಎನ್ನುತ್ತಾ ಅಡುಗೆ ಮನೆಗೆ ಹೋದಳು, ಅವನೂ ಹಿಂದೆಯೇ ಬಂದ.ಅವಳು ಕಾಫಿ ಮಾಡೋದನ್ನೇ ನೋಡುತ್ತಿದ್ದ. ಅವಳು ಕಾಫಿ ಮಾಡೋ ರೀತಿಲೇ ಅವಳಿಗೆ ಕಾಫಿ ಮಾಡೋಕ್ಕೆ ತುಂಬ ಇಷ್ಟ ಅನ್ನೋದು ಗೊತ್ತಾಗುತ್ತಿತ್ತು.ಕಾಫಿಬೀಜವನ್ನ ಹುರಿಯೊಕ್ಕೇ ಎಂದು ಇಟ್ಟಿದ್ದ ಬಾಣಲೆಯಲ್ಲಿ ಕಾಫಿಬೀಜವನ್ನ ಹುರಿಯುತ್ತಿದ್ದರೆ.. ಪಕ್ಕದಲ್ಲಿ ತುಂಬ ಕಡಿಮೆ ಕಾವಲ್ಲಿ ನೀರು ಬೆಚ್ಚಗಾಗುತ್ತಿತ್ತು.’ಸಕ್ಕರೆ ಹಾಕೋಲ್ಲ’ ಕಣ್ಣಲ್ಲಿ 'ನಿಂಗೂ ಬೇಡ ಅಲ್ಲ್ವ?'ಅನ್ನೊ ಪ್ರಶ್ನೆ. ಕಾಫಿ ಬೀಜವನ್ನ ಹಾಲುಬಿಳುಪಿನ ಪುಟ್ಟ ಮಿಕ್ಸರ್ನಲ್ಲಿ ಟರ್ರ್ ರ್ ರ್.. ಎನಿಸುತ್ತಿದ್ದರೆ, ಮನೆಯೆಲ್ಲಾ ಘಮಘಮ.. ‘ನಂಗೆ ಬೇಡ ಆಮೇಲ್ ಬೇಕಾದ್ರೆ ಮೇಲೆ ಹಾಕೋತಿನಿ’ ಫ್ರಿಡ್ಜಿನಿಂದ ಹಾಲು ತೆಗೆದು ಕೊಟ್ಟು, ಹೊರಗೆ ಹೋಗಿ ಪೇಪರ್ ನೋಡುತ್ತಾ ಮನೆಯೆಲ್ಲಾ ಅಡ್ಡಾಡುತ್ತಿದ್ದ ಘಮವನ್ನ ಅನುಭವಿಸುತ್ತಿದ್ದ. ಕಾಫಿ ಬಂತು ಹಿಂದೆಯೇ ಏನೇನೋ ತಿಂಡಿಗಳು. ಅವ್ಳು ಯಾವಾಗ್ಲೂ ರುಚಿರುಚಿಯಾಗಿರೋದನ್ನೇ ಇಟ್ಟಿರುತ್ತಾಳೆ… ಚಕ್ಕುಲಿ, ತೇಂಗೊಳಲು ನೆಂಚಿಕೊಳ್ಳೊಕ್ಕೆ ಪುಳಿಯೋಗರೆ ಗೊಜ್ಜು. ಕಾಫಿಯನ್ನ ಬೆಚ್ಚಗೆ ಹೀರುತ್ತಾ ಹೇಳಿದ ‘ಹೋದ್ ಸತಿ ಸಿಕ್ಕಾಗ ಹೇಳಿದೆಯಲ್ಲ ಅದರ ಬಗ್ಗೆ ಯೋಚಿಸುತ್ತಿದ್ದೆ. ನಂಗೇನನ್ಸುತ್ತೆ ಅಂದ್ರೆ…’


ಹೌದು ಅದಕ್ಕಾಗೇ ಅವನು ಕಾಯುತ್ತಿದ್ದ ಅವಳೂ ಕೂಡ. ಅವಳು ನೋಡಿದಳು ಅವನು ಸೋಫಾಕ್ಕೆ ಒರಗಿಕೊಂಡು ಬಿಚ್ಚಿಕೊಳ್ಳತೊಡಗಿದ್ದ ಮತ್ತು ತಾನು ನೀಲಿ ಕುರ್ಚಿಯಲ್ಲಿ ಮುದುಡಿಕೊಳ್ಳುತ್ತಿದ್ದಳು. ಈ ಚಿತ್ರ ಎಷ್ಟು ವಿವರವಾಗಿ ಸ್ಪುಟವಾಗಿ ಅವಳ ಕಣ್ಣುತುಂಬಿತೆಂದರೆ ಬಿಡಿಸಬಹುದೇನೋ ಅಂದುಕೊಂಡಳು. ಆದರೂ ಆತುರ ಮಾಡೋಕ್ಕಾಗೋಲ್ಲ ಅವಳಿಗೆ ‘ನಂಗೆ ಟೈಮ್ ಬೇಕು’ ಅಂತ ಕಿರುಚಿಕೊಳ್ಳುತ್ತಾಳೆ' ಅನ್ನಿಸಿತು. ತನಿನ್ನೂ ಬೆಳೆಯುವುದ್ದಕ್ಕೆ, ಒಳಗೊಳಗೇ ಶಾಂತವಾಗುವದಕ್ಕೆ ಸಮಯಬೇಕಾಗಿತ್ತು ಅವಳಿಗೆ. ಇಷ್ಟು ವಿವರವಾಗಿ ಬದುಕಿದ ಸಂಗತಿಗಳಿಂದ ಕಳಚಿಕೊಳ್ಳಲು , ಬರಿದಾಗಲು ಬೇಕಿತ್ತು ಸಮಯ. ಅಲ್ಲಿದ್ದ ಸಂತೋಷ ಕೊಡುವ- ಅಳಿಸುವ ಪ್ರತಿಯೊಂದು ವಸ್ತುವೂ ಅವಳ ಭಾಗವೇ, ಅವಳ ಕುಡಿಯೇ, ಅವುಗಳೇ ಅತಿ ಹೆಚ್ಚು ಹಕ್ಕನ್ನು ಅವಳ ಮೇಲೆ ಸಾಧಿಸಿದ್ದವು.ಆದರೆ ಅವೆಲ್ಲವುಗಳಿಂದ ದೂರವಾಗಬೇಕು, ಬಿಡಿಸಿಕೊಳ್ಳಬೇಕು. ಅವೆಲ್ಲವನ್ನೂ ಮಡಚಿ- ಉಸಿರುಗಟ್ಟಿಸಿ- ಅಟ್ಟದಮೇಲೆ ತುರುಕಬೇಕು ರಾತ್ರಿಯಾಗುತ್ತಲೆ ಬಲವಂತ ಮಾಡಿ ಮಲಗಿಸಬೇಕಾದ ಮಕ್ಕಳಂತೆ-ಚೂರು ಸದ್ದಿಲ್ಲದೆ ಉಸಿರುಗಟ್ಟಿಸಬೇಕು.


ಸ್ನೇಹದಲ್ಲಿ ಸಂಪೂರ್ಣ ಸಮರ್ಪಿಸಿಕೊಂಡಿದ್ದರು ಅವರು. ಮೈದಾನದ ಎರಡು ಬದಿಗಳಲ್ಲಿರುವ ದೊಡ್ಡ ನಗರಗಳಂತೆ, ಅವರ ಮನಸುಗಳು ಒಬ್ಬರಿಗೊಬ್ಬರಿಗೆ ತೆರೆಯಲ್ಪಟ್ಟಿದ್ದವು. ಆವನು ಅವಳಲ್ಲಿಗೆ ಗೆದ್ದುಕೊಳ್ಳುವವನಂತೆ ಆಕ್ರಮಣಕಾರನಂತೆ ಬರುತ್ತಿರಲಿಲ್ಲ. ಮ್ರುದು ದಳಗಳ ಮೇಲೆ ನೆಡೆದುಕೊಂಡುಬರುವ ರಾಣಿಯಂತೆ ಬರುವುದು ಅವಳ ರೀತಿಯಲ್ಲ. ಊಹಂ, ಅವರದು ತುಂಬು ಪ್ರಯಾಣಗಳು, ಚಾರಣಗಳು, ತಿರುಗಾಟಗಳು, ನೋಡಬೇಕಾಗಿದ್ದನ್ನು ಅಡಗಿರುವುದನ್ನು ಹುಡುಕುವುದರಲ್ಲಿ ಮುಳುಗಿಹೊಗುತ್ತಿದ್ದರು.. ಇವೆಲ್ಲವುದರಿಂದ ಅವನು ಅವಳಿಗೆ ಸಂಪೂರ್ಣ ನಿಜವಾಗಿದ್ದ.. ಅವಳು ಅವನಿಗೆ ಪ್ರಾಮಾಣಿಕವಾಗಿದ್ದಳು.


ಆವರಲ್ಲಿ ತುಂಬ ಚಂದದ್ದೇನೆಂದರೆ, ಅವರಿಬ್ಬರೂ ಆ ಎಲ್ಲಾ ಸಾಹಸ ಕಾರ್ಯಗಳನ್ನ ಯಾವುದೇ ಹುಚ್ಚು ಭಾವನೆಗಳಿಗೆ ಒಳಗಾಗದೆ, ಖುಷಿಯಾಗಿ ಅನುಭವಿಸೋಷ್ಟು ದೊಡ್ಡವರಾಗಿದ್ದರು. ಯಾವುದೇ ಅನುರಾಗ ಮೋಹ ಅವರನ್ನು ನಿರ್ನಾಮ ಮಾಡಿಬಿಡುತ್ತದೆಂಬುದು ಅವರಿಗೆ ಗೊತ್ತಿತ್ತು. ಅಂಥದೆಲ್ಲಾ ಅವರ ಜೊತೆ ಆಗಿಹೋಗಿತ್ತು. ಅವನಿಗೆ ಮೂವತ್ತೊಂದು ಅವಳಿಗೆ ಮೂವತ್ತು. ಆವರಿಗೆ ಅವರದೇ ಆದ ಅನುಭವಗಳಿದ್ದವು ತುಂಬು ಅನುಭವಗಳು, ವಿವಿಧ ಅನುಭವಗಳು. ಆದರೆ ಇದು ಕುಯಿಲಿನ ಸಮಯವಲ್ಲವೇ…??


ತಟ್ಟೆಯಲ್ಲಿಟ್ಟಿದ್ದ ಮೈಸೂರುಪಾಕನ್ನು ಕತ್ತರಿಸುತ್ತಿದ್ದಳು ಅವನು ತಟ್ಟೆಗೆ ಕೈಹಾಕಿದ.
‘ಅದೆಷ್ಟು ಚೆನ್ನಾಗಿದೆ ಅನ್ನೋದನ್ನ ಅರ್ಥ ಮಾಡ್ಕೋ. ಆದನ್ನ ಅನುಭವಿಸುತ್ತಾ ತಿನ್ನಬೇಕು ಕಣ್ಣು ಮುಚ್ಚಿಕೊಂಡು. ಬೀದಿ ಬದಿಯಲ್ಲಿ ಸಿಗೋ ಕಡ್ಲೆ ಮಿಠಾಯಿಯಲ್ಲ ಇದು, ನೋಡು ಬಾಯಲ್ಲಿಟ್ಟರೆ ಹೇಗೆ ಕರಗಿಹೋಗತ್ತೆ. ಪುರಾಣದಲ್ಲಿ ಬರೋ ಅಮ್ರಥದ ಥರ ಇದು. ಅಮ್ರತಕ್ಕೆ ಕಿತ್ತಾಡಿದ್ದರು ಅನ್ನೋದನ್ನ ಮರೀಬೆಡ’ ಅಂದಳು

‘ನಂಗೆ ಅದ್ನೆಲ್ಲಾ ವಿವರಿಸಬೇಕಿಲ್ಲ ನೀನು. ನಂಗೊತ್ತು ನಾ ಇಲ್ಲಿ ತಿನ್ನೋದು ಬೇರೆಲ್ಲೂ ಸಿಗೋಲ್ಲ. ಆದ್ರೆ ಪ್ರಯಷಃ ಅಷ್ಟು ದಿನದಿಂದ ಒಬ್ಬನೇ ಇದ್ದಿದ್ದರಿಂದಲೋ, ತಿನ್ನೋವಾಗಲೆಲ್ಲಾ ಓದಿಕೊಂಡೋ, ಟೀ ವಿ ನೋಡಿಕೊಂಡೋ, ಇನ್ನೇನನ್ನೋ ಮಾಡುತ್ತಿರೋದ್ರಿಂದಲೋ ಏನೋ.. ಆಹಾರವನ್ನ ಆಹಾರದಂತೆ ನೊಡ್ತೀನಿ. ಯಾವಾಗಲೂ ಗಬಗಬ ತಿಂದು ಮುಗಿಸ್ತೀನಿ.’

ನಕ್ಕ ‘ಆಶ್ಚರ್ಯ ಆಗತ್ತಲ್ವಾ ನಿಂಗೆ?’

ಅವಳ ಕಣ್ಗಳು ನಗುತ್ತಿದ್ದವು ಅವನು ಮತ್ತೆ ನಕ್ಕ.


ಆದ್ರೆ ನೋಡಿಲ್ಲಿ ಹರಡಿದ್ದ ಪೇಪರನ್ನು ಮಡಚಿ ಟೇಬಲ್ಲಿನಮೇಲಿಟ್ಟು ಪಟಪಟ ಮಾತಾಡತೊಡಗಿದ. ‘ಹೊರಗಡೆಯ ಜೀವನವೇ ಇಲ್ಲ ನನಗೆ. ಎಷ್ಟೋ ವಸ್ತುಗಳ ಹೆಸರು ಗೊತ್ತಿಲ್ಲ-ಮರಗಳು, ರೋಡುಗಳು, ತಿರುವುಗಳು, ಅಂಗಡಿಗಳು, ಇನ್ನೂ ಏನೇನೋ.. ನಾ ಯಾವತ್ತೂ ಜಾಗಗಳನ್ನ ಪೀಠೋಪಕರಣಗಳನ್ನ, ಗಾಜುಗಳನ್ನ, ಗಮನಿಸಿದ್ದೇ ಇಲ್ಲ. ಅಥವ ಜನ ಹೆಂಗೆ ಕಾಣ್ತಾರೆ ಅಂತ ಗೊತ್ತಿಲ್ಲ. ಒಂದು ಕೋಣೆ ಇನ್ನೊಂದರಂತೆ ಕಾಣತ್ತೆ, ಒಂದು ಜಾಗ ಇನ್ನೊಂದರಂತೆ, ಒಂದು ಸ್ಥಳ ಮತ್ತೊಂದರಂತೆ. ಯಾವುದಾದರೊಂದು ಜಾಗ ಕೂರೋಕ್ಕೆ- ಓದೊಕ್ಕೆ- ಮಾತಾಡೋಕ್ಕೆ. ಆದರೆ ಈಗ...’ ಆವನು ಇಲ್ಲಿ ನಿಲ್ಲಿಸಿದ ನಿಷ್ಕಪಟವಾದ ಸುಂದರ ನಗು ಅವನ ತುಟಿಗಳನ್ನ ಸವರಿಕೊಂಡು ಹೋಯಿತು. ‘ಆದರೆ ಈ ಮನೆಯೊಂದನ್ನ ಬಿಟ್ಟು” ಅವನು ತನ್ನ ಅವಳ ಸುತ್ತ ನೋಡಿ ಖುಷಿಯಿಂದ ಆಶ್ಚ್ಯರ್ಯದಿಂದ ನಕ್ಕ. ಆವನು ಯಾವಥರದೋನೆಂದರೆ ಪಯಣದ ಕೊನೆಗೆ ಬಂದಾಗಿದೆಯೆಂದು ನಿದ್ದೆಯಿಂದೆದ್ದು ತಿಳಿದುಕೊಳ್ಳುವ ಪ್ರಯಾಣಿಕನಂತೆ.

‘ ಇಲ್ಲಿ ವಿಲಕ್ಷಣವಾದ್ದೊಂದಿದೆ. ನಾನು ಕಣ್ಣು ಮುಚ್ಚಿಕೊಂಡರೆ ಈ ಜಗದ ಚಿಕ್ಕ ಚಿಕ್ಕ ವಿವರವೂ ನನ್ನ ಕಣ್ಣು ಕಟ್ಟುತ್ತೆ. ಇವಾಗ ಅದು ನನಗೆ ಗೊತ್ತಾಗುತ್ತಿದ್ದೆ. ನಾನು ಇಲ್ಲಿಂದ ದೂರ ಇದ್ದಾಗಲೆಲ್ಲ ನನ್ನ ಮನಸ್ಸು ಇಲ್ಲಿಗೆ ಬಂದು ಹೋಗುತ್ತೆ.. ನಿನ್ನ ಕೆಂಪು ನೀಲಿ ಕುರ್ಚಿಗಳ ಸುತ್ತ ಅಡ್ಡಾಡುತ್ತೆ. ಹಣ್ಣುಗಳನ್ನು ಇಟ್ಟಿರುತ್ತಿಯಲ್ಲ ಆ ಗಾಜಿನ ಬಟ್ಟಲು ಅದನ್ನ ದಿಟ್ಟಿಸುತ್ತೆ, ಮ್ರುದುವಾಗಿ ಮುಚ್ಚಿದ ಭಾರವಾದ ಕಿಟಕಿ ಪರದೆಗಳ ಹಿಂದೆ ಅಡಗುತ್ತೆ.' ಹೀಗೆ ಮಾತನಾಡುತ್ತಾ ಅವುಗಳೆಲ್ಲದರ ಮೇಲೆ ಕಣ್ಣಾಡಿಸಿದ. ‘ಆ ನೀಲಿ ಪರದೆ ನಂಗೆ ತುಂಬ ಇಷ್ಟ’ ಖುಷಿಯಿಂದ ಗುನುಗಿದ. ಆಮೇಲೆ ಅವರಿಬ್ಬರ ಮಧ್ಯೆ ಧಿಗ್ ಎಂದು ಮೌನ ಪ್ರತ್ಯಕ್ಷವಾಯಿತು.

ಮೌನ ನಿಧಾನವಾಗಿ ಹರಡಿತು. ಸಮಾಧಾನವಾಗಿ ಹರಡಿದ್ದ ಆ ಮೌನವು ‘ಸರಿ ಇಲ್ಲಿ ಸೇರಿದೀವಿ ಕೊನೆಯಸಲ ಬಿಟ್ಟಲಿನಿಂದ ಶುರುಮಾಡದಿರಲು ಕಾರಣಗಳೇ ಇಲ್ಲವಲ್ಲ ಎಂದಿತು’
ಇಬ್ಬರೂ ಮೌನವನ್ನು ಮುರಿದರು ‘ನಾನು ಅಡುಗೆ ಮನೆ ಕ್ಲೀನ್ ಮಾಡಿ ಬರ್ತೀನಿ.' ಅವಸರಿಸಿದಳು. 'ಪೇಪರಿನ ಆ ಕಾಲಮ್ಮನ್ನು ಓದಲೇ ಇಲ್ಲ’ ಅವನು ಉಸುರಿದ.. ಇಬ್ಬರೂ ಒಬ್ಬರಿಂದೊಬ್ಬರು ತಪ್ಪಿಸಿಕೊಂಡರು. ಅವಳು ಡಬ್ಬಗಳನ್ನ ಶಲ್ಫಿನಮೇಲಿಟ್ಟು, ಸ್ಲಾಬನ್ನು ಮ್ರುದು ಗುಲಾಬಿ ಬಟ್ಟೆಯಲ್ಲಿ ಒರೆಸಿದಳು. ಬೇಗ!ಬೇಗ! ಅದು ಮತ್ತೆ ಆಗೋದನ್ನ ಅವರು ತಡೀಬೇಕು.


‘ಮತ್ತೆ , ನೀನು ಬಿಟ್ಟು ಹೊದ ಪುಸ್ತಕವನ್ನ ಓದಿದೆ’

'ಓ..ಏನನ್ಸುತ್ತೆ’ ಕೇಳಿದಳವಳು

'ಏಲ್ಲದರ ತರಾನೇ ಮ್ಮ್ಹ್ಹ್ ಹ್ಹ್ ಹ್.. ಆದ್ರೆ ಅವರದು ಸ್ವಲ್ಪ ಅವಸರ ಅನ್ನಿಸೋಲ್ವ? ತುಂಬ ನಿಜವಾಗುತ್ತಾರೆ, ತುಂಬ ಬೇಗ ಒಬ್ಬರನ್ನೊಬ್ಬರು ಒಪ್ಪಿಕೊಳ್ಳುತ್ತಾರೆ, ಒಬ್ಬರೊಳಗೊಬ್ಬರು ಇಳಿಯುತ್ತಾರೆ..ಎಲ್ಲಾ ಕಲ್ಪನೆ ನಿಜ ಜೀವನದಲ್ಲಿ ಹಾಗಾಗಲ್ಲ ಅಲ್ವ?’ ಎಂದವನ ಎದೆ ಹೊಡೆದುಕೊಳ್ಳುತ್ತಿತ್ತು.. ಅವಳ ಕೆನ್ನೆಗಳು ಬಿಸಿಯಾದವು, ಕೆಂಪಾದವು. ಒಂದುನಿಮಿಷ ಅವರೆಲ್ಲಿದ್ದಾರೆ ಏನಾಗುತ್ತಿದೆ ಗೊತ್ತಾಗಲಿಲ್ಲ ಅವಳಿಗೆ.. ಮತ್ತೆ ಸಮಯ ಸಿಗೋಲ್ಲ.. ಇಷ್ಟು ದೂರ ಬಂದಮೇಲೂ ಹಿಗೇಕಾಯಿತು? ತೊದಲಿದರು, ಅನುಮಾನಿಸಿದರು, ಸುಸ್ಥಾದರು,ಸುಮ್ಮನಾದರು.. ಸುರಿದು ಪ್ರಶ್ನಿಸುವ ಬೆಳಕಿನಲ್ಲಿ ಮತ್ತೆ ಮತ್ತೆ ಜಾಗ್ರುತರಾದರು…

ಅವಳು ತಲೆ ಎತ್ತಿದಳು ‘ಮಳೆಯಾಗುತ್ತಿದೆ ಪಿಸುಗುಟ್ಟಿದಳು’ ನನಗೆ ನೀಲಿ ಪರದೆ ಇಷ್ಟ ಎಂದವನ ಕುಷಿಯಿತ್ತು ಅದರಲ್ಲಿ.
ಆದರೆ ಅವರು ಯಾಕೆ ಹಾಗೇ ಅದನ್ನ ಘಟಿಸಲು ಬಿಡೋಲ್ಲ-ಶರಣಾಗತರಾಗೊಲ್ಲ-ಏನಾಗುತ್ತೆ ಅಂತ ನೋಡೋಲ್ಲ? ಇಲ್ಲ! ಅನಿಶ್ಚಿತವಾದ್ದ್ದನ್ನು ಕದಡಿದ್ದರು ಅವರು. ಆವರ ಸ್ನೆಹ ಅಪಾಯದಲ್ಲಿದೆ ಅನ್ನೋದನ್ನ ತಿಳಿದುಕೊಳ್ಳೋಕ್ಕೆ ಕಷ್ಟವಾಗಲಿಲ್ಲ ಅವರಿಗೆ.

ಆವನು ಮತ್ತೆ ಪೇಪರು ಮಡಿಸಿಟ್ಟ ತನ್ನ ತನ್ನ ತಲೆಗೂದಲಲ್ಲಿ ಕೈಯಾಡಿಸಿದ.. 'ನಾನೇನು ಯೋಚಿಸುತ್ತಿದ್ದೆ ಅಂದ್ರೆ ಭವಿಷ್ಯದ ಕಾದಂಬರಿ ಮನಷ್ಯಾಸ್ತ್ರದ ಕಾದಂಬರಿ ಆಗಿರುತ್ತೋ ಇಲ್ಲವೋ ಅಂತ. ಸಾಹಿತ್ಯಕ್ಕೂ ಮನಷ್ಯಾಸ್ತ್ರಕ್ಕೂ ಸಂಭಂದವಿದೆ ಅನ್ನಿಸೋಲ್ವ??'

‘ಹಾಗಾದ್ರೆ ಇವತ್ತಿನ ಯುವಬರಹಗಾರರೆಲ್ಲ ಮನಷ್ಯಾಸ್ತ್ರ ವಿಷ್ಲೇಷಣೆಗಳನ್ನ ತಮ್ಮ ಹಕ್ಕು ಅಂತ ತಿಳ್ಕೊಂಡು ವಿಷ್ಲೇಷಣೆಗೆ ಇಳಿಯುತ್ತಾರೆ ಅಂತೀಯ? 'ಅವಳು ಹುರಿಗಟ್ಟತೊಡಗಿದಳು

'ಹೌದು ಮತ್ತೆ. ಯಾಕಂದ್ರೆ ಇವತ್ತಿನ ಹುಡುಗರು ಎಷ್ಟು ಬುದ್ದಿವಂತರೆಂದರೆ ಈಗಿನ ಉಸಿರುಗಟ್ಟಿಸುವ ಕೊಳಕು, ಅಸಹ್ಯ ಸ್ಥಿತಿ ಸರಿಹೊಗಬೇಕೆಂದರೆ ಅದರ ಮೂಲಗಳಿಗೇ ಹೋಗಬೇಕೆಂಬುದನ್ನು ತಿಳಿದುಕೊಂಡಿದ್ದಾರೆ. ಅವುಗಳ ಮೂಲಗಳಿಗೆ ಹೊಗಬೇಕು, ಅವುಗಳ ಬುಡಕ್ಕೆ ಇಳಿಯಬೇಕು, ಎಲ್ಲವನ್ನೂ ವಿವರವಾಗಿ ಅಭ್ಯಸಿಸಬೇಕು ಅಲ್ಲಿಂದಲೇ ರೋಗವನ್ನ ಕಿತ್ತೆಯಬೇಕು’ ಅವನೂ ಹುರಿಗಟ್ಟತೊಡಗಿದ.

'ಆದ್ರೆ ಹ್ಮ್ಮ್ ಮ್ ಮ್ ..’ ನರಳಿದಳು 'ಎಂಥ ಭಯಾನಕ ನೀರಸ ನೋಟ ಅನ್ನಿಸುತ್ತೆ’

ಖಂಡಿತ ಇಲ್ಲ..’ಅಂದನವ 'ನೋಡಿಲ್ಲಿ.. ಏನ್ಗೊತ್ತಾ..’ ಮಾತು ಮುಂದುವರೆಯಿತು ಈಗ ನಿಜವಾಗಿ ನಾವು ಗೆದ್ದೆವೇ?’ ಅವಳ ನಗು ಹೆಳಿತು ‘ನಾವು ಗೆದ್ದೆವು..’ ಅವನ ಕಣ್ಣು ನುಡಿಯಿತು ' ಹೌದುಗೆದ್ದೆವು’
ಆದರೆ ನಗು ಹೆಚ್ಚಾಯಿತು, ನೋವಾಯಿತು ಅವರಿಗೆ ತಮಗೆ ತಾವೇ ತೊಗಲು ಬೊಂಬೆಗಳಂತೆ ಇಲ್ಲದ್ದನ್ನು ಎಳೆದಾಡುತ್ತಿದ್ದೇವೆ ಅನ್ನಿಸಿತು.
‘ನಾವೇನು ಮಾತಾಡುತ್ತಿದ್ದೆವು’ ಯೊಚಿಸಿದ ಅವನು. ಆವನಿಗೆ ಎಷ್ಟು ಖಾಲಿ ಅನಿಸಿತೆಂದರೆ ಕಣ್ಣುಗಳು ತೆರೆದಿದ್ದರೂ ಎನೂ ಕಾಣಿಸುತ್ತಿಲ್ಲ ಅನ್ನಿಸಿತು.
'ಎಂಥ ಸನ್ನಿವೇಶ ನಮ್ಮಗಳದು' ಅನ್ನಿಸಿತು ಅವಳಿಗೆ. ನಿಧಾನವಾಗಿ ನೋಡಿದಳು ಅವನನ್ನ.. ತುಂಬಾ ನಿಧಾನವಾಗಿ ಅವಳಿಗೆ ತಾನು ಯಾವುದರ ಹಿಂದೆ ಓಡುತ್ತಿದ್ದೇನೆ ಅನ್ನಿಸಿತು. ಭೀಕರ ಮೌನ ಮಧ್ಯೆ.

ಗಡಿಯಾರ ಆರು ಗಂಟೆಯಾಯಿತೆಂದು ಆಕಳಿಸಿತು. ಎಂತ ದಡ್ಡರು ಅವರು-ಭಾರವಾದ ಹಿರಿದಾದ ಬುದ್ದಿಗಳು ಅವರದು.
ಮ್ರುದುವಾದ ಸಂಗಿತದಂತೆ ಮೌನವು ಅವರನ್ನು ಸುತ್ತುವರೆಯಿತು. ಆ ಸಂಗೀತದಲ್ಲಿ ಕೋಪವಿತ್ತು.. ಕೋಪ ಅವಳಿಗೆ ಅದನ್ನು ಸಹಿಸಿಕೊಳ್ಳಲು..ಅವನಂತೂ ಸತ್ತೇ ಹೋಗುತ್ತಿದ್ದ.. ಮೌನ ಮುರಿಯಬೇಕೆನ್ನಿಸಿತವನಿಗೆ ಆದರೆ ಮಾತಿನಿಂದಲ್ಲ.. ಯಾವುದೇ ಕಾರಣದಿಂದಲೂ ಹುಚ್ಚು ಬಡಬಡಿಕೆಗಳಿಂದಲ್ಲ. ಆವರಿಬ್ಬರಿಗೂ ಬೇರೆಯದೇ ಭಾಷೆಯಿತ್ತು ಮಾತನಾಡಲು..ಆ ರೀತಿಯಲ್ಲಿ ಅವನು ಪಿಸುಗುಟ್ಟಬೆಕೆಂದುಕೊಂಡ ‘ನಿನಗೂ ಹೀಗೆಲ್ಲ ಆಗುತ್ತಾ.. ? ಇದನ್ನೆಲ್ಲಾ ಅರ್ಥ ಮಾಡ್ಕೊತೀಯ ನೀನು?’
ಆದರೆ ನಾಲಿಗೆ ಮೋಸ ಮಾಡಿತು ಅವನ ಕಿವಿಗಳು ಕೇಳಿಸಿಕೊಂಡಿದ್ದೇ ಬೇರೆ ‘ನಾನು ಹೋಗಬೇಕು ರಾಯರು ಆರುಗಂಟೆಗೆ ಬರುತ್ತೆನೆಂದಿದ್ದರು’

'ದೇವರೇ ಹೀಗ್ಯಾಕೆ ಹೇಳಿದ’ ಅವಸರವಾಗಿ ಕುರ್ಚಿಯಿಂದ ಎದ್ದಳು ‘ಹಾಗದ್ರೆ ಓಡಬೇಕು ನೀನು ರಾಯರು ತುಂಬಾ ಶಿಸ್ತು ಸಮಯಕ್ಕೆ ಸರಿಯಾಗಿ ಹೊಗದಿದ್ರೆ ಬೇಜಾರಾಗುತ್ತೆ ಅವ್ರಿಗೆ’ ಅಂತ ಅವಳು ಹೇಳೋದನ್ನ ಅವನ ಕಿವಿಗಳು ಮತ್ತೆ ಕೇಳಿಸಿಕೊಂಡವು.


'ಯಾಕೆ ಹೀಗ್ ಮಾಡಿದೆ ಹುಡುಗ? ನೋಯಿಸಿದೆ ನನ್ನ.. ನಾನು ನಿನಗೆ ಅರ್ಥವಾಗುತ್ತಿಲ್ಲವಾ.. ನಾವು ಸೋತ್ವಿ’ ಅವಳ ಹ್ರುದಯ ನುಡಿಯಿತು ಜರ್ಕಿನ್ನನ್ನು ಕೈಗೆ ಕೊಟ್ಟಳು ಸಾಕ್ಸು ಹಾಕಿಕೊಂಡ. ಒಂದೇ ಒಂದು ಮಾತಿಗು ಅವಕಾಶ ಕೊಡದೆ ಸೀದ ಹೋಗಿ ಬಾಗಿಲು ತೆರೆದಳು.
ಅವರು ಒಬ್ಬರನ್ನೊಬ್ಬರು ಆ ಸ್ಥಿತಿಯಲ್ಲಿ ಬಿಡಬಹುದಾ..?ಅವನು ಹೊಸಲಿನ ಹೊರಗೆ ನಿಂತಿದ್ದ ಅವಳು ಬಾಗಿಲನ್ನು ಹಿಡಿದುಕೊಂಡು ಒಳಗೆ. ಈಗ ಮಳೆಬರುತ್ತಿರಲಿಲ್ಲ
'ನಂಗೆ ನೋವು ಮಾಡಿದೆ ಹುಡ್ಗ. ನೋವು ಮಾಡಿದೆ ಯಕ್ ಹೋಗ್ತಿಲ್ಲ ನೀನು? ಇಲ್ಲ ಹೋಗ್ಬೇಡ,ನಿಲ್ಲು ಬೇಡ ಹೋಗು,ಇಲ್ಲ-ನಿಲ್ಲು-ಹೋಗು.' ಕಣ್ಗಳು ಕತ್ತಲನ್ನು ದಿಟ್ಟಿಸುತ್ತಾ ನುಡಿಯುತ್ತಿದ್ದವು..
ಅವಳು ಅದೆಲ್ಲವನ್ನು ನೋಡಿದಳು..ಹಸಿರು ಹೂದೋಟ ಕಪ್ಪಗಾಗುತ್ತಿರುವುದು, ದೊಡ್ಡ ಕಿಟಕಿಗಳು ನಕ್ಷತ್ರಗಳನ್ನ ತುಂಬಿಕೊಳ್ಳುತ್ತಿರುವುದು, ಆದರೆ ಅವನು ಇದ್ಯಾವುದನ್ನೂ ನೋಡುವುದಿಲ್ಲ ಅವನಿಗಿರುವುದು ಆಧ್ಯಾತ್ಮಿಕ ದ್ರುಷ್ಟಿ

ಹೌದು ಅವಳಿಗನ್ನಿಸಿತು 'ಅವನೇನನ್ನೂ ನೊಡೋಲ್ಲ. ಇಲ್ಲ, ಇನ್ನು ಸರಿ ಮಾಡೋಕ್ಕೆ ಸಾಧ್ಯವೇ ಇಲ್ಲ. ತುಂಬ ನಿಧಾನವಾಯಿತು.' ತಣ್ಣನೆಯ ಕೊರೆಯುವ ಗಾಳಿ ಬೀಸಿತು.ಧಡಾರಂತ ಬಾಗಿಲು ಮುಚ್ಚಿದಳು
ಮತ್ತೆ ರೂಮಿಗೆ ಒಡಿಹೋಗಿ ಎಷ್ಟು ವಿಚಿತ್ರವಾಗಿ ಆಡಿದಳು ಕೈಯೆತ್ತಿ ಕೂಗಿದಳು. 'ಹುಚ್ಚು!' 'ಮೂರ್ಖತನ' ಹಾಸಿಗೆಯ ಮೇಲೆ ಅಡ್ಡಾದಳು, ಮ್ರುದು ಹಾಸಿಗೆ ಮುಲುಗುಟ್ಟಿತು. ಏನನ್ನೂ ಯೋಚಿಸುತ್ತಿರಲಿಲ್ಲ ಎಲ್ಲಾ ಖಾಲಿ ಖಾಲಿ. ನಿಧಾನವಾಗಿ ಅನ್ನಿಸಲು ಶುರುವಯಿತು ಎಲ್ಲಾ ಮುಗಿಯಿತ? ಏನಾದರೂ ಉಳಿಯಿತ? ಮುಗಿದ ಅಧ್ಯಾಯವ? ಅವನನ್ನು ಯಾವತ್ತೂ ನೋಡೋದಿಲ್ಲ ಅವಳು. ಬಾಗಿಲು ಬಡಿದ ಸದ್ದಾಯಿತು ಅವನೇ ಇರಬೇಕು ಹಾಗೆ ನಿಲ್ಲಿಸಿ ಬಡಿಯುವವನು ಅವನೇ. ಮನಸು ಎದ್ದಿತು, ದೇಹ ಮಲಗೇ ಇತ್ತು.. ನಾನು ಬಾಗಿಲು ತೆಗೆಯುವುದಿಲ್ಲ ಮನಸು ಹೇಳಿತು, ದೇಹ ಎದ್ದಿತು..ಅಷ್ಟರಲ್ಲಿ ಮತ್ತೆ ದಬದಬ ಇದು ಅವನಲ್ಲ..

ಬಗಿಲು ತೆರೆದಳು ಮದುವೆಯಾಗದ ವಯಸ್ಸಾದ ಮುದುಕಿ.. ದಿನಾ ಹೀಗೆ ಬಾಗಿಲು ಬಡಿದು ತೆರೆದಾಗ ‘ಹುಡುಗಿ ನನ್ನ ಹೊರಗೋಡಿಸು’ ಅನ್ನೋ ಅಭ್ಯಾಸವಿತ್ತು ಅವಳಿಗೆ. ಆದರೆ ಅವಳು ಯಾವತ್ತೂ ಕಳಿಸುತ್ತಿರಲಿಲ್ಲ ಅವಳನ್ನು. ಅವಳ ಕೆದರಿದ ಕೂದಲನ್ನು, ಕಂದಿದ ಕಣ್ಗಳನ್ನು, ಪ್ರೀತಿಯಿಂದ ನೋಡುತ್ತಿದ್ದಳು. ಧೂಳು ಮೆತ್ತಿದ ಹೂಗಳನ್ನು ಕೊಂಡುಕೊಳ್ಳುತ್ತಿದ್ದಳು.

ಆದರೆ ಇವತ್ತು'ಅಯ್ಯೋ ಆಗೋಲ್ಲ! ಇವತ್ತು ಯಾರೊ ಇದಾರೆ ತುಂಬ ಕೆಲಸ ಇದೆ.’ 'ಪರವಾಗಿಲ್ಲ ಹುಡುಗಿ ಹೂಗಳನ್ನ ಇಲ್ಲಿಟ್ಟು ಹೋಗಿರುತ್ತೇನೆ’ ನುಡಿದಳು ಅಜ್ಜಿ
ಅಜ್ಜಿ ಹೋಗತೊಡಗಿದಳು ಮತ್ತೆ ಅವೆಲ್ಲಾ ಕಾಣಿಸಿದವು.. ಕಪ್ಪು ಹೂದೋಟ, ನಕ್ಷತ್ರ ತುಂಬಿದ ಕಿಟಕಿ.. ಆದರೆ ಈಗ ಅವಳು ತಪ್ಪು ಮಾಡಲಿಲ್ಲ ಹೋಗಿ ತಬ್ಬಿಕೊಂಡಳು. ಆ ಅಜ್ಜಿ 'ಏನು ಅಲ್ಲ ಅವು ಕಡಿಮೆ ಬೆಲೆಯ ಹೂಗಳು’ ಅಂದಳು.ಇವಳು ಖುಷಿಯಾಗಿ ಹಣೆಗೆ ಮುತ್ತಿಟ್ಟಳು ‘ಹಾಗಾದರೆ ನಾ ಬಂದಿದ್ದು ನಿನಗೆ ನಿಜವಾಗಲೂ ಬೇಜಾರಿಲ್ಲವ’
'ಗುಡ್ ನೈಟ್ ಅಜ್ಜಿ' ಪಿಸುಗುಟ್ಟಿದಳು 'ಮತ್ತೆ ಮತ್ತೆ ಬಾ..’

ಈಗ ನಿಧಾನವಾಗಿ ಬಾಗಿಲು ಹಾಕಿದಳು ಸಾವಧಾನವಾಗಿ ರೂಮಿಗೆ ಹೋಗಿ ಕಣ್ಣು ಮುಚ್ಚಿ ನಿಂತರೆ 'ಎಷ್ಟು ಹಗುರವಾಗಿದ್ದೇನೆ'ಅನ್ನಿಸಿತು. ಮುಗ್ದ ನಿದ್ದೆಯನ್ನು ಮಾಡಿ ಮುಗಿಸಿದಂತೆ.ಉಸಿರಾಟವೂ ಖುಷಿ ಎನಿಸುತ್ತಿತ್ತು.

ಹರಡಿದ್ದೆಲ್ಲವನ್ನು ಜೋಡಿಸಿದಳು. ಪಾತ್ರೆ ತೊಳೆದಳು. ಬರೆಯೋಕ್ಕೆ ಹೋಗೋ ಮುಂಚೆ ಕೆಂಪು ನೀಲಿ ಕುರ್ಚಿಗಳನ್ನ, ನೀಲಿ ಪರದೆಗಳನ್ನ ಸರಿಮಾಡಿದಳು. ಹಣ್ಣುಗಳನ್ನ ಗಾಜಿನ ಬಟ್ಟಲಲ್ಲಿ ತುಂಬಿದಳು
‘ನಾನು ಆ ಮನಶ್ಯಾಸ್ತ್ರದ ಕಾದಂಬರಿಯ ಬಗ್ಗೆ ಯೋಚಿಸುತ್ತಿದ್ದೆ…’ಬರೆದೇ ಬರೆದಳು. 'ನಿಜವಾಗಲೂ ಎಷ್ಟು ಆಶ್ಚರ್ಯ ಅಲ್ವಾ…’ ಕೊನೆಗೆ ಕಪ್ಪು ಇಂಕು ಬರೆಯುತ್ತಿದ್ದುದು ಕಾಣಿಸಿತು 'ಗುಡ್ ನೈಟ್ ಸ್ನೇಹವೇ.. ಮತ್ತೆ ಮತ್ತೆ ಬಾ..'




(ಕ್ಯಾಥರೀನ್ ಮ್ಯಾನ್ಸ್-ಫೀಲ್ಡ್ ಬರೆದ psychology ಕತೆಯಿಂದ ಸ್ಪೂರ್ತಿಗೊಂಡು ಬರೆದ ಕತೆ)

23 comments:

ಗಿರೀಶ್ ರಾವ್, ಎಚ್ (ಜೋಗಿ) said...

ಕೆಥರೀನ್ ಮ್ಯಾನ್ಸ್ ಫೀಲ್ಡ್ ಕತೆಯನ್ನು ಕನ್ನಡಕ್ಕೆ ತಂದದ್ದು ಖುಷಿಯಾಯಿತು. ಕನ್ನಡದಲ್ಲಿ ರಾಜಲಕ್ಷ್ಮೀ ಎನ್ ರಾವ್ ಎಂಬಾಕೆ ಇಂಥ ಕತೆಗಳನ್ನು ಬರೆಯುತ್ತಿದ್ದರು. ನನಗೀ ಕತೆ ಓದಿದ್ದು ನೆನಪಾಗುತ್ತಿಲ್ಲ. ಆದರೆ, ಅವಳ ಕತೆಗಳ ಭಾವ ನನಗೆಲ ಪರಿಚಿತ. ಆ ಭಾವ ಇಲ್ಲಿ ಹಾಗೇ ಪಡಿಮೂಡಿದೆ ಅಂತ ಖುಷಿಯಾಯಿತು. ಕೆಥರೀನ್ ಕತೆ ಹೇಳುವುದಿಲ್ಲ, ಒಂದು ಪರಿಸರವನ್ನು ಭಾವಲೋಕವನ್ನು ಕಟ್ಟಿಕೊಡುವ ಮೂಲಕ ನಮ್ಮನ್ನು ತನ್ನ ಕಥಾಜಗತ್ತಿನೊಳಗೆ ಬಿಟ್ಟುಕೊಳ್ಳುತ್ತಾಳೆ. ಈ ಕತೆಯೂ ಅಂಥದ್ದೇ ಕೆಲಸ ಮಾಡಿದೆ.
-ಜೋಗಿ

ಮೃಗನಯನೀ said...

ಧನ್ಯವಾದಗಳು ಸರ್ ..ಹೀಗೆ ಗಮನಿಸುತ್ತಿರಿ ಸರಿಯಾಗಿ ಬರೆಯದಿದ್ದಾಗ ಗದರುತ್ತಿರಿ.ಅವಳ ಕತೆಗಳನ್ನ ಓದುವುದೇ ವಿಷೇಶ ಅನುಭವ. ಅವಳು ತನ್ನ 35ದನೇ ವಯಸ್ಸಿಗೇ ತೀರಿ ಹೋಗಿದ್ದು ಗೊತ್ತಾದಾಗ ತುಂಬ ಬೇಜಾರ್ ಆಯ್ತು

ARUN MANIPAL said...

"ಮೈದಾನದ ಎರಡು ಬದಿಗಳಲ್ಲಿರುವ ದೊಡ್ಡ ನಗರಗಳಂತೆ, ಅವರ ಮನಸುಗಳು ಒಬ್ಬರಿಗೊಬ್ಬರಿಗೆ ತೆರೆಯಲ್ಪಟ್ಟಿದ್ದವು".
:-) ಚೆಂದಾಗಿದೆ ಸಾಲುಗಳು.....

ARUN MANIPAL said...

ಮ್ರಗನಯನೀ,ನನ್ ಬ್ಲಾಗ್ ನೋಡ್ತೀಯಾ ಪ್ಲೀಸ್...;-)

ಮೃಗನಯನೀ said...

@Arun
ಧನ್ಯವಾದಗಳು.. ಖಂಡಿತ ನೋಡ್ತೀನಿ

ಶ್ರೀನಿಧಿ.ಡಿ.ಎಸ್ said...

spelling mistakes sari madkoLod yavaga neenu? :-/. che!:(

ವಿಜಯ್ ಜೋಶಿ said...

ಈ ಥರದ ಕಥೆಗಳನ್ನು ಹೇಗೆ ಬರೀತೀಯಾ ಮಾರಾಯ್ತಿ? ನಂಗೂ ಸ್ವಲ್ಪ ಕಲ್ಸಿ ಕೊಡು. ನಾನು ಕಥೆ ಬರೆಯೋದಿಲ್ಲಾ ಅಂತಾನೆ ಜನ ನನ್ನ ಬ್ಲಾಗ್ ನೋಡ್ತಾನೆ ಇಲ್ಲಾ ಅನ್ಸತ್ತೆ.
ನಿನ್ ಸ್ನೇಹಿತರ ಹತ್ರ ನನ್ ಬ್ಲಾಗನ್ನೂ ಒಮ್ಮೆ ನೋಡೋಕೆ ಹೇಳು..
ಕಥೆ ಚೆನ್ನಾಗಿದೆ... ಹೀಗೆ ಬರೀತಾ ಇರು...

Anonymous said...

ಮೌನ ನಿಧಾನವಾಗಿ ಹರಡಿತು. ಸಮಾಧಾನವಾಗಿ ಹರಡಿದ್ದ ಆ ಮೌನವು ‘ಸರಿ ಇಲ್ಲಿ ಸೇರಿದೀವಿ ಕೊನೆಯಸಲ ಬಿಟ್ಟಲಿನಿಂದ ಶುರುಮಾಡದಿರಲು ಕಾರಣಗಳೇ ಇಲ್ಲವಲ್ಲ ಎಂದಿತು’
ಈ ಸಾಲುಗಳು ಖುಷಿಕೊಟ್ಟವು...
ಚೆನ್ನಾಗಿದೆ...
ಹರೀಶ್ ಕೆ. ಆದೂರು.

Shree said...

yeenri ishtu channagi bariyakke yaradri inspiration swalpa helri navu avara kalige adbiddu ond_eardu akshara kalithiviri nimd stories yadyadu paper nalli barthide anta thilitu swalpa yadralli anta heli navu nodthivi replay madri pleas..... bye

Unknown said...

ree enri nimma narration, abservation and minute details-nna neevu dakhaliso reethi... vah.. nimmanthoru kannadada nastologic halhalikeyalle susthada odugarige fresh agi kaanthiri.. neevyake pathrikegalige kathe kalisolla... ?
kalisi please.... ella odugarigu kathe odo khushi sigali...

ಮೃಗನಯನೀ said...

@ ಶ್ರೀನಿ..

ಸರಿ ಮಾಡ್ಕೊತೀನಿ ಕಣೋ ಬೈಬೇಡ

@ ವಿಜಯ್
ನಿಂಗೇನ್ ಕಲ್ಸಿಕೊಡೋದೋ... u r master in writing... however thanks. ಹಾ ಖಂಡಿತ ನನ್ನ ಸ್ನೇಹಿತರಿಗೆ ನಿನ್ನ ಬ್ಲಾಗ್ ನೋಡೋಕ್ಕೆ ಹೇಳ್ತೆ.

ಮೃಗನಯನೀ said...

@Agni

ಧನ್ಯವಾದಗಳು..

@Shashi.

ಧನ್ಯವಾದಗಳು ಶಶಿ... ಖಂಡಿತ ಕಳಿಸ್ತೀನಿ.... all ur appriciation forces me to write more

Shree said...

yenu bari thanks helidre ayte please give answer to my question

Unknown said...

Fire Brand AGNI Kelida prashnege uttara kOdi Pls.
-MaLe

ಮೃಗನಯನೀ said...

@Agni nd Chitraguptha

ಹಾಗೆ ಹೇಳಿಕೊಳ್ಳುವಂತದ್ದು ಏನಾದರೂ ಇದ್ದರೆ ಹೆಳುತ್ತೇನೆ ಸದ್ಯಕ್ಕೆ ಎನೂ ಇಲ್ಲ

PRANJALE said...

thumba chennagide. haage, badalavanegalu gottagthide. khushi aaythu.

ನಾವಡ said...

ಮೃಗನಯನೀ ಅವರೇ,
ಕಥೆ ಚೆನ್ನಾಗಿದೆ. ಹೊಸ ರೀತಿಯ ಅನುಭವ ನೀಡುವ ಕಥೆ. ಖುಶಿ ನೀಡಿತು. ಇಂಥ ವಿಶಿಷ್ಟ ಅನುಭವದ ಕಥೆಗಳಿಗೆಂದೇ ಇಲ್ಲಿಗೆ ಬರ್ತೀನಿ.
ಧನ್ಯವಾದಗಳೊಂದಿಗೆ
ನಾವಡ

ಮೃಗನಯನೀ said...

@ಪ್ರಾಂಜಲೆ
thnx ಕಣೋ

@ನಾವಡ
ಧನ್ಯವಾದಗಳು. ಮತ್ತೆ ಮತ್ತೆ ಬನ್ನಿ....;-)

Vens said...

Hi nimma ee kathe swalpa odide.. kalu baga odide aamele odkakke aagalilla.. tumba ikkattu anisitu .., Huh ee tarada kathe odo patience illadagide.. next time odona antha iddene..by the way im newly entering and reading blogs... fine i wuld like to know how to write in kannada here in comments... pls tell me im asking many here...regards
venkatesh

Unknown said...

go to baraha direct nd type you can type comments in kannada

sunaath said...

ಬಹಳ ದಿನಗಳ ನಂತರ ಒಂದು ಒಳ್ಳೆ ಕತೆ ಓದಿದೆ. ದಯವಿಟ್ಟು spelling mistakes ಮಾಡಬೇಡಿ.

Shree said...

yellru yava school odiddu anta next keelthare please avoid spelling mistakes

Hema Powar said...

Dear Mruganayani,
your blog is very good. I just felt that your writings are very similar to a writer of Vijaya Karnataka. It is just a simple guess of mine that it could be you. Please let me know whether i am right or not?